ಕ್ರೀಡೆ

IPL-2024: ಸಿಎಸ್‌ಕೆ-ಆರ್‌ಸಿಬಿ ಮುಖಾಮುಖಿ: ಈವರೆಗಿನ ದಾಖಲೆಗಳ ಮಾಹಿತಿ!

ಚೆನ್ನೈ: ಇಂದಿನಿಂದ ಚುಟುಕು ಕ್ರಿಕೆಟ್‌ಗೆ ಅಧಿಕೃತ ಚಾಲನೆ ದೊರೆಯಲಿದೆ. ಐಪಿಎಲ್ 2024ರ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಎರಡು ಬಲಿಷ್ಠ ತಂಡಗಳು ಕಣಕ್ಕಿಳಿಯುತ್ತಿವೆ. ಹಾಲಿ ಚಾಂಪಿಯನ್‌ ಸಿಎಸ್‌ಕೆ ಮತ್ತು ಆರ್‌ಸಿಬಿ ತಂಡಗಳು ಮುಖಾಮುಖಿ ಆಗಲಿವೆ.

ಇತ್ತಂಡಗಳ ಈವರೆಗಿನ ಮುಖಾಮುಖಿಯಲ್ಲಿ ಯಾರ ಕೈ ಮೇಲುಗೈ ಸಾಧಿಸಿದೆ. ಈ ಎರಡು ತಂಡಗಳ ನಡುವೆ ಯಾವೆಲ್ಲಾ ದಾಖಲೆಗಳು ನಿರ್ಮಾಣಗೊಂಡಿವೆ, ಮುಂದೆ ಯಾವೆಲ್ಲಾ ದಾಖಲೆಗಳು ನಿರ್ಮಾಣಗೊಳ್ಳಲಿದೆ ಎಂಬುದರ ಬಗೆಗಿನ ಮಾಹಿತಿ ಇಲ್ಲಿದೆ ನೋಡಿ!

ಸಿಎಸ್‌ಕೆ ಮತ್ತು ಆರ್‌ಸಿಬಿ ತಂಡಗಳು ಚೆಪಾಕ್‌ ಅಂಗಳದಲ್ಲಿ ಈವರೆಗೆ 8 ಬಾರಿ ಮುಖಾಮುಖಿಯಾಗಿದ್ದು, ಸಿಎಸ್‌ಕೆ 7ರಲ್ಲಿ ಗೆದ್ದರೇ, ಆರ್‌ಸಿಬಿ 1 ಪಂದ್ಯ ಮಾತ್ರ ಗೆದ್ದಿದೆ.

ಉಭಯ ತಂಡಗಳು ಈವರೆಗೆ ಒಟ್ಟು 31 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಸಿಎಸ್‌ಕೆ 20 ಮತ್ತು ಆರ್‌ಸಿಬಿ 10 ಪಂದ್ಯಗಳನ್ನು ಗೆದ್ದಿದೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಸಿಎಸ್‌ಕೆ ತಂಡಗಳು ಒಂದು ಬಾರಿ ಫೈನಲ್‌ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಅದರಲ್ಲಿ ಸಿಎಸ್‌ಕೆ 58 ರನ್‌ಗಳಿಂದ ಗೆದ್ದಿದೆ.

ಆರ್‌ಸಿಬಿ ಮತ್ತು ಸಿಎಸ್‌ಕೆ ತಂಡಗಳ ನಡುವಿನ ಪರಸ್ಪರ ಮುಖಾಮುಖಿಯಲ್ಲಿ ಅಧಿಕ ರನ್‌ ಗಳಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಲ್ಲಿದೆ. ವಿರಾಟ್ ಕೊಹ್ಲಿ ಚೆನ್ನೈ ವಿರುದ್ಧ ಬರೋಬ್ಬರಿ 999 ರನ್ ಗಳಿಸಿದ್ದಾರೆ. ಅವರು ಇನ್ನು 1 ರನ್ ಗಳಿಸಿದರೆ, ತಂಡದ ವಿರುದ್ಧ 1000 ರನ್ ಮೈಲಿಗಲ್ಲು ತಲುಪಲಿದ್ದಾರೆ.

ಇದೇ ವೇಳೆ ರವೀಂದ್ರ ಜಡೇಜಾ ಅತಿ ಹೆಚ್ಚು ವಿಕೆಟ್ ಪಡೆದವರಲ್ಲಿ ಮೊದಲಿಗರಿದ್ದಾರೆ. ಒಟ್ಟು 18 ವಿಕೆಟ್‌ಗಳನ್ನು ಪಡೆದಿರುವ ಜಡ್ಡು, ವಿಕೆಟ್‌ ಪಡೆದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಶಿವಂ ದುಬೆ ಅಜೇಯ 95 ರನ್ ಗಳಿಸುವ ಮೂಲಕ, ಉಭಯ ತಂಡಗಳ ಮುಖಾಮುಖಿಯೊಂದರಲ್ಲಿ ಗರಿಷ್ಠ ರನ್‌ ಗಳಿಸಿದ ರೆಕಾರ್ಡ್‌ ಹೊಂದಿದ್ದಾರೆ.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

14 mins ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

41 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

2 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

3 hours ago