ಕ್ರೀಡೆ

IPL 2024: ಮುಂಬೈ ಮಣಿಸಿ ಶುಭಾರಂಭ ಮಾಡಿದ ಗುಜರಾತ್‌ ಟೈಟನ್ಸ್‌

ಅಹ್ಮದಾಬಾದ್:‌ ಇಲ್ಲಿನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಗುಜರಾತ್‌ ಟೈಟನ್ಸ್‌ ತಂಡ ಮುಂಬೈ ಇಂಡಿಯನ್ಸ್‌ ವಿರುದ್ಧ 6 ರನ್‌ಗಳ ಗೆಲುವನ್ನು ಸಾಧಿಸಿ ಶುಭಾರಂಭ ಮಾಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ಫೀಲ್ಡಿಂಗ್‌ ಆಯ್ದುಕೊಂಡು ಎದುರಾಳಿ ಗುಜರಾತ್‌ ಟೈಟನ್ಸ್‌ ತಂಡವನ್ನು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಅದರಂತೆ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 168 ರನ್‌ ಕಲೆಹಾಕಿದ ಗುಜರಾತ್‌ ಟೈಟನ್ಸ್‌ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಗೆಲ್ಲಲು 169 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್‌ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 162 ರನ್‌ ಕಲೆಹಾಕಿದೆ.

ಗುಜರಾತ್‌ ಟೈಟನ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ವೃದ್ಧಿಮಾನ್‌ ಸಹಾ 19 (15) ಮತ್ತು ನಾಯಕ ಶುಭ್‌ಮನ್‌ ಗಿಲ್‌ 31 (22) ರನ್‌ ಕಲೆಹಾಕಿದರೆ, ಸಾಯಿ ಸುದರ್ಶನ್‌ 45 (39), ಅಜ್ಮತ್‌ಉಲ್ಲಾ ಒಮಾರ್ಜೈ 17 (11), ಡೇವಿಡ್‌ ಮಿಲ್ಲರ್‌ 12 (11), ರಾಹುಲ್‌ ತೆವಾಟಿಯ 22 (15), ವಿಜಯ್‌ ಶಂಕರ್‌ ಅಜೇಯ ಅಜೇಯ 6(5) ಮತ್ತು ರಶೀದ್‌ ಖಾನ್‌ ಅಜೇಯ 4 (3) ರನ್‌ ಕಲೆಹಾಕಿದರು.

ಮುಂಬೈ ಇಂಡಿಯನ್ಸ್‌ ಪರ ಜಸ್‌ಪ್ರೀತ್‌ ಬುಮ್ರಾ 3 ವಿಕೆಟ್‌, ಗೆರಾಲ್ಡ್‌ ಸೊಯೆಟ್ಜೆ 2 ಮತ್ತು ಪಿಯೂಷ್‌ ಚಾವ್ಲಾ ಒಂದು ವಿಕೆಟ್‌ ಪಡೆದರು.

ಮುಂಬೈ ಇಂಡಿಯನ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಇಶಾನ್‌ ಕಿಶನ್‌ ಮೊದಲ ಓವರ್‌ನಲ್ಲಿಯೇ ಯಾವುದೇ ರನ್ ಗಳಿಸದೇ ಔಟ್‌ ಆಗಿ ನಿರಾಸೆ ಮೂಡಿಸಿದರು. ರೋಹಿತ್‌ ಶರ್ಮಾ ಹಾಗೂ ಡೆವಾಲ್ಡ್‌ ಬ್ರೆವಿಸ್‌ ಗಮನಾರ್ಹ ಪ್ರದರ್ಶನ ನೀಡಿದರಾದರೂ ನಂತರ ಬಂದ ಆಟಗಾರರು ಗುಜರಾತ್‌ ಬೌಲಿಂಗ್‌ ದಾಳಿ, ಉತ್ತಮ ಕ್ಷೇತ್ರರಕ್ಷಣೆಯ ಎದುರು ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾಗಲಿಲ್ಲ. ರೋಹಿತ್‌ ಶರ್ಮಾ 43 (29) ರನ್‌, ನಮನ್‌ ಧೀರ್‌ 20 (10) ರನ್‌, ಡಿವಾಲ್ಡ್‌ ಬ್ರೆವಿಸ್‌ 46 (38) ರನ್‌, ಟಿಮ್‌ ಡೇವಿಡ್‌ 11 (10) ರನ್‌, ತಿಲಕ್‌ ವರ್ಮಾ 25 (19) ರನ್‌, ನಾಯಕ ಹಾರ್ದಿಕ್‌ ಪಾಂಡ್ಯ 11 (4) ರನ್‌, ಗೆರಾಲ್ಡ್‌ ಸೋಯೆಟ್ಜೆ 1 (3) ರನ್‌, ಪಿಯೂಷ್‌ ಚಾವ್ಲಾ ಡಕ್‌ಔಟ್‌, ಜಸ್‌ಪ್ರೀತ್‌ ಬುಮ್ರಾ ಅಜೇಯ 1 (1) ರನ್‌ ಮತ್ತು ಶಾಮ್ಸ್‌ ಮುಲಾನಿ ಅಜೇಯ 1 (1) ರನ್‌ ಕಲೆಹಾಕಿದರು.

ಗುಜರಾತ್‌ ಟೈಟನ್ಸ್‌ ಪರ ಅಜ್ಮತ್‌ಉಲ್ಲಾ ಒಮಾರ್ಜೈ 2, ಉಮೇಶ್‌ ಯಾದವ್‌ 2, ಸ್ಪೆನ್ಸರ್‌ ಜಾನ್ಸನ್‌ 2, ಮೋಹಿತ್‌ ಶರ್ಮಾ 2 ಹಾಗೂ ರವಿಶ್ರೀನಿವಾಸನ್‌ ಸಾಯಿ ಕಿಶೋರ್‌ 1 ವಿಕೆಟ್‌ ಪಡೆದರು.

andolana

Recent Posts

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

1 hour ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

1 hour ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

1 hour ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

1 hour ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

2 hours ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

2 hours ago