ಕ್ರೀಡೆ

IPL 2024: ಪಂಜಾಬ್‌ ವಿರುದ್ಧ ಸಿಎಸ್‌ಕೆಗೆ ಸುಲಭ ಗೆಲುವು

ಧರ್ಮಾಶಾಲಾ: ರವೀಂದ್ರ ಜಡೇಜಾ ಆಲ್‌ರೌಂಡರ್‌ ಆಟದ ಫಲವಾಗಿ ಚೆನ್ನೈಸೂಪರ್‌ ಕಿಂಗ್ಸ್‌ ತಂಡಕ್ಕೆ ಪಂಜಾಬ್‌ ಕಿಂಗ್ಸ್‌ ವಿರುದ್ಧ ಸುಲಭದ ಗೆಲುವು ದಕ್ಕಿದೆ. ಆ ಮೂಲಕ ಕಳೆದ ಮೂರು ಸೀಸನ್‌ಗಳ ಬಳಿಕ ಪಂಜಾಬ್‌ ವಿರುದ್ಧ ಸಿಎಸ್‌ಕೆ ಮೊದಲ ಗೆಲುವು ದಾಖಲಿಸಿದೆ.

ಇಲ್ಲಿನ ಹಿಮಾಚಲ ಪ್ರದೇಶ ಮೈದಾನದಲ್ಲಿ ನಡೆದ ಐಪಿಎಲ್‌ ಸೀಸನ್‌ 53ನೇ ಪಂದ್ಯದಲ್ಲಿ ಸಿಎಸ್‌ಕೆ ಹಾಗೂ ಪಿಬಿಎಸ್‌ಕೆ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 167ರನ್‌ ಗಳಿಸಿ 168 ರನ್‌ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಪಂಜಾಬ್‌ 20ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 139ರನ್‌ ಗಳಿಸಿ 28 ರನ್‌ಗಳ ಅಂತರದಿಂದ ಸೋಲನುಭವಿಸಿತು.

ಚೆನ್ನೈ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಚೆನ್ನೈಗೆ ರಹಾನೆ ಮತ್ತೊಮ್ಮೆ ನೀರಸ ಪ್ರದರ್ಶನ ನೀಡಿದರು. ರಹಾನೆ 9(7) ಬೇಗನೇ ವಿಕೆಟ್‌ ಒಪ್ಪಿಸಿ ಹೊರನಡೆದರು. ಬಳಿಕ ಜತೆಯಾದ ಋತುರಾಜ್‌ ಗಾಯಕ್ವಾಡ್‌ 32(21) ಹಾಗೂ ಡೆರೆಲ್‌ ಮಿಚೆಲ್‌ 30(19) ಚೇತರಿಕೆ ಆಟವಾಡಿದರು. ಶಿವಂ ದುಬೆ ಶೂನ್ಯಕ್ಕೆ ಔಟಾದರೇ, ಮೋಯಿನ್‌ ಅಲಿ 17(20) ರನ್‌ ಬಾರಿಸಿದರು. ತಂಡ ಸಂಕಷ್ಟದ ಸಮಯದಲ್ಲಿದ್ದಾಗ ಬಂದು ಜಾಣ್ಮೆಯಿಂದ ಬ್ಯಾಟ್‌ ಬೀಸಿದ ಆಲ್‌ರೌಂಡರ್‌ ಜಡೇಜಾ 26ಎಸೆತ 3ಬೌಂಡರಿ ಹಾಗೂ 2 ಸಿಕ್ಸರ್‌ ಸಹಿತ 43 ರನ್‌ಗಳಿಸಿ ತಂಡಕ್ಕೆ ಆಸರೆಯಾದರು. ಉಳಿದಂತೆ ಸ್ಯಾಂಟ್ನರ್‌ 11(11), ಠಾಕೂರ್‌ 17(11), ಧೋನಿ ಶೂನ್ಯ ಸಂಪಾದಿಸಿದರು. ಗ್ಲೇಸನ್‌ 2(2) ರನ್‌ ಕಲೆಹಾಕಿದರು.

ಪಂಜಾಬ್‌ ಪರ ರಾಹುಲ್‌ ಚಾಹರ್‌ ಹಾಗೂ ಹರ್ಷಲ್‌ ಪಟೇಲ್‌ ತಲಾ 3, ಅರ್ಷದೀಪ್‌ ಸಿಂಗ್‌ 2 ಹಾಗೂ ಕರನ್‌ ಒಂದು ವಿಕೆಟ್‌ ಪಡೆದು ಮಿಂಚಿದರು.

ಪಂಜಾಬ್‌ ಇನ್ನಿಂಗ್ಸ್‌: ತನ್ನ ತವರಿನಂಗಳದಲ್ಲಿ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಪಂಜಾಬ್‌ಗೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಜಾನಿ ಬೇರ್‌ಸ್ಟೋ 7(6), ರೂಸೋ ಶೂನ್ಯಕ್ಕೆ ಔಟಾದರು. ಪ್ರಬ್‌ಸಿಮ್ರಾನ್‌ 30(23) ಹಾಗೂ ಶಶಾಂಕ್‌ ಸಿಂಗ್‌ 27(20) ರನ್‌ ಬಾರಿಸಿ ಔಟಾದರು. ಬಳಿಕ ಬಂದ ಬೇರಾರಿಂದಲೂ ಗೆಲುವಿನ ಆಟ ಕಂಡು ಬರಲಿಲ್ಲ. ನಾಯಕ ಕರನ್‌ 7(11), ಜಿತೇಶ್‌ ಶರ್ಮಾ ಶೂನ್ಯ, ಅಶುತೋಷ್‌ ಶರ್ಮಾ 3(10), ಹರ್ಪ್ರೀತ್‌ ಬ್ರಾರ್‌ 17(13), ಹರ್ಷಲ್‌ ಪಟೇಲ್‌ 12(13), ರಾಹುಲ್‌ ಚಾಹರ್ 16(10) ಹಾಗೂ ರಬಾಡ 11(10) ರನ್‌ ಬಾರಿಸಿಯೂ ಕಡಿಮೆ ಮೊತ್ತ ಬೆನ್ನತ್ತುವಲ್ಲಿ ಪಂಜಾಬ್‌ ವಿಫಲವಾಯಿತು.

ಸಿಎಸ್‌ಕೆ ಪರ ಜಡೇಜಾ 3, ಸಮರ್‌ಜಿತ್‌ ಸಿಂಗ್‌ ಹಾಗೂ ತಷಾರ್‌ ದೇಶ್‌ಪಾಂಡೆ ತಲಾ 2, ಮಿಚೆಲ್‌ ಸ್ಯಾಂಟ್ನರ್‌ ಹಾಗೂ ಶಾರ್ದುಲ್‌ ಠಾಕೂರ್‌ ತಲಾ ಒಂದೊಂದು ವಿಕೆಟ್ ಪಡೆದು ಗಮನಸೆಳೆದರು.

ಪಂದ್ಯ ಶ್ರೇಷ್ಠ: ರವೀಂದ್ರ ಜಡೇಜಾ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago