ಕ್ರೀಡೆ

IPL 2024: ಮುಂಬೈ ಮಣಿಸಿ ಶುಭಾರಂಭ ಮಾಡಿದ ಗುಜರಾತ್‌ ಟೈಟನ್ಸ್‌

ಅಹ್ಮದಾಬಾದ್:‌ ಇಲ್ಲಿನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಗುಜರಾತ್‌ ಟೈಟನ್ಸ್‌ ತಂಡ ಮುಂಬೈ ಇಂಡಿಯನ್ಸ್‌ ವಿರುದ್ಧ 6 ರನ್‌ಗಳ ಗೆಲುವನ್ನು ಸಾಧಿಸಿ ಶುಭಾರಂಭ ಮಾಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ಫೀಲ್ಡಿಂಗ್‌ ಆಯ್ದುಕೊಂಡು ಎದುರಾಳಿ ಗುಜರಾತ್‌ ಟೈಟನ್ಸ್‌ ತಂಡವನ್ನು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಅದರಂತೆ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 168 ರನ್‌ ಕಲೆಹಾಕಿದ ಗುಜರಾತ್‌ ಟೈಟನ್ಸ್‌ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಗೆಲ್ಲಲು 169 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್‌ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 162 ರನ್‌ ಕಲೆಹಾಕಿದೆ.

ಗುಜರಾತ್‌ ಟೈಟನ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ವೃದ್ಧಿಮಾನ್‌ ಸಹಾ 19 (15) ಮತ್ತು ನಾಯಕ ಶುಭ್‌ಮನ್‌ ಗಿಲ್‌ 31 (22) ರನ್‌ ಕಲೆಹಾಕಿದರೆ, ಸಾಯಿ ಸುದರ್ಶನ್‌ 45 (39), ಅಜ್ಮತ್‌ಉಲ್ಲಾ ಒಮಾರ್ಜೈ 17 (11), ಡೇವಿಡ್‌ ಮಿಲ್ಲರ್‌ 12 (11), ರಾಹುಲ್‌ ತೆವಾಟಿಯ 22 (15), ವಿಜಯ್‌ ಶಂಕರ್‌ ಅಜೇಯ ಅಜೇಯ 6(5) ಮತ್ತು ರಶೀದ್‌ ಖಾನ್‌ ಅಜೇಯ 4 (3) ರನ್‌ ಕಲೆಹಾಕಿದರು.

ಮುಂಬೈ ಇಂಡಿಯನ್ಸ್‌ ಪರ ಜಸ್‌ಪ್ರೀತ್‌ ಬುಮ್ರಾ 3 ವಿಕೆಟ್‌, ಗೆರಾಲ್ಡ್‌ ಸೊಯೆಟ್ಜೆ 2 ಮತ್ತು ಪಿಯೂಷ್‌ ಚಾವ್ಲಾ ಒಂದು ವಿಕೆಟ್‌ ಪಡೆದರು.

ಮುಂಬೈ ಇಂಡಿಯನ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಇಶಾನ್‌ ಕಿಶನ್‌ ಮೊದಲ ಓವರ್‌ನಲ್ಲಿಯೇ ಯಾವುದೇ ರನ್ ಗಳಿಸದೇ ಔಟ್‌ ಆಗಿ ನಿರಾಸೆ ಮೂಡಿಸಿದರು. ರೋಹಿತ್‌ ಶರ್ಮಾ ಹಾಗೂ ಡೆವಾಲ್ಡ್‌ ಬ್ರೆವಿಸ್‌ ಗಮನಾರ್ಹ ಪ್ರದರ್ಶನ ನೀಡಿದರಾದರೂ ನಂತರ ಬಂದ ಆಟಗಾರರು ಗುಜರಾತ್‌ ಬೌಲಿಂಗ್‌ ದಾಳಿ, ಉತ್ತಮ ಕ್ಷೇತ್ರರಕ್ಷಣೆಯ ಎದುರು ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾಗಲಿಲ್ಲ. ರೋಹಿತ್‌ ಶರ್ಮಾ 43 (29) ರನ್‌, ನಮನ್‌ ಧೀರ್‌ 20 (10) ರನ್‌, ಡಿವಾಲ್ಡ್‌ ಬ್ರೆವಿಸ್‌ 46 (38) ರನ್‌, ಟಿಮ್‌ ಡೇವಿಡ್‌ 11 (10) ರನ್‌, ತಿಲಕ್‌ ವರ್ಮಾ 25 (19) ರನ್‌, ನಾಯಕ ಹಾರ್ದಿಕ್‌ ಪಾಂಡ್ಯ 11 (4) ರನ್‌, ಗೆರಾಲ್ಡ್‌ ಸೋಯೆಟ್ಜೆ 1 (3) ರನ್‌, ಪಿಯೂಷ್‌ ಚಾವ್ಲಾ ಡಕ್‌ಔಟ್‌, ಜಸ್‌ಪ್ರೀತ್‌ ಬುಮ್ರಾ ಅಜೇಯ 1 (1) ರನ್‌ ಮತ್ತು ಶಾಮ್ಸ್‌ ಮುಲಾನಿ ಅಜೇಯ 1 (1) ರನ್‌ ಕಲೆಹಾಕಿದರು.

ಗುಜರಾತ್‌ ಟೈಟನ್ಸ್‌ ಪರ ಅಜ್ಮತ್‌ಉಲ್ಲಾ ಒಮಾರ್ಜೈ 2, ಉಮೇಶ್‌ ಯಾದವ್‌ 2, ಸ್ಪೆನ್ಸರ್‌ ಜಾನ್ಸನ್‌ 2, ಮೋಹಿತ್‌ ಶರ್ಮಾ 2 ಹಾಗೂ ರವಿಶ್ರೀನಿವಾಸನ್‌ ಸಾಯಿ ಕಿಶೋರ್‌ 1 ವಿಕೆಟ್‌ ಪಡೆದರು.

andolana

Recent Posts

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

13 mins ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

16 mins ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

18 mins ago

ಓದುಗರ ಪತ್ರ: ಭರಚುಕ್ಕಿ ಜಲಪಾತ ಸಂಪರ್ಕ ರಸ್ತೆ ದುರಸ್ತಿ ಮಾಡಿ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…

20 mins ago

ರೋಮಾಂಚನಕಾರಿ ಜಲ ಸಾಹಸ ಕ್ರೀಡೋತ್ಸವ…

ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…

22 mins ago

ಸಂಘರ್ಷದ ಸಮಯದಲ್ಲಿ ಭಾರತೀಯ ಸೇನೆ ಅನಾಥ..!

ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…

26 mins ago