ಕ್ರೀಡೆ

IPL 2024: ಗುಜರಾತ್‌ ಟೈಟನ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ ಸುಲಭ ಜಯ

ಅಹ್ಮದಾಬಾದ್:‌ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ನ 32ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಗುಜರಾತ್‌ ಟೈಟನ್ಸ್‌ ವಿರುದ್ಧ 6 ವಿಕೆಟ್‌ಗಳ ಗೆಲುವನ್ನು ಸಾಧಿಸಿತು.

ಪಂದ್ಯದಲ್ಲಿ ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌ ಮೊದಲು ಫೀಲ್ಡಿಂಗ್‌ ಆರಿಸಿಕೊಂಡು ಗುಜರಾತ್‌ ಟೈಟನ್ಸ್‌ ತಂಡವನ್ನು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಹೀಗೆ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಟೈಟನ್ಸ್‌ ಡೆಲ್ಲಿ ಬೌಲಿಂಗ್‌ ಮುಂದೆ ಮಂಕಾಯಿತು. 17.3 ಓವರ್‌ಗಳಲ್ಲಿ ಕೇವಲ 89 ರನ್‌ಗಳಿಗೆ ಆಲ್‌ಔಟ್‌ ಆಗಿ ಡೆಲ್ಲಿಗೆ 90 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್‌ 8.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 92 ರನ್‌ ಬಾರಿಸಿ ಜಯ ಗಳಿಸಿದೆ.

ಗುಜರಾತ್‌ ಟೈಟನ್ಸ್‌ ಇನ್ನಿಂಗ್ಸ್:‌ ಡೆಲ್ಲಿ ಬೌಲಿಂಗ್‌ ಎದುರು ತವರಿನಲ್ಲಿಯೇ ಹೀನಾಯವಾಗಿ ಆಲ್‌ಔಟ್‌ ಆದ ಗುಜರಾತ್‌ ಪರ ರಶೀದ್‌ ಖಾನ್‌ ಹೊರತುಪಡಿಸಿ ಇನ್ಯಾವ ಆಟಗಾರನೂ ಸಹ ಇಪ್ಪತ್ತರ ಗಡಿ ದಾಟುವಲ್ಲಿ ಯಶಸ್ವಿಯಾಗಲಿಲ್ಲ. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ವೃದ್ಧಿಮಾನ್‌ ಸಹಾ 2 (10) ರನ್‌ ಹಾಗೂ ಶುಭ್‌ಮನ್‌ ಗಿಲ್‌ 8 (6) ರನ್‌ ಗಳಿಸಿ ಔಟ್‌ ಆದರು. ಆರಂಭದಲ್ಲಿಯೇ ಕುಸಿತ ಕಂಡ ಗುಜರಾತ್‌ ಟೈಟನ್ಸ್‌ ಎಲ್ಲಿಯೂ ಸುಧಾರಿಸಿಕೊಳ್ಳಲಿಲ್ಲ. ಇನ್ನುಳಿದಂತೆ ಸಾಯಿ ಸುದರ್ಶನ್‌ 12 (9) ರನ್‌, ಡೇವಿಡ್‌ ಮಿಲ್ಲರ್‌ 2 (6) ರನ್‌, ಅಭಿನವ್‌ ಮನೋಹರ್‌ 8 (14) ರನ್‌, ರಾಹುಲ್‌ ತೆವಾಟಿಯಾ 10 (15) ರನ್‌, ಶಾರುಖ್‌ ಖಾನ್‌ ಗೋಲ್ಡನ್‌ ಡಕ್‌ಔಟ್‌, ರಶೀದ್‌ ಖಾನ್‌ 31 (24) ರನ್‌, ಮೋಹಿತ್‌ ಶರ್ಮಾ 2 (14) ರನ್‌, ನೂರ್‌ ಅಹ್ಮದ್‌ 1 (7) ರನ್‌ ಮತ್ತು ಸ್ಪೆನ್ಸರ್‌ ಜಾನ್‌ಸನ್‌ ಅಜೇಯ 1 (1) ರನ್‌ ಗಳಿಸಿದರು.

ಡೆಲ್ಲಿ ಕ್ಯಾಪಿಟಲ್ಸ್‌ ಪರ ಮುಕೇಶ್‌ ಕುಮಾರ್‌ 3 ವಿಕೆಟ್‌, ಇಶಾಂತ್‌ ಶರ್ಮಾ ಹಾಗೂ ಟ್ರಿಸ್ಟನ್‌ ಸ್ಟಬ್ಸ್‌ ತಲಾ ಎರಡೆರಡು ವಿಕೆಟ್‌, ಖಲೀಲ್‌ ಅಹ್ಮದ್‌ ಹಾಗೂ ಅಕ್ಷರ್‌ ಪಟೇಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಡೆಲ್ಲಿ ಕ್ಯಾಪಿಟಲ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ 7 (6) ರನ್‌ ಹಾಗೂ ಜೇಕ್‌ ಫ್ರೇಸರ್‌ ಮೆಕ್‌ಗುರ್ಕ್‌ 20 (10) ರನ್‌ ಕಲೆಹಾಕಿದರು. ಇನ್ನುಳಿದಂತೆ ಅಭಿಷೇಕ್‌ ಪೊರೆಲ್‌ 15 (7) ರನ್‌, ಶಾಯ್‌ ಹೋಪ್‌ 19 (10) ರನ್‌, ನಾಯಕ ರಿಷಭ್‌ ಪಂತ್‌ ಅಜೇಯ 16 (11) ರನ್‌ ಮತ್ತು ಸುಮಿತ್‌ ಕುಮಾರ್‌ ಅಜೇಯ 9 (9) ರನ್‌ ಕಲೆಹಾಕಿದರು.

ಗುಜರಾತ್‌ ಟೈಟನ್ಸ್‌ ಪರ ಸಂದೀಪ್‌ ವಾರಿಯರ್‌ 2 ವಿಕೆಟ್‌, ಸ್ಪೆನ್ಸರ್‌ ಜಾನ್‌ಸನ್‌ ಹಾಗೂ ರಶೀದ್‌ ಖಾನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago