ಕ್ರೀಡೆ

IPL 2024: ರಿಟೈನ್‌ ಆದ ಹಾಗೂ ತಂಡದಿಂದ ಹೊರಬಿದ್ದ ಕರ್ನಾಟಕ ಆಟಗಾರರ ವಿವರ

ನವೆಂಬರ್‌ 26 ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ ಭಾಗವಹಿಸುವ ಫ್ರಾಂಚೈಸಿಗಳಿಗೆ ತಮ್ಮ ತಂಡದಲ್ಲಿ ಯಾವ ಆಟಗಾರರನ್ನು ಉಳಿಸಿಕೊಳ್ಳಬೇಕು ಎಂಬುದನ್ನು ಘೋಷಿಸಲು ಕೊನೆಯ ದಿನವಾಗಿತ್ತು. ಅದರಂತೆ ಎಲ್ಲಾ ತಂಡಗಳು ಯಾವ ಆಟಗಾರರನ್ನು ಉಳಿಸಿಕೊಂಡಿದ್ದೇವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸಿದ್ದೇವೆ ಎಂಬುದನ್ನು ಘೋಷಿಸಿದವು.

ಅಲ್ಲದೇ ಆಟಗಾರರ ಟ್ರೇಡಿಂಗ್‌ ಸಹ ನಡೆದಿದ್ದು ವಿವಿಧ ತಂಡಗಳು ಬೇರೆ ತಂಡಗಳಲ್ಲಿದ್ದ ಆಟಗಾರರನ್ನು ವಿನಿಮಯ ಮಾಡಿಕೊಂಡಿವೆ. ಹೀಗೆ ಕೆಲ ಆಟಗಾರರನ್ನು ವಿವಿಧ ಫ್ರಾಂಚೈಸಿಗಳು ಟ್ರೇಡ್ ಮಾಡಿಕೊಂಡರೆ ಇನ್ನೂ ಕೆಲ ಫ್ರಾಂಚೈಸಿಗಳು ಬೇಕಾದ ಆಟಗಾರರನ್ನು ಉಳಿಸಿಕೊಂಡು ಬೇಡವಾದ ಆಟಗಾರರನ್ನು ತಂಡದಿಂದ ಹೊರಹಾಕಿವೆ. ಇನ್ನು ಈ ಪ್ರಕ್ರಿಯೆಗಳಲ್ಲಿ ಕರ್ನಾಟಕದ ಆಟಗಾರರು ಏನಾದರು ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..

* ಅಭಿನವ್‌ ಮನೋಹರ್‌ – ಕಳೆದ ಬಾರಿಯ ಸೀಸನ್‌ನಲ್ಲಿ ಗುಜರಾತ್‌ ಟೈಟನ್ಸ್‌ ತಂಡವನ್ನು ಪ್ರತಿನಿಧಿಸಿದ್ದ ಅಭಿನವ್‌ ಮನೋಹರ್‌ ರಿಟೈನ್‌ ಆಗಿದ್ದು ಮುಂದಿನ ಬಾರಿಯ ಐಪಿಎಲ್‌ನಲ್ಲೂ ಜಿಟಿ ಪರವೇ ಕಣಕ್ಕಿಳಿಯಲಿದ್ದಾರೆ.
* ಪ್ರವೀಣ್‌ ದುಬೆ – ಕಳೆದ ಬಾರಿ ತಮ್ಮ ತಂಡವನ್ನು ಪ್ರತಿನಿಧಿಸಿದ್ದ ಪ್ರವೀಣ್‌ ದುಬೆ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌ ಫ್ರಾಂಚೈಸಿ ರಿಟೈನ್‌ ಮಾಡಿಕೊಂಡಿದೆ.
* ಮನೀಶ್‌ ಪಾಂಡೆ – ಕಳೆದ ಬಾರಿಯ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಪರ ಕಣಕ್ಕಿಳಿದಿದ್ದ ಮನೀಶ್‌ ಪಾಂಡೆ ಅವರನ್ನು ಫ್ರಾಂಚೈಸಿ ಕೈಬಿಟ್ಟಿದೆ.
* ಕೆಸಿ ಕಾರಿಯಪ್ಪ – ಕಳೆದ ಬಾರಿಯ ಸೀಸನ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ ಪರ ಆಡಿದ್ದ ಕೆಸಿ ಕಾರಿಯಪ್ಪ ತಂಡದಿಂದ ಹೊರಬಿದ್ದಿದ್ದಾರೆ.
* ಪ್ರಸಿದ್ಧ್‌ ಕೃಷ್ಣ – ಕಳೆದ ಬಾರಿ ರಾಜಸ್ಥಾನ್‌ ರಾಯಲ್ಸ್‌ ಪರ ಕಣಕ್ಕಿಳಿದಿದ್ದ ಪ್ರಸಿದ್ಧ್‌ ಕೃಷ್ಣ ಯಶಸ್ವಿಯಾಗಿ ರಿಟೈನ್‌ ಆಗಿದ್ದಾರೆ.
* ವಿದ್ವತ್‌ ಕಾವೇರಪ್ಪ – ಕಳೆದ ಬಾರಿ ಪಂಜಾಬ್‌ ಕಿಂಗ್ಸ್‌ ಪರ ಕಣಕ್ಕಿಳಿದಿದ್ದ ವಿದ್ವತ್‌ ಕಾವೇರಪ್ಪ ರಿಟೈನ್‌ ಆಗಿದ್ದಾರೆ.
* ಮಯಾಂಕ್‌ ಅಗರ್ವಾಲ್‌ – ಸನ್‌ ರೈಸರ್ಸ್‌ ಹೈದರಾಬಾದ್‌ ಪರ ಆಡಿದ್ದ ಮಯಾಂಕ್‌ ಅಗರ್ವಾಲ್‌ ಈ ಬಾರಿ ರಿಟೈನ್‌ ಆಗಿದ್ದು ಎಸ್‌ಆರ್‌ಎಚ್‌ ಪರವೇ ಮುಂದುವರೆಯಲಿದ್ದಾರೆ.
* ಕೃಷ್ಣಪ್ಪ ಗೌತಮ್‌ – ಕಳೆದ ಬಾರಿಯ ಐಪಿಎಲ್‌ನಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಪರ ಆಡಿದ್ದ ಕೃಷ್ಣಪ್ಪ ಗೌತಮ್‌ ರಿಟೈನ್‌ ಆಗಿದ್ದಾರೆ
* ಕೆಎಲ್‌ ರಾಹುಲ್‌ – ಕಳೆದ ಬಾರಿ ಲಕ್ನೋ ಸೂಪರ್‌ ಜೈಂಟ್ಸ್‌ ಪರ ನಾಯಕನಾಗಿದ್ದ ಕೆಎಲ್ ರಾಹುಲ್‌ ರಿಟೈನ್‌ ಆಗಿದ್ದಾರೆ.
* ದೇವದತ್‌ ಪಡಿಕ್ಕಲ್‌ – ಕಳೆದ ಬಾರಿ ರಾಜಸ್ಥಾನ್‌ ರಾಯಲ್ಸ್‌ ಪರ ಆಡಿದ್ದ ದೇವದತ್‌ ಈ ಬಾರಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡಕ್ಕೆ ಟ್ರೇಡ್‌ ಆಗಿದ್ದಾರೆ.
* ಮನೋಜ್‌ ಭಂಡಗೆ – ಕಳೆದ ಬಾರಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪರ ಕಣಕ್ಕಿಳಿದಿದ್ದ ಮನೋಜ್‌ ಭಂಡಗೆ ರಿಟೈನ್‌ ಆಗಿದ್ದಾರೆ.

andolana

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

1 hour ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago