ಕ್ರೀಡೆ

IPL 2024: ಗುಜರಾತ್‌ ಟೈಟನ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ ಸುಲಭ ಜಯ

ಅಹ್ಮದಾಬಾದ್:‌ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ನ 32ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಗುಜರಾತ್‌ ಟೈಟನ್ಸ್‌ ವಿರುದ್ಧ 6 ವಿಕೆಟ್‌ಗಳ ಗೆಲುವನ್ನು ಸಾಧಿಸಿತು.

ಪಂದ್ಯದಲ್ಲಿ ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌ ಮೊದಲು ಫೀಲ್ಡಿಂಗ್‌ ಆರಿಸಿಕೊಂಡು ಗುಜರಾತ್‌ ಟೈಟನ್ಸ್‌ ತಂಡವನ್ನು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಹೀಗೆ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಟೈಟನ್ಸ್‌ ಡೆಲ್ಲಿ ಬೌಲಿಂಗ್‌ ಮುಂದೆ ಮಂಕಾಯಿತು. 17.3 ಓವರ್‌ಗಳಲ್ಲಿ ಕೇವಲ 89 ರನ್‌ಗಳಿಗೆ ಆಲ್‌ಔಟ್‌ ಆಗಿ ಡೆಲ್ಲಿಗೆ 90 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್‌ 8.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 92 ರನ್‌ ಬಾರಿಸಿ ಜಯ ಗಳಿಸಿದೆ.

ಗುಜರಾತ್‌ ಟೈಟನ್ಸ್‌ ಇನ್ನಿಂಗ್ಸ್:‌ ಡೆಲ್ಲಿ ಬೌಲಿಂಗ್‌ ಎದುರು ತವರಿನಲ್ಲಿಯೇ ಹೀನಾಯವಾಗಿ ಆಲ್‌ಔಟ್‌ ಆದ ಗುಜರಾತ್‌ ಪರ ರಶೀದ್‌ ಖಾನ್‌ ಹೊರತುಪಡಿಸಿ ಇನ್ಯಾವ ಆಟಗಾರನೂ ಸಹ ಇಪ್ಪತ್ತರ ಗಡಿ ದಾಟುವಲ್ಲಿ ಯಶಸ್ವಿಯಾಗಲಿಲ್ಲ. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ವೃದ್ಧಿಮಾನ್‌ ಸಹಾ 2 (10) ರನ್‌ ಹಾಗೂ ಶುಭ್‌ಮನ್‌ ಗಿಲ್‌ 8 (6) ರನ್‌ ಗಳಿಸಿ ಔಟ್‌ ಆದರು. ಆರಂಭದಲ್ಲಿಯೇ ಕುಸಿತ ಕಂಡ ಗುಜರಾತ್‌ ಟೈಟನ್ಸ್‌ ಎಲ್ಲಿಯೂ ಸುಧಾರಿಸಿಕೊಳ್ಳಲಿಲ್ಲ. ಇನ್ನುಳಿದಂತೆ ಸಾಯಿ ಸುದರ್ಶನ್‌ 12 (9) ರನ್‌, ಡೇವಿಡ್‌ ಮಿಲ್ಲರ್‌ 2 (6) ರನ್‌, ಅಭಿನವ್‌ ಮನೋಹರ್‌ 8 (14) ರನ್‌, ರಾಹುಲ್‌ ತೆವಾಟಿಯಾ 10 (15) ರನ್‌, ಶಾರುಖ್‌ ಖಾನ್‌ ಗೋಲ್ಡನ್‌ ಡಕ್‌ಔಟ್‌, ರಶೀದ್‌ ಖಾನ್‌ 31 (24) ರನ್‌, ಮೋಹಿತ್‌ ಶರ್ಮಾ 2 (14) ರನ್‌, ನೂರ್‌ ಅಹ್ಮದ್‌ 1 (7) ರನ್‌ ಮತ್ತು ಸ್ಪೆನ್ಸರ್‌ ಜಾನ್‌ಸನ್‌ ಅಜೇಯ 1 (1) ರನ್‌ ಗಳಿಸಿದರು.

ಡೆಲ್ಲಿ ಕ್ಯಾಪಿಟಲ್ಸ್‌ ಪರ ಮುಕೇಶ್‌ ಕುಮಾರ್‌ 3 ವಿಕೆಟ್‌, ಇಶಾಂತ್‌ ಶರ್ಮಾ ಹಾಗೂ ಟ್ರಿಸ್ಟನ್‌ ಸ್ಟಬ್ಸ್‌ ತಲಾ ಎರಡೆರಡು ವಿಕೆಟ್‌, ಖಲೀಲ್‌ ಅಹ್ಮದ್‌ ಹಾಗೂ ಅಕ್ಷರ್‌ ಪಟೇಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಡೆಲ್ಲಿ ಕ್ಯಾಪಿಟಲ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ 7 (6) ರನ್‌ ಹಾಗೂ ಜೇಕ್‌ ಫ್ರೇಸರ್‌ ಮೆಕ್‌ಗುರ್ಕ್‌ 20 (10) ರನ್‌ ಕಲೆಹಾಕಿದರು. ಇನ್ನುಳಿದಂತೆ ಅಭಿಷೇಕ್‌ ಪೊರೆಲ್‌ 15 (7) ರನ್‌, ಶಾಯ್‌ ಹೋಪ್‌ 19 (10) ರನ್‌, ನಾಯಕ ರಿಷಭ್‌ ಪಂತ್‌ ಅಜೇಯ 16 (11) ರನ್‌ ಮತ್ತು ಸುಮಿತ್‌ ಕುಮಾರ್‌ ಅಜೇಯ 9 (9) ರನ್‌ ಕಲೆಹಾಕಿದರು.

ಗುಜರಾತ್‌ ಟೈಟನ್ಸ್‌ ಪರ ಸಂದೀಪ್‌ ವಾರಿಯರ್‌ 2 ವಿಕೆಟ್‌, ಸ್ಪೆನ್ಸರ್‌ ಜಾನ್‌ಸನ್‌ ಹಾಗೂ ರಶೀದ್‌ ಖಾನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

5 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

6 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

7 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago