ಕ್ರೀಡೆ

IPL-2024: ಸಿಎಸ್‌ಕೆ-ಆರ್‌ಸಿಬಿ ಮುಖಾಮುಖಿ: ಈವರೆಗಿನ ದಾಖಲೆಗಳ ಮಾಹಿತಿ!

ಚೆನ್ನೈ: ಇಂದಿನಿಂದ ಚುಟುಕು ಕ್ರಿಕೆಟ್‌ಗೆ ಅಧಿಕೃತ ಚಾಲನೆ ದೊರೆಯಲಿದೆ. ಐಪಿಎಲ್ 2024ರ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಎರಡು ಬಲಿಷ್ಠ ತಂಡಗಳು ಕಣಕ್ಕಿಳಿಯುತ್ತಿವೆ. ಹಾಲಿ ಚಾಂಪಿಯನ್‌ ಸಿಎಸ್‌ಕೆ ಮತ್ತು ಆರ್‌ಸಿಬಿ ತಂಡಗಳು ಮುಖಾಮುಖಿ ಆಗಲಿವೆ.

ಇತ್ತಂಡಗಳ ಈವರೆಗಿನ ಮುಖಾಮುಖಿಯಲ್ಲಿ ಯಾರ ಕೈ ಮೇಲುಗೈ ಸಾಧಿಸಿದೆ. ಈ ಎರಡು ತಂಡಗಳ ನಡುವೆ ಯಾವೆಲ್ಲಾ ದಾಖಲೆಗಳು ನಿರ್ಮಾಣಗೊಂಡಿವೆ, ಮುಂದೆ ಯಾವೆಲ್ಲಾ ದಾಖಲೆಗಳು ನಿರ್ಮಾಣಗೊಳ್ಳಲಿದೆ ಎಂಬುದರ ಬಗೆಗಿನ ಮಾಹಿತಿ ಇಲ್ಲಿದೆ ನೋಡಿ!

ಸಿಎಸ್‌ಕೆ ಮತ್ತು ಆರ್‌ಸಿಬಿ ತಂಡಗಳು ಚೆಪಾಕ್‌ ಅಂಗಳದಲ್ಲಿ ಈವರೆಗೆ 8 ಬಾರಿ ಮುಖಾಮುಖಿಯಾಗಿದ್ದು, ಸಿಎಸ್‌ಕೆ 7ರಲ್ಲಿ ಗೆದ್ದರೇ, ಆರ್‌ಸಿಬಿ 1 ಪಂದ್ಯ ಮಾತ್ರ ಗೆದ್ದಿದೆ.

ಉಭಯ ತಂಡಗಳು ಈವರೆಗೆ ಒಟ್ಟು 31 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಸಿಎಸ್‌ಕೆ 20 ಮತ್ತು ಆರ್‌ಸಿಬಿ 10 ಪಂದ್ಯಗಳನ್ನು ಗೆದ್ದಿದೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಸಿಎಸ್‌ಕೆ ತಂಡಗಳು ಒಂದು ಬಾರಿ ಫೈನಲ್‌ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಅದರಲ್ಲಿ ಸಿಎಸ್‌ಕೆ 58 ರನ್‌ಗಳಿಂದ ಗೆದ್ದಿದೆ.

ಆರ್‌ಸಿಬಿ ಮತ್ತು ಸಿಎಸ್‌ಕೆ ತಂಡಗಳ ನಡುವಿನ ಪರಸ್ಪರ ಮುಖಾಮುಖಿಯಲ್ಲಿ ಅಧಿಕ ರನ್‌ ಗಳಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಲ್ಲಿದೆ. ವಿರಾಟ್ ಕೊಹ್ಲಿ ಚೆನ್ನೈ ವಿರುದ್ಧ ಬರೋಬ್ಬರಿ 999 ರನ್ ಗಳಿಸಿದ್ದಾರೆ. ಅವರು ಇನ್ನು 1 ರನ್ ಗಳಿಸಿದರೆ, ತಂಡದ ವಿರುದ್ಧ 1000 ರನ್ ಮೈಲಿಗಲ್ಲು ತಲುಪಲಿದ್ದಾರೆ.

ಇದೇ ವೇಳೆ ರವೀಂದ್ರ ಜಡೇಜಾ ಅತಿ ಹೆಚ್ಚು ವಿಕೆಟ್ ಪಡೆದವರಲ್ಲಿ ಮೊದಲಿಗರಿದ್ದಾರೆ. ಒಟ್ಟು 18 ವಿಕೆಟ್‌ಗಳನ್ನು ಪಡೆದಿರುವ ಜಡ್ಡು, ವಿಕೆಟ್‌ ಪಡೆದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಶಿವಂ ದುಬೆ ಅಜೇಯ 95 ರನ್ ಗಳಿಸುವ ಮೂಲಕ, ಉಭಯ ತಂಡಗಳ ಮುಖಾಮುಖಿಯೊಂದರಲ್ಲಿ ಗರಿಷ್ಠ ರನ್‌ ಗಳಿಸಿದ ರೆಕಾರ್ಡ್‌ ಹೊಂದಿದ್ದಾರೆ.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

6 hours ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

6 hours ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

6 hours ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

6 hours ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

7 hours ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

7 hours ago