ಕ್ರೀಡೆ

IPL 2024: ಸಿಎಸ್‌ಕೆ ಎದುರು ಮಂಡಿಯೂರಿದ ಹೈದರಾಬಾದ್‌

ಚೆನ್ನೈ: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಸಂಘಟಿತ ಬ್ಯಾಟಿಂಗ್‌, ಬೌಲಿಂಗ್‌ ದಾಳಿಗೆ ನಲುಗಿದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ 78 ರನ್‌ಗಳ ಅಂತರದ ಹೀನಾಯ ಸೋಲು ಕಂಡಿದೆ.

ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ ಲೀಗ್‌ 46ನೇ ಪಂದ್ಯದಲ್ಲಿ ಸಿಎಸ್‌ಕೆ ಮತ್ತು ಎಸ್‌ಆರ್‌ಎಚ್‌ ತಂಡಗಳು ಮುಖಾಮುಖಿಯಾಗಿದ್ದವು. ಇನ್ನು ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಸಿಎಸ್‌ಕೆ, ನಾಯಕ ಋತುರಾಜ್‌ ಅವರ ಬ್ಯಾಟಿಂಗ್‌ ಬಲದಿಂದ ತವರಿನಂಗಳದಲ್ಲಿ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 212 ರನ್‌ ಕಲೆಹಾಕಿ, 213ರನ್‌ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಎಸ್‌ಆರ್‌ಎಚ್‌ 18.5 ಓವರ್‌ನಲ್ಲಿ ಆಲ್‌ಔಟ್‌ ಆಗುವ ಮೂಲಕ 134 ರನ್‌ ಗಳಿಸಲಷ್ಟೆ ಶಕ್ತರಾಯಿತು.

ಸಿಎಸ್‌ಕೆ ಇನ್ನಿಂಗ್ಸ್‌: ಪೇ ಬ್ಯಾಕ್‌ ವೀಕ್‌ನಲ್ಲಿ ಸಿಎಸ್‌ಕೆ, ಎಸ್‌ಆರ್‌ಎಚ್‌ ವಿರುದ್ಧ ಬೌನ್ಸ್‌ ಬ್ಯಾಕ್‌ ಮಾಡಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಸಿಎಸ್‌ಕೆ ತಂಡಕ್ಕೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಆರಂಭಿಕರಾಗಿ ಬಂದ ರಹಾನೆ 9 ರನ್ ಬಾರಿಸಿ ಬಂದ ವೇಗದಲ್ಲೇ ಪೆವಿಲಿಯನ್‌ ಸೇರಿದರು. ಬಳಿಕ ಜೊತೆಯಾದ ನಾಯಕ ಋತುರಾಜ್‌ ಗಾಯಕ್ವಾಡ್‌ ಹಾಗೂ ಡೇರಿಯಲ್‌ ಮಿಚೆಲ್‌ ಶತಕದ ಜತೆಯಾಟ ನೀಡಿ ಸೂಪರ್‌ ಕಿಂಗ್ಸ್‌ಗೆ ಚೇತರಿಕೆ ನೀಡಿದರು.

ಡೇರಿಯಲ್‌ ಮಿಚೆಲ್‌ 52(32)ರನ್‌ ಗಳಿಸಿ ವಿಕೆಟ್‌ ಒಪ್ಪಿಸಿ ಹೊರ ನಡೆದರು. ಆದರೆ ಆರಂಭದಿಂದಲೂ ಉತ್ತಮ ಆಟ ಪ್ರದರ್ಶಿಸಿದ ನಾಯಕ ಋತುರಾಜ್‌ ಎರಡು ರನ್‌ಗಳ ಅಂತರದಿಂದ ಶತಕ ವಂಚಿತರಾದರು. ಇವರು 54 ಎಸೆತ ಎದುರಿಸಿ 10ಬೌಂಡರಿ ಹಾಗೂ 3 ಸಿಕ್ಸರ್‌ ಸಹಿತ 98 ರನ್‌ ಚಚ್ಚಿ ಓಟಾದರು. ಉಳಿದಂತೆ ಔಟಾಗದೆ ಶಿವಂ ದುಬೆ 39(20) ಹಾಗೂ ಧೋನಿ 5(2) ರನ್‌ ಬಾರಿಸಿದರು.

ಹೈದರಬಾದ್‌ ಪರ ಭುವನೇಶ್ವರ್‌, ನಟರಾಜನ್‌ ಮತು ಉನಾದ್ಕಟ್‌ ತಲಾ ಒಂದೊಂದು ವಿಕೆಟ್‌ ಪಡೆದು ಗಮನ ಸೆಳೆದರು.

ಎಸ್‌ಆರ್‌ಎಚ್‌ ಇನ್ನಿಂಗ್ಸ್‌: ಸಿಎಸ್‌ಕೆ ನೀಡಿದ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಹೈದರಬಾದ್‌ಗೆ ಉತ್ತಮ ಆರಂಭ ಸಿಗಲಿಲ್ಲ. ಪವರ್‌ ಪ್ಲೇ ನಲ್ಲೇ ಪ್ರಮುಖ ಮೂರು ವಿಕೆಟ್‌ ಕಳೆದುಕೊಂಡು ಎಸ್‌ಆರ್‌ಎಚ್‌ ಸಂಕಷ್ಟಕ್ಕೆ ಸಿಲುಕಿತು. ಆರಂಭಿಕರಾಗಿ ಬಂದ ಟ್ರಾವಿಸ್‌ ಹೆಡ್‌ 13(7), ಅಭಿಷೇಕ್‌ ಶರ್ಮಾ 15(9) ರನ್‌ ಕಲೆಹಾಕಿ ಬೇಗನೇ ಪೆವಿಲಿಯನ್‌ ಸೇರಿದರು. ಅನ್ಮೋಲ್‌ಪ್ರೀತ್‌ ಸಿಂಗ್‌ ಶೂನ್ಯಕ್ಕೆ ಔಟಾದರು. ಎಸ್‌ಆರ್‌ಎಚ್‌ ಪವರ್‌ ಪ್ಲೇನಲ್ಲಿ 53ರನ್‌ಗೆ ಪ್ರಮುಖ 3ವಿಕೆಟ್‌ ಕಳೆದುಕೊಂಡು ಮುಗ್ಗರಿಸಿತು. ಬಳಿಕ ಬಂದ ಮಾರ್ಕ್ರಂ 32(26) ರನ್‌ ಬಾರಿಸಿದರು. ಈ ಇನ್ನಿಂಗ್ಸ್‌ನಲ್ಲಿ ಮಾರ್ಕ್ರಂ ಗಳಿಸಿದ್ದೇ ಎಸ್‌ಆರ್‌ಎಚ್‌ ಪರವಾಗಿ ಗರಿಷ್ಠ ರನ್‌ ಆಗಿತ್ತು.

ಉಳಿದಂತೆ ನಿತೀಶ್‌ ರೆಡ್ಡಿ 15(15), ಕ್ಲಾಸೆನ್‌ 20(21), ಅಬ್ದುಲ್‌ ಸಮದ್‌ 19(18), ಷಹಬಾಜ್‌ ಅಹ್ಮದ್‌ 7(5), ನಾಯಕ ಕಮಿನ್ಸ್‌ 5(7) ಭುವನೇಶ್ವರ್‌ ಕುಮಾರ್‌ ಔಟಾಗದೇ 4(3) ಮತ್ತು ಜೈದೇವ್‌ ಉನಾದ್ಕಟ್‌ 1(2) ರನ್‌ ಬಾರಿಸಿ ಸಿಎಸ್‌ಕೆ ವಿರುದ್ಧ ಮಂಡಿಯೂರಿತು.

ಸಿಎಸ್‌ಕೆ ಪರ ತುಷಾರ್‌ ದೇಶ್‌ಪಾಂಡೆ 4, ಮತೀಶ ಪತಿರಣ ಹಾಗೂ ಮುಸ್ತಿಫಿಜುರ್‌ ತಲಾ ಎರಡೆರೆಡು ವಿಕೆಟ್‌ ಕಬಳಿಸಿದರು. ರವೀಂದ್ರ ಜಡೇಜಾ, ಶಾರ್ದುಲ್‌ ಠಾಕೂರ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

4 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

7 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

9 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

9 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

9 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

10 hours ago