ಕ್ರೀಡೆ

ಮುಂಬೈ ಇಂಡಿಯನ್ಸ್‌ ಅನ್‌ಫಾಲೋ ಮಾಡಿದ ಬುಮ್ರಾ; ಹಾರ್ದಿಕ್‌ ಆಗಮನದಿಂದ ಶುರುವಾಯಿತಾ ವೈಮನಸ್ಸು?

ನಿನ್ನೆ ( ನವೆಂಬರ್‌ 27 ) ಹಾರ್ದಿಕ್‌ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿ ಮತ್ತೆ ತಮ್ಮ ತಂಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದೆ. ಗುಜರಾತ್ ಟೈಟನ್ಸ್‌ ತಂಡದ ನಾಯಕನಾಗಿದ್ದ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ ಟ್ರೇಡಿಂಗ್‌ ಮೂಲಕ ಖರೀದಿಸಿದೆ.

ಈ ಹಿಂದೆ ಮುಂಬೈ ಇಂಡಿಯನ್ಸ್‌ ತಂಡದಲ್ಲಿಯೇ ಇದ್ದ ಹಾರ್ದಿಕ್‌ ಪಾಂಡ್ಯ 2022ರ ಐಪಿಎಲ್‌ ಹರಾಜಿಗೂ ಮುನ್ನ ತಂಡವನ್ನು ತ್ಯಜಿಸಿ ಆಗಷ್ಟೇ ಐಪಿಎಲ್‌ಗೆ ಕಾಲಿಟ್ಟಿದ್ದ ಗುಜರಾತ್‌ ಟೈಟನ್ಸ್‌ ತಂಡವನ್ನು ಸೇರಿಕೊಂಡಿದ್ದರು. ನಾಯಕನಾಗಿ ಆ ಸೀಸನ್‌ನಲ್ಲಿ ಗುಜರಾತ್ ಟೈಟನ್ಸ್‌ ತಂಡವನ್ನು ಪ್ರತಿನಿಧಿಸಿದ್ದ ಪಾಂಡ್ಯ ತಂಡವನ್ನು ಚಾಂಪಿಯನ್‌ ಮಾಡುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೇ ಈ ಬಾರಿಯ ಐಪಿಎಲ್‌ನಲ್ಲಿ ಗುಜರಾತ್ ಟೈಟನ್ಸ್‌ ತಂಡವನ್ನು ಫೈನಲ್‌ ಹಂತದವರೆಗೂ ಪಾಂಡ್ಯ ತಂದಿದ್ದರು.

ಹೀಗೆ ಎರಡು ಸೀಸನ್‌ನಲ್ಲಿ ಅದ್ಭುತವಾಗಿ ಗುಜರಾತ್‌ ಟೈಟನ್ಸ್‌ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್‌ ಪಾಂಡ್ಯ ಇದೀಗ ಮುಂಬೈ ಇಂಡಿಯನ್ಸ್‌ಗೆ ಮರಳಿದ್ದು, ಹಾರ್ದಿಕ್‌ ತಂಡಕ್ಕೆ ವಾಪಸ್ಸಾದ ಬೆನ್ನಲ್ಲೇ ತಂಡದ ಮತ್ತೋರ್ವ ಆಟಗಾರ ಜಸ್‌ಪ್ರೀತ್‌ ಬುಮ್ರಾ ಸಾಮಾಜಿಕ ಜಾಲತಾಣದಲ್ಲಿ ವಿಚಿತ್ರ ಸ್ಟೋರಿ ಹಂಚಿಕೊಳ್ಳುವ ಮೂಲಕ ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಭಿನ್ನಮತವಿದೆ ಎಂಬ ಅನುಮಾನ ಮೂಡುವಂತೆ ಮಾಡಿದ್ದಾರೆ.

ಹೌದು, ಜಸ್‌ಪ್ರೀತ್‌ ಬುಮ್ರಾ ʼಕೆಲವೊಮ್ಮೆ ನಿಶಬ್ದವೇ ಅತ್ಯುತ್ತಮ ಉತ್ತರʼ ಎಂಬ ಸ್ಟೋರಿಯನ್ನು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಲವು ವರ್ಷಗಳಿಂದ ಮುಂಬೈ ಇಂಡಿಯನ್ಸ್ ಆಟಗಾರನಾಗಿದ್ದ ಬುಮ್ರಾ ತಂಡದ ಮುಂದಿನ ನಾಯಕನಾಗುವ ಸಾಧ್ಯತೆಗಳಿತ್ತು, ಆದರೆ ಪಾಂಡ್ಯ ಆಗಮನದಿಂದ ರೋಹಿತ್‌ ಬಳಿಕ ನಾಯಕತ್ವ ಕೈತಪ್ಪಲಿದೆ, ಹೀಗಾಗಿ ಬುಮ್ರಾ ಇಂತಹ ಸ್ಟೋರಿ ಹಂಚಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಅಲ್ಲದೇ ಬುಮ್ರಾ ಮುಂಬೈ ಇಂಡಿಯನ್ಸ್‌ ಇನ್ಸ್ಟಾಗ್ರಾಮ್‌ ಖಾತೆಯನ್ನು ಅನ್‌ಫಾಲೋ ಮಾಡಿರುವುದು ಈ ವದಂತಿಗೆ ರೆಕ್ಕೆ ಪುಕ್ಕ ಬರುವಂತೆ ಮಾಡಿವೆ. ಇಷ್ಟು ದಿನಗಳವರೆಗೆ ಮುಂಬೈ ಇಂಡಿಯನ್ಸ್‌ ಫಾಲೋ ಮಾಡಿ ಇದೀಗ ಅನ್‌ಫಾಲೋ ಮಾಡಿರುವ ಬುಮ್ರಾ ತಂಡ ಬಿಟ್ಟು ಬೇರೆ ಫ್ರಾಂಚೈಸಿಯನ್ನೇನಾದರೂ ಸೇರಲಿದ್ದಾರಾ ಎಂಬ ಅನುಮಾನ ಮೂಡಿಸಿದೆ.

andolana

Recent Posts

ಓದುಗರ ಪತ್ರ: ತೆರವಾಯಿತೆ

ತೆರವಾಯಿತೆ ಫುಟ್‌ಪಾತ್‌ನಲ್ಲಿ ಕಟ್ಟಿಕೊಂಡಿದ್ದ ಅನ್ನದ ಬಟ್ಟಲು; ನಿರುದ್ಯೋಗ ನಿವಾರಣಾತೊಟ್ಟಿಲು ಶಕ್ತಿ ತುಂಬಲಿ ಮತ್ತೊಂದು ಕಟ್ಟಲು ಎಲ್ಲರ ಜೀವನ ಜಾಲವೇ ಮುಂದಕೂ…

5 hours ago

ಓದುಗರ ಪತ್ರ: ಕೆಪಿಎಸ್‌ಸಿ ಹಗರಣ; ಯುವಜನರ ಭವಿಷ್ಯಕ್ಕೆ ಕೊಳ್ಳಿ

ಕೆಪಿಎಸ್‌ಸಿ ಭ್ರಷ್ಟಾಚಾರದ ಕುರಿತು ಇತ್ತೀಚಿನ ಸುದ್ದಿ ಕಣ್ಣು ತೆರೆಸುವಂತಿದೆ. ದಕ್ಷ ಅಧಿಕಾರಿಗಳನ್ನು ಆರಿಸಬೇಕಾದ ಸಾಂವಿಧಾನಿಕ ಸಂಸ್ಥೆಯ ಅಧ್ಯಕ್ಷರೇ ಅಮಾನತ್ತುಗೊಂಡಿರುವುದು ಇಡೀ…

5 hours ago

ಓದುಗರ ಪತ್ರ: ಯಕ್ಷಪ್ರಶ್ನೆ

ಮಾಸ್ಕ್ ಧರಿಸಿ ಸಿಟಿ ಬಸ್ಸಿನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದ ಸಾರಿಗೆ ಸಚಿವ ಭೈರತಿ ಸುರೇಶ್ ಅವರು ಕರ್ತವ್ಯಲೋಪ ಎಸಗಿದ…

5 hours ago

ಓದುಗರ ಪತ್ರ: ಫುಟ್‌ಪಾತ್ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ

ಸುಪ್ರೀಂಕೋರ್ಟ್ ಆದೇಶದಂತೆ ಬೆಂಗಳೂರಿನ ನಂತರ ಈಗ ಮೈಸೂರಿನಲ್ಲೂ ಫುಟ್‌ಪಾತ್ ಒತ್ತುವರಿ ತೆರವು ಮಾಡುತ್ತಿರುವುದು ಸ್ವಾಗತಾರ್ಹ. ಇದರಿಂದ ಪಾದಚಾರಿಗಳಿಗೆ ಅನುಕೂಲವಾಗುತ್ತದೆ. ಇದೇ…

5 hours ago

ಓದುಗರ ಪತ್ರ: ಪರೀಕ್ಷಾ ಶುಲ್ಕ ಗೊಂದಲ

ರಾಜ್ಯ ಸರ್ಕಾರವು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಧಿಸೂಚನೆ ಹೊರಡಿಸಿದು, ಸ್ಪರ್ಧಾಕಾಂಕ್ಷಿಗಳು ಆನ್ಲೆ ನ್ ಮೂಲಕ ಅರ್ಜಿಸಲ್ಲಿಸಲು ಕರ್ನಾಟಕ ಪರೀಕ್ಷಾ…

5 hours ago

ಮಮ ಡೇಟಾ: ಆಧಾರ್ ಕುರಿತ ಆತಂಕಗಳು

ಡಿಜಿಟಲ್ ಗುರುತಿನ ವ್ಯವಸ್ಥೆಯಾಗಿ ಹುಟ್ಟಿಕೊಂಡ ಆಧಾರ್, ಡಿಜಿಟಲ್ ಆಡಳಿತಕ್ಕೆ ಚುಕ್ಕಾಣಿಯಾಗತೊಡಗಿದ್ದು, ಜನರಲ್ಲಿ ತಮ್ಮ ಖಾಸಗಿತನದ ಸುರಕ್ಷತೆಯ ಬಗ್ಗೆ ಆತಂಕಗಳನ್ನು ನಿಧಾನಕ್ಕೆ…

5 hours ago