ಕ್ರೀಡೆ

ಮುಂಬೈ ಇಂಡಿಯನ್ಸ್‌ ಅನ್‌ಫಾಲೋ ಮಾಡಿದ ಬುಮ್ರಾ; ಹಾರ್ದಿಕ್‌ ಆಗಮನದಿಂದ ಶುರುವಾಯಿತಾ ವೈಮನಸ್ಸು?

ನಿನ್ನೆ ( ನವೆಂಬರ್‌ 27 ) ಹಾರ್ದಿಕ್‌ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿ ಮತ್ತೆ ತಮ್ಮ ತಂಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದೆ. ಗುಜರಾತ್ ಟೈಟನ್ಸ್‌ ತಂಡದ ನಾಯಕನಾಗಿದ್ದ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ ಟ್ರೇಡಿಂಗ್‌ ಮೂಲಕ ಖರೀದಿಸಿದೆ.

ಈ ಹಿಂದೆ ಮುಂಬೈ ಇಂಡಿಯನ್ಸ್‌ ತಂಡದಲ್ಲಿಯೇ ಇದ್ದ ಹಾರ್ದಿಕ್‌ ಪಾಂಡ್ಯ 2022ರ ಐಪಿಎಲ್‌ ಹರಾಜಿಗೂ ಮುನ್ನ ತಂಡವನ್ನು ತ್ಯಜಿಸಿ ಆಗಷ್ಟೇ ಐಪಿಎಲ್‌ಗೆ ಕಾಲಿಟ್ಟಿದ್ದ ಗುಜರಾತ್‌ ಟೈಟನ್ಸ್‌ ತಂಡವನ್ನು ಸೇರಿಕೊಂಡಿದ್ದರು. ನಾಯಕನಾಗಿ ಆ ಸೀಸನ್‌ನಲ್ಲಿ ಗುಜರಾತ್ ಟೈಟನ್ಸ್‌ ತಂಡವನ್ನು ಪ್ರತಿನಿಧಿಸಿದ್ದ ಪಾಂಡ್ಯ ತಂಡವನ್ನು ಚಾಂಪಿಯನ್‌ ಮಾಡುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೇ ಈ ಬಾರಿಯ ಐಪಿಎಲ್‌ನಲ್ಲಿ ಗುಜರಾತ್ ಟೈಟನ್ಸ್‌ ತಂಡವನ್ನು ಫೈನಲ್‌ ಹಂತದವರೆಗೂ ಪಾಂಡ್ಯ ತಂದಿದ್ದರು.

ಹೀಗೆ ಎರಡು ಸೀಸನ್‌ನಲ್ಲಿ ಅದ್ಭುತವಾಗಿ ಗುಜರಾತ್‌ ಟೈಟನ್ಸ್‌ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್‌ ಪಾಂಡ್ಯ ಇದೀಗ ಮುಂಬೈ ಇಂಡಿಯನ್ಸ್‌ಗೆ ಮರಳಿದ್ದು, ಹಾರ್ದಿಕ್‌ ತಂಡಕ್ಕೆ ವಾಪಸ್ಸಾದ ಬೆನ್ನಲ್ಲೇ ತಂಡದ ಮತ್ತೋರ್ವ ಆಟಗಾರ ಜಸ್‌ಪ್ರೀತ್‌ ಬುಮ್ರಾ ಸಾಮಾಜಿಕ ಜಾಲತಾಣದಲ್ಲಿ ವಿಚಿತ್ರ ಸ್ಟೋರಿ ಹಂಚಿಕೊಳ್ಳುವ ಮೂಲಕ ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಭಿನ್ನಮತವಿದೆ ಎಂಬ ಅನುಮಾನ ಮೂಡುವಂತೆ ಮಾಡಿದ್ದಾರೆ.

ಹೌದು, ಜಸ್‌ಪ್ರೀತ್‌ ಬುಮ್ರಾ ʼಕೆಲವೊಮ್ಮೆ ನಿಶಬ್ದವೇ ಅತ್ಯುತ್ತಮ ಉತ್ತರʼ ಎಂಬ ಸ್ಟೋರಿಯನ್ನು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಲವು ವರ್ಷಗಳಿಂದ ಮುಂಬೈ ಇಂಡಿಯನ್ಸ್ ಆಟಗಾರನಾಗಿದ್ದ ಬುಮ್ರಾ ತಂಡದ ಮುಂದಿನ ನಾಯಕನಾಗುವ ಸಾಧ್ಯತೆಗಳಿತ್ತು, ಆದರೆ ಪಾಂಡ್ಯ ಆಗಮನದಿಂದ ರೋಹಿತ್‌ ಬಳಿಕ ನಾಯಕತ್ವ ಕೈತಪ್ಪಲಿದೆ, ಹೀಗಾಗಿ ಬುಮ್ರಾ ಇಂತಹ ಸ್ಟೋರಿ ಹಂಚಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಅಲ್ಲದೇ ಬುಮ್ರಾ ಮುಂಬೈ ಇಂಡಿಯನ್ಸ್‌ ಇನ್ಸ್ಟಾಗ್ರಾಮ್‌ ಖಾತೆಯನ್ನು ಅನ್‌ಫಾಲೋ ಮಾಡಿರುವುದು ಈ ವದಂತಿಗೆ ರೆಕ್ಕೆ ಪುಕ್ಕ ಬರುವಂತೆ ಮಾಡಿವೆ. ಇಷ್ಟು ದಿನಗಳವರೆಗೆ ಮುಂಬೈ ಇಂಡಿಯನ್ಸ್‌ ಫಾಲೋ ಮಾಡಿ ಇದೀಗ ಅನ್‌ಫಾಲೋ ಮಾಡಿರುವ ಬುಮ್ರಾ ತಂಡ ಬಿಟ್ಟು ಬೇರೆ ಫ್ರಾಂಚೈಸಿಯನ್ನೇನಾದರೂ ಸೇರಲಿದ್ದಾರಾ ಎಂಬ ಅನುಮಾನ ಮೂಡಿಸಿದೆ.

andolana

Recent Posts

ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲೂ ಬದಲಾವಣೆ ; ಭಾಗವತ್‌ ಕುರಿತು ಖರ್ಗೆ ವ್ಯಂಗ್ಯ

ಬೆಂಗಳೂರು : ಆರ್‌ಎಸ್‌ಎಸ್ ಸಂಘಟನೆಯ ಕಾರ್ಯವೈಖರಿ ಹಾಗೂ ವಿದೇಶದಲ್ಲಿನ ಅದರ ಚಟುವಟಿಕೆಗಳ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ…

9 mins ago

ಚಿತ್ರಕೂಟ ; ಮಂದಾಕಿನಿ ನದಿ ಪ್ರವಾಹ ಭೀತಿ

ಚಿತ್ರಕೂಟ : ಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯಲ್ಲಿರುವ ಧಾರ್ಮಿಕ ಕ್ಷೇತ್ರ ಚಿತ್ರಕೂಟದಲ್ಲಿ ಮಂದಾಕಿನಿ ನದಿ ಅಪಾಯಕಾರಿಯಾಗಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ…

1 hour ago

ನೇಪಾಳ ಪ್ರವಾಹ ; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಮೃತರ ಸಂಖ್ಯೆ 750 ಕ್ಕೆ ಏರಿಕೆ; 3,044 ನಾಪತ್ತೆ ಕಠ್ಮಂಡು : ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ…

1 hour ago

ಕೆಪಿಎಸ್‌ಸಿ ಹಗರಣ : ಐಎಎಸ್‌ ಅಧಿಕಾರಿ ಘ್ಯಾನೇಂದ್ರ ಕುಮಾರ್‌ ಬಂಧನ

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್‌ಸಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಘ್ಯಾನೇಂದ್ರ ಕುಮಾರ್‌ ಗಂಗ್ವಾರ್‌ ಅವರನ್ನು ಸಿಐಡಿ…

3 hours ago

ಹನೂರು ಶೂಟ್‌ಔಟ್ ಪ್ರಕರಣ | ಸ್ಥಳ ಮಹಜರ್, ಸಾಕ್ಷಿ ವಿಚಾರಣೆ

ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್‌ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…

5 hours ago

ಬಾಲ್ಯದ ಗೆಳೆಯನಿಗೆ ಡಿಕೆಶಿ ‘ಉಡುಗೊರೆ’ : ರಾಜಕೀಯಕ್ಕೆ ರವಿಚಂದ್ರನ್?

ಸಿಎಂ ಭೇಟಿಯಾಗಿ ಚರ್ಚೆ ; ಖಚಿತಪಡಿಸದ ಕಾಂಗ್ರೆಸ್ ನಾಯಕರು ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕ್ರೇಜಿಸ್ಟಾರ್…

5 hours ago