ಕ್ರೀಡೆ

IPL 2024: ಮುಂಬೈ ಮಣಿಸಿ ಶುಭಾರಂಭ ಮಾಡಿದ ಗುಜರಾತ್‌ ಟೈಟನ್ಸ್‌

ಅಹ್ಮದಾಬಾದ್:‌ ಇಲ್ಲಿನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಗುಜರಾತ್‌ ಟೈಟನ್ಸ್‌ ತಂಡ ಮುಂಬೈ ಇಂಡಿಯನ್ಸ್‌ ವಿರುದ್ಧ 6 ರನ್‌ಗಳ ಗೆಲುವನ್ನು ಸಾಧಿಸಿ ಶುಭಾರಂಭ ಮಾಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ಫೀಲ್ಡಿಂಗ್‌ ಆಯ್ದುಕೊಂಡು ಎದುರಾಳಿ ಗುಜರಾತ್‌ ಟೈಟನ್ಸ್‌ ತಂಡವನ್ನು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಅದರಂತೆ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 168 ರನ್‌ ಕಲೆಹಾಕಿದ ಗುಜರಾತ್‌ ಟೈಟನ್ಸ್‌ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಗೆಲ್ಲಲು 169 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್‌ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 162 ರನ್‌ ಕಲೆಹಾಕಿದೆ.

ಗುಜರಾತ್‌ ಟೈಟನ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ವೃದ್ಧಿಮಾನ್‌ ಸಹಾ 19 (15) ಮತ್ತು ನಾಯಕ ಶುಭ್‌ಮನ್‌ ಗಿಲ್‌ 31 (22) ರನ್‌ ಕಲೆಹಾಕಿದರೆ, ಸಾಯಿ ಸುದರ್ಶನ್‌ 45 (39), ಅಜ್ಮತ್‌ಉಲ್ಲಾ ಒಮಾರ್ಜೈ 17 (11), ಡೇವಿಡ್‌ ಮಿಲ್ಲರ್‌ 12 (11), ರಾಹುಲ್‌ ತೆವಾಟಿಯ 22 (15), ವಿಜಯ್‌ ಶಂಕರ್‌ ಅಜೇಯ ಅಜೇಯ 6(5) ಮತ್ತು ರಶೀದ್‌ ಖಾನ್‌ ಅಜೇಯ 4 (3) ರನ್‌ ಕಲೆಹಾಕಿದರು.

ಮುಂಬೈ ಇಂಡಿಯನ್ಸ್‌ ಪರ ಜಸ್‌ಪ್ರೀತ್‌ ಬುಮ್ರಾ 3 ವಿಕೆಟ್‌, ಗೆರಾಲ್ಡ್‌ ಸೊಯೆಟ್ಜೆ 2 ಮತ್ತು ಪಿಯೂಷ್‌ ಚಾವ್ಲಾ ಒಂದು ವಿಕೆಟ್‌ ಪಡೆದರು.

ಮುಂಬೈ ಇಂಡಿಯನ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಇಶಾನ್‌ ಕಿಶನ್‌ ಮೊದಲ ಓವರ್‌ನಲ್ಲಿಯೇ ಯಾವುದೇ ರನ್ ಗಳಿಸದೇ ಔಟ್‌ ಆಗಿ ನಿರಾಸೆ ಮೂಡಿಸಿದರು. ರೋಹಿತ್‌ ಶರ್ಮಾ ಹಾಗೂ ಡೆವಾಲ್ಡ್‌ ಬ್ರೆವಿಸ್‌ ಗಮನಾರ್ಹ ಪ್ರದರ್ಶನ ನೀಡಿದರಾದರೂ ನಂತರ ಬಂದ ಆಟಗಾರರು ಗುಜರಾತ್‌ ಬೌಲಿಂಗ್‌ ದಾಳಿ, ಉತ್ತಮ ಕ್ಷೇತ್ರರಕ್ಷಣೆಯ ಎದುರು ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾಗಲಿಲ್ಲ. ರೋಹಿತ್‌ ಶರ್ಮಾ 43 (29) ರನ್‌, ನಮನ್‌ ಧೀರ್‌ 20 (10) ರನ್‌, ಡಿವಾಲ್ಡ್‌ ಬ್ರೆವಿಸ್‌ 46 (38) ರನ್‌, ಟಿಮ್‌ ಡೇವಿಡ್‌ 11 (10) ರನ್‌, ತಿಲಕ್‌ ವರ್ಮಾ 25 (19) ರನ್‌, ನಾಯಕ ಹಾರ್ದಿಕ್‌ ಪಾಂಡ್ಯ 11 (4) ರನ್‌, ಗೆರಾಲ್ಡ್‌ ಸೋಯೆಟ್ಜೆ 1 (3) ರನ್‌, ಪಿಯೂಷ್‌ ಚಾವ್ಲಾ ಡಕ್‌ಔಟ್‌, ಜಸ್‌ಪ್ರೀತ್‌ ಬುಮ್ರಾ ಅಜೇಯ 1 (1) ರನ್‌ ಮತ್ತು ಶಾಮ್ಸ್‌ ಮುಲಾನಿ ಅಜೇಯ 1 (1) ರನ್‌ ಕಲೆಹಾಕಿದರು.

ಗುಜರಾತ್‌ ಟೈಟನ್ಸ್‌ ಪರ ಅಜ್ಮತ್‌ಉಲ್ಲಾ ಒಮಾರ್ಜೈ 2, ಉಮೇಶ್‌ ಯಾದವ್‌ 2, ಸ್ಪೆನ್ಸರ್‌ ಜಾನ್ಸನ್‌ 2, ಮೋಹಿತ್‌ ಶರ್ಮಾ 2 ಹಾಗೂ ರವಿಶ್ರೀನಿವಾಸನ್‌ ಸಾಯಿ ಕಿಶೋರ್‌ 1 ವಿಕೆಟ್‌ ಪಡೆದರು.

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago