ಕ್ರೀಡೆ

IPL 2024: ಸಿಎಸ್‌ಕೆ ಎದುರು ಮಂಡಿಯೂರಿದ ಹೈದರಾಬಾದ್‌

ಚೆನ್ನೈ: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಸಂಘಟಿತ ಬ್ಯಾಟಿಂಗ್‌, ಬೌಲಿಂಗ್‌ ದಾಳಿಗೆ ನಲುಗಿದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ 78 ರನ್‌ಗಳ ಅಂತರದ ಹೀನಾಯ ಸೋಲು ಕಂಡಿದೆ.

ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ ಲೀಗ್‌ 46ನೇ ಪಂದ್ಯದಲ್ಲಿ ಸಿಎಸ್‌ಕೆ ಮತ್ತು ಎಸ್‌ಆರ್‌ಎಚ್‌ ತಂಡಗಳು ಮುಖಾಮುಖಿಯಾಗಿದ್ದವು. ಇನ್ನು ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಸಿಎಸ್‌ಕೆ, ನಾಯಕ ಋತುರಾಜ್‌ ಅವರ ಬ್ಯಾಟಿಂಗ್‌ ಬಲದಿಂದ ತವರಿನಂಗಳದಲ್ಲಿ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 212 ರನ್‌ ಕಲೆಹಾಕಿ, 213ರನ್‌ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಎಸ್‌ಆರ್‌ಎಚ್‌ 18.5 ಓವರ್‌ನಲ್ಲಿ ಆಲ್‌ಔಟ್‌ ಆಗುವ ಮೂಲಕ 134 ರನ್‌ ಗಳಿಸಲಷ್ಟೆ ಶಕ್ತರಾಯಿತು.

ಸಿಎಸ್‌ಕೆ ಇನ್ನಿಂಗ್ಸ್‌: ಪೇ ಬ್ಯಾಕ್‌ ವೀಕ್‌ನಲ್ಲಿ ಸಿಎಸ್‌ಕೆ, ಎಸ್‌ಆರ್‌ಎಚ್‌ ವಿರುದ್ಧ ಬೌನ್ಸ್‌ ಬ್ಯಾಕ್‌ ಮಾಡಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಸಿಎಸ್‌ಕೆ ತಂಡಕ್ಕೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಆರಂಭಿಕರಾಗಿ ಬಂದ ರಹಾನೆ 9 ರನ್ ಬಾರಿಸಿ ಬಂದ ವೇಗದಲ್ಲೇ ಪೆವಿಲಿಯನ್‌ ಸೇರಿದರು. ಬಳಿಕ ಜೊತೆಯಾದ ನಾಯಕ ಋತುರಾಜ್‌ ಗಾಯಕ್ವಾಡ್‌ ಹಾಗೂ ಡೇರಿಯಲ್‌ ಮಿಚೆಲ್‌ ಶತಕದ ಜತೆಯಾಟ ನೀಡಿ ಸೂಪರ್‌ ಕಿಂಗ್ಸ್‌ಗೆ ಚೇತರಿಕೆ ನೀಡಿದರು.

ಡೇರಿಯಲ್‌ ಮಿಚೆಲ್‌ 52(32)ರನ್‌ ಗಳಿಸಿ ವಿಕೆಟ್‌ ಒಪ್ಪಿಸಿ ಹೊರ ನಡೆದರು. ಆದರೆ ಆರಂಭದಿಂದಲೂ ಉತ್ತಮ ಆಟ ಪ್ರದರ್ಶಿಸಿದ ನಾಯಕ ಋತುರಾಜ್‌ ಎರಡು ರನ್‌ಗಳ ಅಂತರದಿಂದ ಶತಕ ವಂಚಿತರಾದರು. ಇವರು 54 ಎಸೆತ ಎದುರಿಸಿ 10ಬೌಂಡರಿ ಹಾಗೂ 3 ಸಿಕ್ಸರ್‌ ಸಹಿತ 98 ರನ್‌ ಚಚ್ಚಿ ಓಟಾದರು. ಉಳಿದಂತೆ ಔಟಾಗದೆ ಶಿವಂ ದುಬೆ 39(20) ಹಾಗೂ ಧೋನಿ 5(2) ರನ್‌ ಬಾರಿಸಿದರು.

ಹೈದರಬಾದ್‌ ಪರ ಭುವನೇಶ್ವರ್‌, ನಟರಾಜನ್‌ ಮತು ಉನಾದ್ಕಟ್‌ ತಲಾ ಒಂದೊಂದು ವಿಕೆಟ್‌ ಪಡೆದು ಗಮನ ಸೆಳೆದರು.

ಎಸ್‌ಆರ್‌ಎಚ್‌ ಇನ್ನಿಂಗ್ಸ್‌: ಸಿಎಸ್‌ಕೆ ನೀಡಿದ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಹೈದರಬಾದ್‌ಗೆ ಉತ್ತಮ ಆರಂಭ ಸಿಗಲಿಲ್ಲ. ಪವರ್‌ ಪ್ಲೇ ನಲ್ಲೇ ಪ್ರಮುಖ ಮೂರು ವಿಕೆಟ್‌ ಕಳೆದುಕೊಂಡು ಎಸ್‌ಆರ್‌ಎಚ್‌ ಸಂಕಷ್ಟಕ್ಕೆ ಸಿಲುಕಿತು. ಆರಂಭಿಕರಾಗಿ ಬಂದ ಟ್ರಾವಿಸ್‌ ಹೆಡ್‌ 13(7), ಅಭಿಷೇಕ್‌ ಶರ್ಮಾ 15(9) ರನ್‌ ಕಲೆಹಾಕಿ ಬೇಗನೇ ಪೆವಿಲಿಯನ್‌ ಸೇರಿದರು. ಅನ್ಮೋಲ್‌ಪ್ರೀತ್‌ ಸಿಂಗ್‌ ಶೂನ್ಯಕ್ಕೆ ಔಟಾದರು. ಎಸ್‌ಆರ್‌ಎಚ್‌ ಪವರ್‌ ಪ್ಲೇನಲ್ಲಿ 53ರನ್‌ಗೆ ಪ್ರಮುಖ 3ವಿಕೆಟ್‌ ಕಳೆದುಕೊಂಡು ಮುಗ್ಗರಿಸಿತು. ಬಳಿಕ ಬಂದ ಮಾರ್ಕ್ರಂ 32(26) ರನ್‌ ಬಾರಿಸಿದರು. ಈ ಇನ್ನಿಂಗ್ಸ್‌ನಲ್ಲಿ ಮಾರ್ಕ್ರಂ ಗಳಿಸಿದ್ದೇ ಎಸ್‌ಆರ್‌ಎಚ್‌ ಪರವಾಗಿ ಗರಿಷ್ಠ ರನ್‌ ಆಗಿತ್ತು.

ಉಳಿದಂತೆ ನಿತೀಶ್‌ ರೆಡ್ಡಿ 15(15), ಕ್ಲಾಸೆನ್‌ 20(21), ಅಬ್ದುಲ್‌ ಸಮದ್‌ 19(18), ಷಹಬಾಜ್‌ ಅಹ್ಮದ್‌ 7(5), ನಾಯಕ ಕಮಿನ್ಸ್‌ 5(7) ಭುವನೇಶ್ವರ್‌ ಕುಮಾರ್‌ ಔಟಾಗದೇ 4(3) ಮತ್ತು ಜೈದೇವ್‌ ಉನಾದ್ಕಟ್‌ 1(2) ರನ್‌ ಬಾರಿಸಿ ಸಿಎಸ್‌ಕೆ ವಿರುದ್ಧ ಮಂಡಿಯೂರಿತು.

ಸಿಎಸ್‌ಕೆ ಪರ ತುಷಾರ್‌ ದೇಶ್‌ಪಾಂಡೆ 4, ಮತೀಶ ಪತಿರಣ ಹಾಗೂ ಮುಸ್ತಿಫಿಜುರ್‌ ತಲಾ ಎರಡೆರೆಡು ವಿಕೆಟ್‌ ಕಬಳಿಸಿದರು. ರವೀಂದ್ರ ಜಡೇಜಾ, ಶಾರ್ದುಲ್‌ ಠಾಕೂರ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

5 hours ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

6 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

6 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

6 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

7 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

7 hours ago