ಕ್ರೀಡೆ

IPL 2024: ಗುಜರಾತ್‌ ಟೈಟನ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ ಸುಲಭ ಜಯ

ಅಹ್ಮದಾಬಾದ್:‌ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ನ 32ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಗುಜರಾತ್‌ ಟೈಟನ್ಸ್‌ ವಿರುದ್ಧ 6 ವಿಕೆಟ್‌ಗಳ ಗೆಲುವನ್ನು ಸಾಧಿಸಿತು.

ಪಂದ್ಯದಲ್ಲಿ ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌ ಮೊದಲು ಫೀಲ್ಡಿಂಗ್‌ ಆರಿಸಿಕೊಂಡು ಗುಜರಾತ್‌ ಟೈಟನ್ಸ್‌ ತಂಡವನ್ನು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಹೀಗೆ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಟೈಟನ್ಸ್‌ ಡೆಲ್ಲಿ ಬೌಲಿಂಗ್‌ ಮುಂದೆ ಮಂಕಾಯಿತು. 17.3 ಓವರ್‌ಗಳಲ್ಲಿ ಕೇವಲ 89 ರನ್‌ಗಳಿಗೆ ಆಲ್‌ಔಟ್‌ ಆಗಿ ಡೆಲ್ಲಿಗೆ 90 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್‌ 8.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 92 ರನ್‌ ಬಾರಿಸಿ ಜಯ ಗಳಿಸಿದೆ.

ಗುಜರಾತ್‌ ಟೈಟನ್ಸ್‌ ಇನ್ನಿಂಗ್ಸ್:‌ ಡೆಲ್ಲಿ ಬೌಲಿಂಗ್‌ ಎದುರು ತವರಿನಲ್ಲಿಯೇ ಹೀನಾಯವಾಗಿ ಆಲ್‌ಔಟ್‌ ಆದ ಗುಜರಾತ್‌ ಪರ ರಶೀದ್‌ ಖಾನ್‌ ಹೊರತುಪಡಿಸಿ ಇನ್ಯಾವ ಆಟಗಾರನೂ ಸಹ ಇಪ್ಪತ್ತರ ಗಡಿ ದಾಟುವಲ್ಲಿ ಯಶಸ್ವಿಯಾಗಲಿಲ್ಲ. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ವೃದ್ಧಿಮಾನ್‌ ಸಹಾ 2 (10) ರನ್‌ ಹಾಗೂ ಶುಭ್‌ಮನ್‌ ಗಿಲ್‌ 8 (6) ರನ್‌ ಗಳಿಸಿ ಔಟ್‌ ಆದರು. ಆರಂಭದಲ್ಲಿಯೇ ಕುಸಿತ ಕಂಡ ಗುಜರಾತ್‌ ಟೈಟನ್ಸ್‌ ಎಲ್ಲಿಯೂ ಸುಧಾರಿಸಿಕೊಳ್ಳಲಿಲ್ಲ. ಇನ್ನುಳಿದಂತೆ ಸಾಯಿ ಸುದರ್ಶನ್‌ 12 (9) ರನ್‌, ಡೇವಿಡ್‌ ಮಿಲ್ಲರ್‌ 2 (6) ರನ್‌, ಅಭಿನವ್‌ ಮನೋಹರ್‌ 8 (14) ರನ್‌, ರಾಹುಲ್‌ ತೆವಾಟಿಯಾ 10 (15) ರನ್‌, ಶಾರುಖ್‌ ಖಾನ್‌ ಗೋಲ್ಡನ್‌ ಡಕ್‌ಔಟ್‌, ರಶೀದ್‌ ಖಾನ್‌ 31 (24) ರನ್‌, ಮೋಹಿತ್‌ ಶರ್ಮಾ 2 (14) ರನ್‌, ನೂರ್‌ ಅಹ್ಮದ್‌ 1 (7) ರನ್‌ ಮತ್ತು ಸ್ಪೆನ್ಸರ್‌ ಜಾನ್‌ಸನ್‌ ಅಜೇಯ 1 (1) ರನ್‌ ಗಳಿಸಿದರು.

ಡೆಲ್ಲಿ ಕ್ಯಾಪಿಟಲ್ಸ್‌ ಪರ ಮುಕೇಶ್‌ ಕುಮಾರ್‌ 3 ವಿಕೆಟ್‌, ಇಶಾಂತ್‌ ಶರ್ಮಾ ಹಾಗೂ ಟ್ರಿಸ್ಟನ್‌ ಸ್ಟಬ್ಸ್‌ ತಲಾ ಎರಡೆರಡು ವಿಕೆಟ್‌, ಖಲೀಲ್‌ ಅಹ್ಮದ್‌ ಹಾಗೂ ಅಕ್ಷರ್‌ ಪಟೇಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಡೆಲ್ಲಿ ಕ್ಯಾಪಿಟಲ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ 7 (6) ರನ್‌ ಹಾಗೂ ಜೇಕ್‌ ಫ್ರೇಸರ್‌ ಮೆಕ್‌ಗುರ್ಕ್‌ 20 (10) ರನ್‌ ಕಲೆಹಾಕಿದರು. ಇನ್ನುಳಿದಂತೆ ಅಭಿಷೇಕ್‌ ಪೊರೆಲ್‌ 15 (7) ರನ್‌, ಶಾಯ್‌ ಹೋಪ್‌ 19 (10) ರನ್‌, ನಾಯಕ ರಿಷಭ್‌ ಪಂತ್‌ ಅಜೇಯ 16 (11) ರನ್‌ ಮತ್ತು ಸುಮಿತ್‌ ಕುಮಾರ್‌ ಅಜೇಯ 9 (9) ರನ್‌ ಕಲೆಹಾಕಿದರು.

ಗುಜರಾತ್‌ ಟೈಟನ್ಸ್‌ ಪರ ಸಂದೀಪ್‌ ವಾರಿಯರ್‌ 2 ವಿಕೆಟ್‌, ಸ್ಪೆನ್ಸರ್‌ ಜಾನ್‌ಸನ್‌ ಹಾಗೂ ರಶೀದ್‌ ಖಾನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

7 mins ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

4 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

4 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

5 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

5 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

6 hours ago