ಕ್ರೀಡೆ

IPL 2024: ಗುಜರಾತ್‌ ಬೌಲಿಂಗ್‌ ದಾಳಿಗೆ ಶರಣಾದ ಚೆನ್ನೈ ಸೂಪರ್‌ ಕಿಂಗ್ಸ್

ಅಹ್ಮದಾಬಾದ್:‌ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ನ 59ನೇ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಗುಜರಾತ್‌ ಟೈಟನ್ಸ್‌ 35 ರನ್‌ಗಳ ಗೆಲುವನ್ನು ದಾಖಲಿಸಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ಫೀಲ್ಡಿಂಗ್‌ ಆರಿಸಿಕೊಂಡು ಗುಜರಾತ್‌ ಟೈಟನ್ಸ್‌ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಟೈಟನ್ಸ್‌ ಸಾಯಿ ಸುದರ್ಶನ್‌ ಮತ್ತು ಶುಭ್‌ಮನ್ ಗಿಲ್‌ ಶತಕಗಳ ನೆರವಿನಿಂದ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 231 ರನ್‌ ಕಲೆಹಾಕಿ 232 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಲು ಯತ್ನಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಗುಜರಾತ್‌ ಟೈಟನ್ಸ್‌ ಬೌಲಿಂಗ್‌ ದಾಳಿಗೆ ಮಂಕಾಗಿ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 196 ರನ್‌ ಗಳಿಸಿತು.

ಗುಜರಾತ್‌ ಟೈಟನ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಸಾಯಿ ಸುದರ್ಶನ್‌ ಹಾಗೂ ನಾಯಕ ಶುಭ್‌ಮನ್ ಗಿಲ್‌ 17.2 ಓವರ್‌ಗಳಲ್ಲಿ 210 ರನ್‌ಗಳ ಜತೆಯಾಟವನ್ನಾಡಿದರು. ಸಾಯಿ ಸುದರ್ಶನ್‌ 51 ಎಸೆತಗಳಲ್ಲಿ 5 ಬೌಂಡರಿ ಹಾಗೂ 7 ಸಿಕ್ಸರ್‌ ಸಹಿತ 103 ರನ್‌ ಗಳಿಸಿದರೆ, ಶುಭ್‌ಮನ್‌ ಗಿಲ್‌ ‌55 ಎಸೆತಗಳಲ್ಲಿ 9 ಬೌಂಡರಿ ಹಾಗೂ 6 ಸಿಕ್ಸರ್‌ ಸಹಿತ 104 ರನ್‌ ಗಳಿಸಿದರು. ಇನ್ನುಳಿದಂತೆ ಶಾರುಖ್‌ ಖಾನ್‌ 2 (3) ರನ್‌ ಮತ್ತು ಡೇವಿಡ್‌ ಮಿಲ್ಲರ್‌ ಅಜೇಯ 16 (11) ರನ್‌ ಬಾರಿಸಿದರು.

ಚೆನ್ನೈ ಸೂಪರ್‌ ಕಿಂಗ್ಸ್‌ ಪರ ತುಷಾರ್‌ ದೇಶಪಾಂಡೆ 2 ವಿಕೆಟ್‌ ಪಡೆದರು.

ಚೆನ್ನೈ ಸೂಪರ್‌ ಕಿಂಗ್ಸ್‌ ಇನ್ನಿಂಗ್ಸ್: ಚೆನ್ನೈ ಟಾಪ್‌ ಆರ್ಡರ್‌ ವಿಫಲತೆಯಿಂದ 10 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡಿತು. ಆರಂಭಿಕರಾದ ಅಜಿಂಕ್ಯ ರಹಾನೆ 1 (5) ರನ್‌ ಮತ್ತು ರಚಿನ್‌ ರವೀಂದ್ರ 1 (2) ರನ್‌ ಗಳಿಸಿದರೆ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ರುತುರಾಜ್‌ ಗಾಯಕ್ವಾಡ್‌ ಡಕ್‌ಔಟ್‌ ಆದರು. ಈ ಸಂದರ್ಭದಲ್ಲಿ ನಾಲ್ಕನೇ ವಿಕೆಟ್‌ಗೆ ಜತೆಯಾದ ಡೆರಿಲ್‌ ಮಿಚೆಲ್‌ ಮತ್ತು ಮೊಯಿನ್‌ ಅಲಿ 109 ರನ್‌ಗಳ ಜತೆಯಾಟವಾಡುವ ಮೂಲಕ ಆಸರೆಯಾದರು. ಡೆರಿಲ್‌ ಮಿಚೆಲ್‌ 63 (34) ರನ್‌ ಗಳಿಸಿದರೆ, ಮೊಯಿನ್‌ ಅಲಿ 56 (36) ರನ್‌ ಬಾರಿಸಿದರು. ಆದರೆ ಬಳಿಕ ಕಣಕ್ಕಿಳಿದ ಯಾರೂ ಸಹ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವ ಇನ್ನಿಂಗ್ಸ್‌ ಆಡಲಿಲ್ಲ. ಶಿವಮ್‌ ದುಬೆ 21 (13) ರನ್‌, ರವೀಂದ್ರ ಜಡೇಜಾ 18 (10) ರನ್‌, ಮಿಚೆಲ್‌ ಸ್ಯಾಂಟ್ನರ್‌ ಡಕ್‌ಔಟ್‌, ಶಾರ್ದೂಲ್‌ ಠಾಕೂರ್‌ ‌ಅಜೇಯ 3 (4) ರನ್‌ ಮತ್ತು ಎಂಎಸ್‌ ಧೋನಿ ಅಜೇಯ 26 (11) ರನ್‌ ಗಳಿಸಿದರು.

ಗುಜರಾತ್‌ ಟೈಟನ್ಸ್ ಪರ ಮೋಹಿತ್‌ ಶರ್ಮಾ 3 ವಿಕೆಟ್‌, ರಶೀದ್‌ ಖಾನ್ 2 ವಿಕೆಟ್‌, ಸಂದೀಪ್‌ ವಾರಿಯರ್‌ ಮತ್ತು ಉಮೇಶ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

7 hours ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

7 hours ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

7 hours ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

7 hours ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

10 hours ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

10 hours ago