ಅಹ್ಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್ನ 32ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗುಜರಾತ್ ಟೈಟನ್ಸ್ ವಿರುದ್ಧ 6 ವಿಕೆಟ್ಗಳ ಗೆಲುವನ್ನು ಸಾಧಿಸಿತು.
ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಫೀಲ್ಡಿಂಗ್ ಆರಿಸಿಕೊಂಡು ಗುಜರಾತ್ ಟೈಟನ್ಸ್ ತಂಡವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಹೀಗೆ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ಡೆಲ್ಲಿ ಬೌಲಿಂಗ್ ಮುಂದೆ ಮಂಕಾಯಿತು. 17.3 ಓವರ್ಗಳಲ್ಲಿ ಕೇವಲ 89 ರನ್ಗಳಿಗೆ ಆಲ್ಔಟ್ ಆಗಿ ಡೆಲ್ಲಿಗೆ 90 ರನ್ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ 8.5 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 92 ರನ್ ಬಾರಿಸಿ ಜಯ ಗಳಿಸಿದೆ.
ಗುಜರಾತ್ ಟೈಟನ್ಸ್ ಇನ್ನಿಂಗ್ಸ್: ಡೆಲ್ಲಿ ಬೌಲಿಂಗ್ ಎದುರು ತವರಿನಲ್ಲಿಯೇ ಹೀನಾಯವಾಗಿ ಆಲ್ಔಟ್ ಆದ ಗುಜರಾತ್ ಪರ ರಶೀದ್ ಖಾನ್ ಹೊರತುಪಡಿಸಿ ಇನ್ಯಾವ ಆಟಗಾರನೂ ಸಹ ಇಪ್ಪತ್ತರ ಗಡಿ ದಾಟುವಲ್ಲಿ ಯಶಸ್ವಿಯಾಗಲಿಲ್ಲ. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ವೃದ್ಧಿಮಾನ್ ಸಹಾ 2 (10) ರನ್ ಹಾಗೂ ಶುಭ್ಮನ್ ಗಿಲ್ 8 (6) ರನ್ ಗಳಿಸಿ ಔಟ್ ಆದರು. ಆರಂಭದಲ್ಲಿಯೇ ಕುಸಿತ ಕಂಡ ಗುಜರಾತ್ ಟೈಟನ್ಸ್ ಎಲ್ಲಿಯೂ ಸುಧಾರಿಸಿಕೊಳ್ಳಲಿಲ್ಲ. ಇನ್ನುಳಿದಂತೆ ಸಾಯಿ ಸುದರ್ಶನ್ 12 (9) ರನ್, ಡೇವಿಡ್ ಮಿಲ್ಲರ್ 2 (6) ರನ್, ಅಭಿನವ್ ಮನೋಹರ್ 8 (14) ರನ್, ರಾಹುಲ್ ತೆವಾಟಿಯಾ 10 (15) ರನ್, ಶಾರುಖ್ ಖಾನ್ ಗೋಲ್ಡನ್ ಡಕ್ಔಟ್, ರಶೀದ್ ಖಾನ್ 31 (24) ರನ್, ಮೋಹಿತ್ ಶರ್ಮಾ 2 (14) ರನ್, ನೂರ್ ಅಹ್ಮದ್ 1 (7) ರನ್ ಮತ್ತು ಸ್ಪೆನ್ಸರ್ ಜಾನ್ಸನ್ ಅಜೇಯ 1 (1) ರನ್ ಗಳಿಸಿದರು.
ಡೆಲ್ಲಿ ಕ್ಯಾಪಿಟಲ್ಸ್ ಪರ ಮುಕೇಶ್ ಕುಮಾರ್ 3 ವಿಕೆಟ್, ಇಶಾಂತ್ ಶರ್ಮಾ ಹಾಗೂ ಟ್ರಿಸ್ಟನ್ ಸ್ಟಬ್ಸ್ ತಲಾ ಎರಡೆರಡು ವಿಕೆಟ್, ಖಲೀಲ್ ಅಹ್ಮದ್ ಹಾಗೂ ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.
ಡೆಲ್ಲಿ ಕ್ಯಾಪಿಟಲ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ 7 (6) ರನ್ ಹಾಗೂ ಜೇಕ್ ಫ್ರೇಸರ್ ಮೆಕ್ಗುರ್ಕ್ 20 (10) ರನ್ ಕಲೆಹಾಕಿದರು. ಇನ್ನುಳಿದಂತೆ ಅಭಿಷೇಕ್ ಪೊರೆಲ್ 15 (7) ರನ್, ಶಾಯ್ ಹೋಪ್ 19 (10) ರನ್, ನಾಯಕ ರಿಷಭ್ ಪಂತ್ ಅಜೇಯ 16 (11) ರನ್ ಮತ್ತು ಸುಮಿತ್ ಕುಮಾರ್ ಅಜೇಯ 9 (9) ರನ್ ಕಲೆಹಾಕಿದರು.
ಗುಜರಾತ್ ಟೈಟನ್ಸ್ ಪರ ಸಂದೀಪ್ ವಾರಿಯರ್ 2 ವಿಕೆಟ್, ಸ್ಪೆನ್ಸರ್ ಜಾನ್ಸನ್ ಹಾಗೂ ರಶೀದ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…