ಕ್ರೀಡೆ

ಮುಂಬೈ ಇಂಡಿಯನ್ಸ್‌ ಅನ್‌ಫಾಲೋ ಮಾಡಿದ ಬುಮ್ರಾ; ಹಾರ್ದಿಕ್‌ ಆಗಮನದಿಂದ ಶುರುವಾಯಿತಾ ವೈಮನಸ್ಸು?

ನಿನ್ನೆ ( ನವೆಂಬರ್‌ 27 ) ಹಾರ್ದಿಕ್‌ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿ ಮತ್ತೆ ತಮ್ಮ ತಂಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದೆ. ಗುಜರಾತ್ ಟೈಟನ್ಸ್‌ ತಂಡದ ನಾಯಕನಾಗಿದ್ದ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ ಟ್ರೇಡಿಂಗ್‌ ಮೂಲಕ ಖರೀದಿಸಿದೆ.

ಈ ಹಿಂದೆ ಮುಂಬೈ ಇಂಡಿಯನ್ಸ್‌ ತಂಡದಲ್ಲಿಯೇ ಇದ್ದ ಹಾರ್ದಿಕ್‌ ಪಾಂಡ್ಯ 2022ರ ಐಪಿಎಲ್‌ ಹರಾಜಿಗೂ ಮುನ್ನ ತಂಡವನ್ನು ತ್ಯಜಿಸಿ ಆಗಷ್ಟೇ ಐಪಿಎಲ್‌ಗೆ ಕಾಲಿಟ್ಟಿದ್ದ ಗುಜರಾತ್‌ ಟೈಟನ್ಸ್‌ ತಂಡವನ್ನು ಸೇರಿಕೊಂಡಿದ್ದರು. ನಾಯಕನಾಗಿ ಆ ಸೀಸನ್‌ನಲ್ಲಿ ಗುಜರಾತ್ ಟೈಟನ್ಸ್‌ ತಂಡವನ್ನು ಪ್ರತಿನಿಧಿಸಿದ್ದ ಪಾಂಡ್ಯ ತಂಡವನ್ನು ಚಾಂಪಿಯನ್‌ ಮಾಡುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೇ ಈ ಬಾರಿಯ ಐಪಿಎಲ್‌ನಲ್ಲಿ ಗುಜರಾತ್ ಟೈಟನ್ಸ್‌ ತಂಡವನ್ನು ಫೈನಲ್‌ ಹಂತದವರೆಗೂ ಪಾಂಡ್ಯ ತಂದಿದ್ದರು.

ಹೀಗೆ ಎರಡು ಸೀಸನ್‌ನಲ್ಲಿ ಅದ್ಭುತವಾಗಿ ಗುಜರಾತ್‌ ಟೈಟನ್ಸ್‌ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್‌ ಪಾಂಡ್ಯ ಇದೀಗ ಮುಂಬೈ ಇಂಡಿಯನ್ಸ್‌ಗೆ ಮರಳಿದ್ದು, ಹಾರ್ದಿಕ್‌ ತಂಡಕ್ಕೆ ವಾಪಸ್ಸಾದ ಬೆನ್ನಲ್ಲೇ ತಂಡದ ಮತ್ತೋರ್ವ ಆಟಗಾರ ಜಸ್‌ಪ್ರೀತ್‌ ಬುಮ್ರಾ ಸಾಮಾಜಿಕ ಜಾಲತಾಣದಲ್ಲಿ ವಿಚಿತ್ರ ಸ್ಟೋರಿ ಹಂಚಿಕೊಳ್ಳುವ ಮೂಲಕ ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಭಿನ್ನಮತವಿದೆ ಎಂಬ ಅನುಮಾನ ಮೂಡುವಂತೆ ಮಾಡಿದ್ದಾರೆ.

ಹೌದು, ಜಸ್‌ಪ್ರೀತ್‌ ಬುಮ್ರಾ ʼಕೆಲವೊಮ್ಮೆ ನಿಶಬ್ದವೇ ಅತ್ಯುತ್ತಮ ಉತ್ತರʼ ಎಂಬ ಸ್ಟೋರಿಯನ್ನು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಲವು ವರ್ಷಗಳಿಂದ ಮುಂಬೈ ಇಂಡಿಯನ್ಸ್ ಆಟಗಾರನಾಗಿದ್ದ ಬುಮ್ರಾ ತಂಡದ ಮುಂದಿನ ನಾಯಕನಾಗುವ ಸಾಧ್ಯತೆಗಳಿತ್ತು, ಆದರೆ ಪಾಂಡ್ಯ ಆಗಮನದಿಂದ ರೋಹಿತ್‌ ಬಳಿಕ ನಾಯಕತ್ವ ಕೈತಪ್ಪಲಿದೆ, ಹೀಗಾಗಿ ಬುಮ್ರಾ ಇಂತಹ ಸ್ಟೋರಿ ಹಂಚಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಅಲ್ಲದೇ ಬುಮ್ರಾ ಮುಂಬೈ ಇಂಡಿಯನ್ಸ್‌ ಇನ್ಸ್ಟಾಗ್ರಾಮ್‌ ಖಾತೆಯನ್ನು ಅನ್‌ಫಾಲೋ ಮಾಡಿರುವುದು ಈ ವದಂತಿಗೆ ರೆಕ್ಕೆ ಪುಕ್ಕ ಬರುವಂತೆ ಮಾಡಿವೆ. ಇಷ್ಟು ದಿನಗಳವರೆಗೆ ಮುಂಬೈ ಇಂಡಿಯನ್ಸ್‌ ಫಾಲೋ ಮಾಡಿ ಇದೀಗ ಅನ್‌ಫಾಲೋ ಮಾಡಿರುವ ಬುಮ್ರಾ ತಂಡ ಬಿಟ್ಟು ಬೇರೆ ಫ್ರಾಂಚೈಸಿಯನ್ನೇನಾದರೂ ಸೇರಲಿದ್ದಾರಾ ಎಂಬ ಅನುಮಾನ ಮೂಡಿಸಿದೆ.

andolana

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

1 hour ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

3 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

3 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

9 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

9 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

10 hours ago