ಕ್ರೀಡೆ

IPL 2024: ತವರಿನಂಗಳದಲ್ಲಿ ಆರ್‌ಸಿಬಿಗೆ ಮೊದಲ ಸೋಲು: ಚಿನ್ನಸ್ವಾಮಿಯಲ್ಲಿ ಅಜೇಯ ಓಟ ಮುಂದುವರೆಸಿದ ಕೆಕೆಆರ್‌!

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ಲೀಗ್‌ನ 10 ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್‌ ರೈಡರ್ಸ್‌ ನಡುವಿನ ಪಂದ್ಯದಲ್ಲಿ ಕೆಕೆಆರ್‌ 7 ವಿಕೆಟ್‌ಗಳ ಸುಲಭ ಜಯ ದಾಖಲಿಸಿದ್ದಾರೆ. ಆ ಮೂಲಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಜೇಯ ಓಟ ಮುಂದುವರೆಸಿದ್ದಾರೆ.

2016 ರಿಂದ ಇಲ್ಲಿಯವರೆಗೆ ಇತ್ತಂಡಗಳು 6 ಬಾರಿ ಮುಖಾಮುಖಿಯಾಗಿದ್ದು, ಒಂದೇ ಒಂದು ಪಂದ್ಯವನ್ನು ಸಹಾ ಕೊಲ್ಕತ್ತಾ ಸೋತಿಲ್ಲ. ಆರ್‌ಸಿಬಿ ಮೇಲಿನ ಅಜೇಯ ಓಟ ಮುಂದುವರೆಸಿದ್ದಾರೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ತಂಡವು ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 182 ರನ್‌ ಕಲೆಹಾಕಿ 183 ರನ್‌ಗಳ ಗುರಿ ನೀಡಿತು. ಇದನ್ನು ಬೆನ್ನಟ್ಟಿದ ಕೆಕೆಆರ್‌ ತಂಡ ನಿಗದಿತ 16.5 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 186 ರನ್‌ ಕಲೆ ಹಾಕಿ ಗೆದ್ದು ಬೀಗಿತು.

ಆರ್‌ಸಿಬಿ ಇನ್ನಿಂಗ್ಸ್‌: ಆರ್‌ಸಿಬಿ ಪರವಾಗಿ ಆರಂಭಿಕರಾಗಿ ಬಂದ ನಾಯಕ ಫಾಫ್‌ (8) ಬೇಗನೆ ನಿರ್ಗಮಿಸಿದರು. ಬಳಿಕ ಬಂದ ಕ್ಯಾಮರೋನ್‌ ಗ್ರೀನ್‌ (33) ಮತ್ತು ಗ್ಲೇನ್‌ ಮ್ಯಾಕ್ಸ್‌ವೆಲ್‌ (28) ಕೊಂಚ ಕಾಡಿದರು. ರಜತ್‌ ಪಟಿದರ್‌ (3), ಅನುಜ್‌ ರಾವತ್‌ (3), ಕೊನೆಯಲ್ಲಿ ಅಬ್ಬರಿಸಿದ ದಿನೇಶ್‌ ಕಾರ್ತಿಕ್‌ (20) ಕ್ಯಾಮಿಯೋ ನೀಡಿದರು.

ವಿರಾಟ್‌ ಇನ್ನಿಂಗ್ಸ್‌: ಇತ್ತ ಆರಂಭದಲ್ಲೇ ವಿಕೆಟ್‌ ಕಳೆದುಕೊಂಡ ಆರ್‌ಸಿಬಿಗೆ ಮತ್ತೊಮ್ಮೆ ರನ್‌ ಮೆಷಿನ್‌ ಆಸರೆಯಾದರು. ಒಂದೆಡೆ ವಿಕೆಟ್‌ ಬೀಳುತ್ತಿದ್ದರೂ ಮತ್ತೊಂದೆಡೆ ಗಟ್ಟಿಯಾಗಿ ನಿಂತು ಇನ್ನಿಂಗ್ಸ್‌ ಕಟ್ಟಿದ ಕೊಹ್ಲಿ ಕೆಕೆಆರ್‌ ಬೌಲರ್‌ಗಳನ್ನು ಕಾಡಿದರು. ಸಂಪೂರ್ಣ ಇನ್ನಿಂಗ್ಸ್‌ ನಾಟ್‌ ಔಟ್‌ ಆದ ಕೊಹ್ಲಿ ತಂಡವನ್ನು ಸ್ಪರ್ಧಾತ್ಮಕ ಮೊತ್ತದತ್ತ ಕೊಂಡೊಯ್ದರು. ಅವರು ತಮ್ಮ ಇನ್ನಿಂಗ್ಸ್‌ನಲ್ಲಿ 59 ಎಸೆತಗಳನ್ನು ಎದುರಿಸಿ 4 ಬೌಂಡರಿ ಮತ್ತು 4 ಸಿಕ್ಸರ್‌ ಸಹಿತ 83 ರನ್‌ ಕಲೆಹಾಕಿದರು.

ಕೆಕೆಆರ್ ಪರ ಹರ್ಷಿತ್‌ ರಾಣಾ ಮತ್ತು ರಸೆಲ್ ಅವರು ತಲಾ ಎರಡು ವಿಕೆಟ್ ಕಬಳಿಸಿದರು. ಸುನಿಲ್ ನರೇನ್ ಒಂದು ವಿಕೆಟ್ ಪಡೆದು ಗಮನ ಸೆಳೆದರು

ಕೊಲ್ಕತ್ತಾ ಇನಿಂಗ್ಸ್: ಅರ್ಸಿಬಿ ನೀಡಿದ ಸ್ಪರ್ಧಾತ್ಮಕ ಮೊತ್ತ ಬೆನ್ನಟ್ಟಿದ ಕೆಕೆಆರ್ ಉತ್ತಮ ಆರಂಭ ಪಡೆಯಿತು. ಅರಂಭಿಕರಾಗಿ ಬಂದ ಫಿಲಿಪ್ ಸಾಲ್ಟ್ (30) ಮತ್ತು ಬೌಲರ್ ಕಂ ಬ್ಯಾಟ್ಸ್‌ಮನ್‌ ಸುನೀಲ್‌ ನರೈನ್‌ 22 ಎಸೆತಗಳಲ್ಲಿ 2 ಬೌಂಡರಿ 5 ಸಿಕ್ಸರ್ ಸಹಿತ 47 ರನ್ ಬಾರಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 86 ರನ್ ಗಳ ಭರ್ಜರಿ ಜೊತೆಯಾಟ ನೀಡಿದರು.

ಈ ಇಬ್ಬರು ಆರಂಭಿಕರ ನಿರ್ಗಮನದ ನಂತರ ಜೊತೆಯಾದ ಶ್ರೇಯಸ್ ಆಯ್ಯರ್ ಹಾಗೂ ವೆಂಕಟೇಶ್ ಅಯ್ಯರ್ ಪಂದ್ಯವನ್ನು ಕೆಕೆಆರ್ ನತ್ತ ವಾಲಿಸಿದರು. ವೆಂಕಟೇಶ್‌ ಅಯ್ಯರ್‌ 30 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್‌ ಸೇರಿದಂತೆ 50 ರನ್‌ ಬಾರಿಸಿದರೇ, ನಾಯಕ ಶ್ರೇಯಸ್‌ ಅಯ್ಯರ್‌ ಓಟಾಗದೇ (39) ರನ್‌ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ರಿಂಕು ಸಿಂಗ್‌ ಗೆಲುವಿಗೆ (5) ರನ್‌ ಕಾಣಿಕೆ ನೀಡಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

2 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

3 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago