ಕ್ರೀಡೆ

IPL-2024: ಸಿಎಸ್‌ಕೆ-ಆರ್‌ಸಿಬಿ ಮುಖಾಮುಖಿ: ಈವರೆಗಿನ ದಾಖಲೆಗಳ ಮಾಹಿತಿ!

ಚೆನ್ನೈ: ಇಂದಿನಿಂದ ಚುಟುಕು ಕ್ರಿಕೆಟ್‌ಗೆ ಅಧಿಕೃತ ಚಾಲನೆ ದೊರೆಯಲಿದೆ. ಐಪಿಎಲ್ 2024ರ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಎರಡು ಬಲಿಷ್ಠ ತಂಡಗಳು ಕಣಕ್ಕಿಳಿಯುತ್ತಿವೆ. ಹಾಲಿ ಚಾಂಪಿಯನ್‌ ಸಿಎಸ್‌ಕೆ ಮತ್ತು ಆರ್‌ಸಿಬಿ ತಂಡಗಳು ಮುಖಾಮುಖಿ ಆಗಲಿವೆ.

ಇತ್ತಂಡಗಳ ಈವರೆಗಿನ ಮುಖಾಮುಖಿಯಲ್ಲಿ ಯಾರ ಕೈ ಮೇಲುಗೈ ಸಾಧಿಸಿದೆ. ಈ ಎರಡು ತಂಡಗಳ ನಡುವೆ ಯಾವೆಲ್ಲಾ ದಾಖಲೆಗಳು ನಿರ್ಮಾಣಗೊಂಡಿವೆ, ಮುಂದೆ ಯಾವೆಲ್ಲಾ ದಾಖಲೆಗಳು ನಿರ್ಮಾಣಗೊಳ್ಳಲಿದೆ ಎಂಬುದರ ಬಗೆಗಿನ ಮಾಹಿತಿ ಇಲ್ಲಿದೆ ನೋಡಿ!

ಸಿಎಸ್‌ಕೆ ಮತ್ತು ಆರ್‌ಸಿಬಿ ತಂಡಗಳು ಚೆಪಾಕ್‌ ಅಂಗಳದಲ್ಲಿ ಈವರೆಗೆ 8 ಬಾರಿ ಮುಖಾಮುಖಿಯಾಗಿದ್ದು, ಸಿಎಸ್‌ಕೆ 7ರಲ್ಲಿ ಗೆದ್ದರೇ, ಆರ್‌ಸಿಬಿ 1 ಪಂದ್ಯ ಮಾತ್ರ ಗೆದ್ದಿದೆ.

ಉಭಯ ತಂಡಗಳು ಈವರೆಗೆ ಒಟ್ಟು 31 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಸಿಎಸ್‌ಕೆ 20 ಮತ್ತು ಆರ್‌ಸಿಬಿ 10 ಪಂದ್ಯಗಳನ್ನು ಗೆದ್ದಿದೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಸಿಎಸ್‌ಕೆ ತಂಡಗಳು ಒಂದು ಬಾರಿ ಫೈನಲ್‌ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಅದರಲ್ಲಿ ಸಿಎಸ್‌ಕೆ 58 ರನ್‌ಗಳಿಂದ ಗೆದ್ದಿದೆ.

ಆರ್‌ಸಿಬಿ ಮತ್ತು ಸಿಎಸ್‌ಕೆ ತಂಡಗಳ ನಡುವಿನ ಪರಸ್ಪರ ಮುಖಾಮುಖಿಯಲ್ಲಿ ಅಧಿಕ ರನ್‌ ಗಳಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಲ್ಲಿದೆ. ವಿರಾಟ್ ಕೊಹ್ಲಿ ಚೆನ್ನೈ ವಿರುದ್ಧ ಬರೋಬ್ಬರಿ 999 ರನ್ ಗಳಿಸಿದ್ದಾರೆ. ಅವರು ಇನ್ನು 1 ರನ್ ಗಳಿಸಿದರೆ, ತಂಡದ ವಿರುದ್ಧ 1000 ರನ್ ಮೈಲಿಗಲ್ಲು ತಲುಪಲಿದ್ದಾರೆ.

ಇದೇ ವೇಳೆ ರವೀಂದ್ರ ಜಡೇಜಾ ಅತಿ ಹೆಚ್ಚು ವಿಕೆಟ್ ಪಡೆದವರಲ್ಲಿ ಮೊದಲಿಗರಿದ್ದಾರೆ. ಒಟ್ಟು 18 ವಿಕೆಟ್‌ಗಳನ್ನು ಪಡೆದಿರುವ ಜಡ್ಡು, ವಿಕೆಟ್‌ ಪಡೆದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಶಿವಂ ದುಬೆ ಅಜೇಯ 95 ರನ್ ಗಳಿಸುವ ಮೂಲಕ, ಉಭಯ ತಂಡಗಳ ಮುಖಾಮುಖಿಯೊಂದರಲ್ಲಿ ಗರಿಷ್ಠ ರನ್‌ ಗಳಿಸಿದ ರೆಕಾರ್ಡ್‌ ಹೊಂದಿದ್ದಾರೆ.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

6 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

7 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

9 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

9 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

13 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

14 hours ago