ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಂಘಟಿತ ಬ್ಯಾಟಿಂಗ್, ಬೌಲಿಂಗ್ ದಾಳಿಗೆ ನಲುಗಿದ ಸನ್ರೈಸರ್ಸ್ ಹೈದರಾಬಾದ್ ತಂಡ 78 ರನ್ಗಳ ಅಂತರದ ಹೀನಾಯ ಸೋಲು ಕಂಡಿದೆ.
ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಲೀಗ್ 46ನೇ ಪಂದ್ಯದಲ್ಲಿ ಸಿಎಸ್ಕೆ ಮತ್ತು ಎಸ್ಆರ್ಎಚ್ ತಂಡಗಳು ಮುಖಾಮುಖಿಯಾಗಿದ್ದವು. ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ, ನಾಯಕ ಋತುರಾಜ್ ಅವರ ಬ್ಯಾಟಿಂಗ್ ಬಲದಿಂದ ತವರಿನಂಗಳದಲ್ಲಿ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 212 ರನ್ ಕಲೆಹಾಕಿ, 213ರನ್ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಎಸ್ಆರ್ಎಚ್ 18.5 ಓವರ್ನಲ್ಲಿ ಆಲ್ಔಟ್ ಆಗುವ ಮೂಲಕ 134 ರನ್ ಗಳಿಸಲಷ್ಟೆ ಶಕ್ತರಾಯಿತು.
ಸಿಎಸ್ಕೆ ಇನ್ನಿಂಗ್ಸ್: ಪೇ ಬ್ಯಾಕ್ ವೀಕ್ನಲ್ಲಿ ಸಿಎಸ್ಕೆ, ಎಸ್ಆರ್ಎಚ್ ವಿರುದ್ಧ ಬೌನ್ಸ್ ಬ್ಯಾಕ್ ಮಾಡಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡಕ್ಕೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಆರಂಭಿಕರಾಗಿ ಬಂದ ರಹಾನೆ 9 ರನ್ ಬಾರಿಸಿ ಬಂದ ವೇಗದಲ್ಲೇ ಪೆವಿಲಿಯನ್ ಸೇರಿದರು. ಬಳಿಕ ಜೊತೆಯಾದ ನಾಯಕ ಋತುರಾಜ್ ಗಾಯಕ್ವಾಡ್ ಹಾಗೂ ಡೇರಿಯಲ್ ಮಿಚೆಲ್ ಶತಕದ ಜತೆಯಾಟ ನೀಡಿ ಸೂಪರ್ ಕಿಂಗ್ಸ್ಗೆ ಚೇತರಿಕೆ ನೀಡಿದರು.
ಡೇರಿಯಲ್ ಮಿಚೆಲ್ 52(32)ರನ್ ಗಳಿಸಿ ವಿಕೆಟ್ ಒಪ್ಪಿಸಿ ಹೊರ ನಡೆದರು. ಆದರೆ ಆರಂಭದಿಂದಲೂ ಉತ್ತಮ ಆಟ ಪ್ರದರ್ಶಿಸಿದ ನಾಯಕ ಋತುರಾಜ್ ಎರಡು ರನ್ಗಳ ಅಂತರದಿಂದ ಶತಕ ವಂಚಿತರಾದರು. ಇವರು 54 ಎಸೆತ ಎದುರಿಸಿ 10ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 98 ರನ್ ಚಚ್ಚಿ ಓಟಾದರು. ಉಳಿದಂತೆ ಔಟಾಗದೆ ಶಿವಂ ದುಬೆ 39(20) ಹಾಗೂ ಧೋನಿ 5(2) ರನ್ ಬಾರಿಸಿದರು.
ಹೈದರಬಾದ್ ಪರ ಭುವನೇಶ್ವರ್, ನಟರಾಜನ್ ಮತು ಉನಾದ್ಕಟ್ ತಲಾ ಒಂದೊಂದು ವಿಕೆಟ್ ಪಡೆದು ಗಮನ ಸೆಳೆದರು.
ಎಸ್ಆರ್ಎಚ್ ಇನ್ನಿಂಗ್ಸ್: ಸಿಎಸ್ಕೆ ನೀಡಿದ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಹೈದರಬಾದ್ಗೆ ಉತ್ತಮ ಆರಂಭ ಸಿಗಲಿಲ್ಲ. ಪವರ್ ಪ್ಲೇ ನಲ್ಲೇ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಎಸ್ಆರ್ಎಚ್ ಸಂಕಷ್ಟಕ್ಕೆ ಸಿಲುಕಿತು. ಆರಂಭಿಕರಾಗಿ ಬಂದ ಟ್ರಾವಿಸ್ ಹೆಡ್ 13(7), ಅಭಿಷೇಕ್ ಶರ್ಮಾ 15(9) ರನ್ ಕಲೆಹಾಕಿ ಬೇಗನೇ ಪೆವಿಲಿಯನ್ ಸೇರಿದರು. ಅನ್ಮೋಲ್ಪ್ರೀತ್ ಸಿಂಗ್ ಶೂನ್ಯಕ್ಕೆ ಔಟಾದರು. ಎಸ್ಆರ್ಎಚ್ ಪವರ್ ಪ್ಲೇನಲ್ಲಿ 53ರನ್ಗೆ ಪ್ರಮುಖ 3ವಿಕೆಟ್ ಕಳೆದುಕೊಂಡು ಮುಗ್ಗರಿಸಿತು. ಬಳಿಕ ಬಂದ ಮಾರ್ಕ್ರಂ 32(26) ರನ್ ಬಾರಿಸಿದರು. ಈ ಇನ್ನಿಂಗ್ಸ್ನಲ್ಲಿ ಮಾರ್ಕ್ರಂ ಗಳಿಸಿದ್ದೇ ಎಸ್ಆರ್ಎಚ್ ಪರವಾಗಿ ಗರಿಷ್ಠ ರನ್ ಆಗಿತ್ತು.
ಉಳಿದಂತೆ ನಿತೀಶ್ ರೆಡ್ಡಿ 15(15), ಕ್ಲಾಸೆನ್ 20(21), ಅಬ್ದುಲ್ ಸಮದ್ 19(18), ಷಹಬಾಜ್ ಅಹ್ಮದ್ 7(5), ನಾಯಕ ಕಮಿನ್ಸ್ 5(7) ಭುವನೇಶ್ವರ್ ಕುಮಾರ್ ಔಟಾಗದೇ 4(3) ಮತ್ತು ಜೈದೇವ್ ಉನಾದ್ಕಟ್ 1(2) ರನ್ ಬಾರಿಸಿ ಸಿಎಸ್ಕೆ ವಿರುದ್ಧ ಮಂಡಿಯೂರಿತು.
ಸಿಎಸ್ಕೆ ಪರ ತುಷಾರ್ ದೇಶ್ಪಾಂಡೆ 4, ಮತೀಶ ಪತಿರಣ ಹಾಗೂ ಮುಸ್ತಿಫಿಜುರ್ ತಲಾ ಎರಡೆರೆಡು ವಿಕೆಟ್ ಕಬಳಿಸಿದರು. ರವೀಂದ್ರ ಜಡೇಜಾ, ಶಾರ್ದುಲ್ ಠಾಕೂರ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…