ಕ್ರೀಡೆ

IPL-2024: ಸಿಎಸ್‌ಕೆ-ಆರ್‌ಸಿಬಿ ಮುಖಾಮುಖಿ: ಈವರೆಗಿನ ದಾಖಲೆಗಳ ಮಾಹಿತಿ!

ಚೆನ್ನೈ: ಇಂದಿನಿಂದ ಚುಟುಕು ಕ್ರಿಕೆಟ್‌ಗೆ ಅಧಿಕೃತ ಚಾಲನೆ ದೊರೆಯಲಿದೆ. ಐಪಿಎಲ್ 2024ರ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಎರಡು ಬಲಿಷ್ಠ ತಂಡಗಳು ಕಣಕ್ಕಿಳಿಯುತ್ತಿವೆ. ಹಾಲಿ ಚಾಂಪಿಯನ್‌ ಸಿಎಸ್‌ಕೆ ಮತ್ತು ಆರ್‌ಸಿಬಿ ತಂಡಗಳು ಮುಖಾಮುಖಿ ಆಗಲಿವೆ.

ಇತ್ತಂಡಗಳ ಈವರೆಗಿನ ಮುಖಾಮುಖಿಯಲ್ಲಿ ಯಾರ ಕೈ ಮೇಲುಗೈ ಸಾಧಿಸಿದೆ. ಈ ಎರಡು ತಂಡಗಳ ನಡುವೆ ಯಾವೆಲ್ಲಾ ದಾಖಲೆಗಳು ನಿರ್ಮಾಣಗೊಂಡಿವೆ, ಮುಂದೆ ಯಾವೆಲ್ಲಾ ದಾಖಲೆಗಳು ನಿರ್ಮಾಣಗೊಳ್ಳಲಿದೆ ಎಂಬುದರ ಬಗೆಗಿನ ಮಾಹಿತಿ ಇಲ್ಲಿದೆ ನೋಡಿ!

ಸಿಎಸ್‌ಕೆ ಮತ್ತು ಆರ್‌ಸಿಬಿ ತಂಡಗಳು ಚೆಪಾಕ್‌ ಅಂಗಳದಲ್ಲಿ ಈವರೆಗೆ 8 ಬಾರಿ ಮುಖಾಮುಖಿಯಾಗಿದ್ದು, ಸಿಎಸ್‌ಕೆ 7ರಲ್ಲಿ ಗೆದ್ದರೇ, ಆರ್‌ಸಿಬಿ 1 ಪಂದ್ಯ ಮಾತ್ರ ಗೆದ್ದಿದೆ.

ಉಭಯ ತಂಡಗಳು ಈವರೆಗೆ ಒಟ್ಟು 31 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಸಿಎಸ್‌ಕೆ 20 ಮತ್ತು ಆರ್‌ಸಿಬಿ 10 ಪಂದ್ಯಗಳನ್ನು ಗೆದ್ದಿದೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಸಿಎಸ್‌ಕೆ ತಂಡಗಳು ಒಂದು ಬಾರಿ ಫೈನಲ್‌ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಅದರಲ್ಲಿ ಸಿಎಸ್‌ಕೆ 58 ರನ್‌ಗಳಿಂದ ಗೆದ್ದಿದೆ.

ಆರ್‌ಸಿಬಿ ಮತ್ತು ಸಿಎಸ್‌ಕೆ ತಂಡಗಳ ನಡುವಿನ ಪರಸ್ಪರ ಮುಖಾಮುಖಿಯಲ್ಲಿ ಅಧಿಕ ರನ್‌ ಗಳಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಲ್ಲಿದೆ. ವಿರಾಟ್ ಕೊಹ್ಲಿ ಚೆನ್ನೈ ವಿರುದ್ಧ ಬರೋಬ್ಬರಿ 999 ರನ್ ಗಳಿಸಿದ್ದಾರೆ. ಅವರು ಇನ್ನು 1 ರನ್ ಗಳಿಸಿದರೆ, ತಂಡದ ವಿರುದ್ಧ 1000 ರನ್ ಮೈಲಿಗಲ್ಲು ತಲುಪಲಿದ್ದಾರೆ.

ಇದೇ ವೇಳೆ ರವೀಂದ್ರ ಜಡೇಜಾ ಅತಿ ಹೆಚ್ಚು ವಿಕೆಟ್ ಪಡೆದವರಲ್ಲಿ ಮೊದಲಿಗರಿದ್ದಾರೆ. ಒಟ್ಟು 18 ವಿಕೆಟ್‌ಗಳನ್ನು ಪಡೆದಿರುವ ಜಡ್ಡು, ವಿಕೆಟ್‌ ಪಡೆದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಶಿವಂ ದುಬೆ ಅಜೇಯ 95 ರನ್ ಗಳಿಸುವ ಮೂಲಕ, ಉಭಯ ತಂಡಗಳ ಮುಖಾಮುಖಿಯೊಂದರಲ್ಲಿ ಗರಿಷ್ಠ ರನ್‌ ಗಳಿಸಿದ ರೆಕಾರ್ಡ್‌ ಹೊಂದಿದ್ದಾರೆ.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹಕ್ಕು ಪತ್ರ ವಿತರಣೆಯಲ್ಲಿ ದಾಖಲೆ ನಿರ್ಮಾಣ ಮಾಡಿದ ಕಂದಾಯ ಇಲಾಖೆ

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…

4 mins ago

ಸಂಶೋಧನೆಗೆ ಸಂಕಟ | ಶಿಷ್ಯವೇತನಕ್ಕೆ ಆಗ್ರಹಿಸಿ ಮೈ.ವಿ.ವಿ ಸಂಶೋಧಕರ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…

9 mins ago

ಪ್ರಶ್ನೆ ಪತ್ರಿಕೆ ಸೋರಿಕೆ | ನೀಟ್‌ ರದ್ದು, ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಕಾರಣ ; ಸಿಎಂ ಆರೋಪ

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…

33 mins ago

ಕೊಟ್ಟ ಮಾತಿನಂತೆ ನಡೆಯುತ್ತಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ತುಮಕೂರು : ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಪ್ರಣಾಳಿಕೆಯಲ್ಲಿ ನೀಡಿದ್ದ 580 ಭರವಸೆಗಳ ಪೈಕಿ 290ಕ್ಕೂ ಹೆಚ್ಚು ಭರವಸೆಗಳನ್ನು…

43 mins ago

ತುಮಕೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…

5 hours ago

ಅಗತ್ಯವಿದ್ದರೆ ಹುಚ್ಚು ಬೀದಿ ನಾಯಿಗಳನ್ನು ಕೊಲ್ಲಿ: ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…

5 hours ago