ಕ್ರೀಡೆ

IPL 2024: ಮುಂಬೈ ಮಣಿಸಿ ಶುಭಾರಂಭ ಮಾಡಿದ ಗುಜರಾತ್‌ ಟೈಟನ್ಸ್‌

ಅಹ್ಮದಾಬಾದ್:‌ ಇಲ್ಲಿನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಗುಜರಾತ್‌ ಟೈಟನ್ಸ್‌ ತಂಡ ಮುಂಬೈ ಇಂಡಿಯನ್ಸ್‌ ವಿರುದ್ಧ 6 ರನ್‌ಗಳ ಗೆಲುವನ್ನು ಸಾಧಿಸಿ ಶುಭಾರಂಭ ಮಾಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ಫೀಲ್ಡಿಂಗ್‌ ಆಯ್ದುಕೊಂಡು ಎದುರಾಳಿ ಗುಜರಾತ್‌ ಟೈಟನ್ಸ್‌ ತಂಡವನ್ನು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಅದರಂತೆ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 168 ರನ್‌ ಕಲೆಹಾಕಿದ ಗುಜರಾತ್‌ ಟೈಟನ್ಸ್‌ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಗೆಲ್ಲಲು 169 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್‌ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 162 ರನ್‌ ಕಲೆಹಾಕಿದೆ.

ಗುಜರಾತ್‌ ಟೈಟನ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ವೃದ್ಧಿಮಾನ್‌ ಸಹಾ 19 (15) ಮತ್ತು ನಾಯಕ ಶುಭ್‌ಮನ್‌ ಗಿಲ್‌ 31 (22) ರನ್‌ ಕಲೆಹಾಕಿದರೆ, ಸಾಯಿ ಸುದರ್ಶನ್‌ 45 (39), ಅಜ್ಮತ್‌ಉಲ್ಲಾ ಒಮಾರ್ಜೈ 17 (11), ಡೇವಿಡ್‌ ಮಿಲ್ಲರ್‌ 12 (11), ರಾಹುಲ್‌ ತೆವಾಟಿಯ 22 (15), ವಿಜಯ್‌ ಶಂಕರ್‌ ಅಜೇಯ ಅಜೇಯ 6(5) ಮತ್ತು ರಶೀದ್‌ ಖಾನ್‌ ಅಜೇಯ 4 (3) ರನ್‌ ಕಲೆಹಾಕಿದರು.

ಮುಂಬೈ ಇಂಡಿಯನ್ಸ್‌ ಪರ ಜಸ್‌ಪ್ರೀತ್‌ ಬುಮ್ರಾ 3 ವಿಕೆಟ್‌, ಗೆರಾಲ್ಡ್‌ ಸೊಯೆಟ್ಜೆ 2 ಮತ್ತು ಪಿಯೂಷ್‌ ಚಾವ್ಲಾ ಒಂದು ವಿಕೆಟ್‌ ಪಡೆದರು.

ಮುಂಬೈ ಇಂಡಿಯನ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಇಶಾನ್‌ ಕಿಶನ್‌ ಮೊದಲ ಓವರ್‌ನಲ್ಲಿಯೇ ಯಾವುದೇ ರನ್ ಗಳಿಸದೇ ಔಟ್‌ ಆಗಿ ನಿರಾಸೆ ಮೂಡಿಸಿದರು. ರೋಹಿತ್‌ ಶರ್ಮಾ ಹಾಗೂ ಡೆವಾಲ್ಡ್‌ ಬ್ರೆವಿಸ್‌ ಗಮನಾರ್ಹ ಪ್ರದರ್ಶನ ನೀಡಿದರಾದರೂ ನಂತರ ಬಂದ ಆಟಗಾರರು ಗುಜರಾತ್‌ ಬೌಲಿಂಗ್‌ ದಾಳಿ, ಉತ್ತಮ ಕ್ಷೇತ್ರರಕ್ಷಣೆಯ ಎದುರು ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾಗಲಿಲ್ಲ. ರೋಹಿತ್‌ ಶರ್ಮಾ 43 (29) ರನ್‌, ನಮನ್‌ ಧೀರ್‌ 20 (10) ರನ್‌, ಡಿವಾಲ್ಡ್‌ ಬ್ರೆವಿಸ್‌ 46 (38) ರನ್‌, ಟಿಮ್‌ ಡೇವಿಡ್‌ 11 (10) ರನ್‌, ತಿಲಕ್‌ ವರ್ಮಾ 25 (19) ರನ್‌, ನಾಯಕ ಹಾರ್ದಿಕ್‌ ಪಾಂಡ್ಯ 11 (4) ರನ್‌, ಗೆರಾಲ್ಡ್‌ ಸೋಯೆಟ್ಜೆ 1 (3) ರನ್‌, ಪಿಯೂಷ್‌ ಚಾವ್ಲಾ ಡಕ್‌ಔಟ್‌, ಜಸ್‌ಪ್ರೀತ್‌ ಬುಮ್ರಾ ಅಜೇಯ 1 (1) ರನ್‌ ಮತ್ತು ಶಾಮ್ಸ್‌ ಮುಲಾನಿ ಅಜೇಯ 1 (1) ರನ್‌ ಕಲೆಹಾಕಿದರು.

ಗುಜರಾತ್‌ ಟೈಟನ್ಸ್‌ ಪರ ಅಜ್ಮತ್‌ಉಲ್ಲಾ ಒಮಾರ್ಜೈ 2, ಉಮೇಶ್‌ ಯಾದವ್‌ 2, ಸ್ಪೆನ್ಸರ್‌ ಜಾನ್ಸನ್‌ 2, ಮೋಹಿತ್‌ ಶರ್ಮಾ 2 ಹಾಗೂ ರವಿಶ್ರೀನಿವಾಸನ್‌ ಸಾಯಿ ಕಿಶೋರ್‌ 1 ವಿಕೆಟ್‌ ಪಡೆದರು.

andolana

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

9 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

12 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

16 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago