ಕ್ರೀಡೆ

ಮುಂಬೈ ಇಂಡಿಯನ್ಸ್‌ ಅನ್‌ಫಾಲೋ ಮಾಡಿದ ಬುಮ್ರಾ; ಹಾರ್ದಿಕ್‌ ಆಗಮನದಿಂದ ಶುರುವಾಯಿತಾ ವೈಮನಸ್ಸು?

ನಿನ್ನೆ ( ನವೆಂಬರ್‌ 27 ) ಹಾರ್ದಿಕ್‌ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿ ಮತ್ತೆ ತಮ್ಮ ತಂಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದೆ. ಗುಜರಾತ್ ಟೈಟನ್ಸ್‌ ತಂಡದ ನಾಯಕನಾಗಿದ್ದ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ ಟ್ರೇಡಿಂಗ್‌ ಮೂಲಕ ಖರೀದಿಸಿದೆ.

ಈ ಹಿಂದೆ ಮುಂಬೈ ಇಂಡಿಯನ್ಸ್‌ ತಂಡದಲ್ಲಿಯೇ ಇದ್ದ ಹಾರ್ದಿಕ್‌ ಪಾಂಡ್ಯ 2022ರ ಐಪಿಎಲ್‌ ಹರಾಜಿಗೂ ಮುನ್ನ ತಂಡವನ್ನು ತ್ಯಜಿಸಿ ಆಗಷ್ಟೇ ಐಪಿಎಲ್‌ಗೆ ಕಾಲಿಟ್ಟಿದ್ದ ಗುಜರಾತ್‌ ಟೈಟನ್ಸ್‌ ತಂಡವನ್ನು ಸೇರಿಕೊಂಡಿದ್ದರು. ನಾಯಕನಾಗಿ ಆ ಸೀಸನ್‌ನಲ್ಲಿ ಗುಜರಾತ್ ಟೈಟನ್ಸ್‌ ತಂಡವನ್ನು ಪ್ರತಿನಿಧಿಸಿದ್ದ ಪಾಂಡ್ಯ ತಂಡವನ್ನು ಚಾಂಪಿಯನ್‌ ಮಾಡುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೇ ಈ ಬಾರಿಯ ಐಪಿಎಲ್‌ನಲ್ಲಿ ಗುಜರಾತ್ ಟೈಟನ್ಸ್‌ ತಂಡವನ್ನು ಫೈನಲ್‌ ಹಂತದವರೆಗೂ ಪಾಂಡ್ಯ ತಂದಿದ್ದರು.

ಹೀಗೆ ಎರಡು ಸೀಸನ್‌ನಲ್ಲಿ ಅದ್ಭುತವಾಗಿ ಗುಜರಾತ್‌ ಟೈಟನ್ಸ್‌ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್‌ ಪಾಂಡ್ಯ ಇದೀಗ ಮುಂಬೈ ಇಂಡಿಯನ್ಸ್‌ಗೆ ಮರಳಿದ್ದು, ಹಾರ್ದಿಕ್‌ ತಂಡಕ್ಕೆ ವಾಪಸ್ಸಾದ ಬೆನ್ನಲ್ಲೇ ತಂಡದ ಮತ್ತೋರ್ವ ಆಟಗಾರ ಜಸ್‌ಪ್ರೀತ್‌ ಬುಮ್ರಾ ಸಾಮಾಜಿಕ ಜಾಲತಾಣದಲ್ಲಿ ವಿಚಿತ್ರ ಸ್ಟೋರಿ ಹಂಚಿಕೊಳ್ಳುವ ಮೂಲಕ ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಭಿನ್ನಮತವಿದೆ ಎಂಬ ಅನುಮಾನ ಮೂಡುವಂತೆ ಮಾಡಿದ್ದಾರೆ.

ಹೌದು, ಜಸ್‌ಪ್ರೀತ್‌ ಬುಮ್ರಾ ʼಕೆಲವೊಮ್ಮೆ ನಿಶಬ್ದವೇ ಅತ್ಯುತ್ತಮ ಉತ್ತರʼ ಎಂಬ ಸ್ಟೋರಿಯನ್ನು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಲವು ವರ್ಷಗಳಿಂದ ಮುಂಬೈ ಇಂಡಿಯನ್ಸ್ ಆಟಗಾರನಾಗಿದ್ದ ಬುಮ್ರಾ ತಂಡದ ಮುಂದಿನ ನಾಯಕನಾಗುವ ಸಾಧ್ಯತೆಗಳಿತ್ತು, ಆದರೆ ಪಾಂಡ್ಯ ಆಗಮನದಿಂದ ರೋಹಿತ್‌ ಬಳಿಕ ನಾಯಕತ್ವ ಕೈತಪ್ಪಲಿದೆ, ಹೀಗಾಗಿ ಬುಮ್ರಾ ಇಂತಹ ಸ್ಟೋರಿ ಹಂಚಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಅಲ್ಲದೇ ಬುಮ್ರಾ ಮುಂಬೈ ಇಂಡಿಯನ್ಸ್‌ ಇನ್ಸ್ಟಾಗ್ರಾಮ್‌ ಖಾತೆಯನ್ನು ಅನ್‌ಫಾಲೋ ಮಾಡಿರುವುದು ಈ ವದಂತಿಗೆ ರೆಕ್ಕೆ ಪುಕ್ಕ ಬರುವಂತೆ ಮಾಡಿವೆ. ಇಷ್ಟು ದಿನಗಳವರೆಗೆ ಮುಂಬೈ ಇಂಡಿಯನ್ಸ್‌ ಫಾಲೋ ಮಾಡಿ ಇದೀಗ ಅನ್‌ಫಾಲೋ ಮಾಡಿರುವ ಬುಮ್ರಾ ತಂಡ ಬಿಟ್ಟು ಬೇರೆ ಫ್ರಾಂಚೈಸಿಯನ್ನೇನಾದರೂ ಸೇರಲಿದ್ದಾರಾ ಎಂಬ ಅನುಮಾನ ಮೂಡಿಸಿದೆ.

andolana

Recent Posts

ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ: ಬಸ್‌ ಹರಿದು ಯುವತಿ ಸಾವು

ಬೆಂಗಳೂರು: ಕಿಲ್ಲರ್‌ ಬಿಎಂಟಿಸಿ ಬಸ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್‌ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…

23 mins ago

ಬೆಂಗಳೂರಿನಲ್ಲಿ ಮತ್ತೆ ಹೆಚ್ಚಿದ ಚಳಿಯ ಅಬ್ಬರ: ತಾಪಮಾನ ಎಷ್ಟಿದೆ ಗೊತ್ತಾ?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮತ್ತೆ ಚಳಿಯ ಅಬ್ಬರ ಜೋರಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕೆಲ…

35 mins ago

ಮೆಟ್ರೋ ದರ ಹೆಚ್ಚಳ ವಿಚಾರ: ಚೇರ್ಮನ್‌ ಜೊತೆ ಮಾತುಕತೆ ನಡೆಸುತ್ತೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ಮೆಟ್ರೋ ದರ ಶೇಕಡಾ.5ರಷ್ಟು ಹೆಚ್ಚಳ ಸಂಬಂಧ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್‌ ಜೊತೆ ಮಾತನಾಡುವೆ ಎಂದು ಡಿಸಿಎಂ…

51 mins ago

ಮೈಸೂರು: 140 ಕೋಟಿ ಮೌಲ್ಯದ ಜಾಗ ಅತಿಕ್ರಮಣ ತೆರವು ಕಾರ್ಯಾಚರಣೆ

ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು.…

1 hour ago

ದ್ವಿಚಕ್ರ ವಾಹನ ಮತ್ತು ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

2 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

5 hours ago