ಕ್ರೀಡೆ

IPL 2024: ರಿಟೈನ್‌ ಆದ ಹಾಗೂ ತಂಡದಿಂದ ಹೊರಬಿದ್ದ ಕರ್ನಾಟಕ ಆಟಗಾರರ ವಿವರ

ನವೆಂಬರ್‌ 26 ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ ಭಾಗವಹಿಸುವ ಫ್ರಾಂಚೈಸಿಗಳಿಗೆ ತಮ್ಮ ತಂಡದಲ್ಲಿ ಯಾವ ಆಟಗಾರರನ್ನು ಉಳಿಸಿಕೊಳ್ಳಬೇಕು ಎಂಬುದನ್ನು ಘೋಷಿಸಲು ಕೊನೆಯ ದಿನವಾಗಿತ್ತು. ಅದರಂತೆ ಎಲ್ಲಾ ತಂಡಗಳು ಯಾವ ಆಟಗಾರರನ್ನು ಉಳಿಸಿಕೊಂಡಿದ್ದೇವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸಿದ್ದೇವೆ ಎಂಬುದನ್ನು ಘೋಷಿಸಿದವು.

ಅಲ್ಲದೇ ಆಟಗಾರರ ಟ್ರೇಡಿಂಗ್‌ ಸಹ ನಡೆದಿದ್ದು ವಿವಿಧ ತಂಡಗಳು ಬೇರೆ ತಂಡಗಳಲ್ಲಿದ್ದ ಆಟಗಾರರನ್ನು ವಿನಿಮಯ ಮಾಡಿಕೊಂಡಿವೆ. ಹೀಗೆ ಕೆಲ ಆಟಗಾರರನ್ನು ವಿವಿಧ ಫ್ರಾಂಚೈಸಿಗಳು ಟ್ರೇಡ್ ಮಾಡಿಕೊಂಡರೆ ಇನ್ನೂ ಕೆಲ ಫ್ರಾಂಚೈಸಿಗಳು ಬೇಕಾದ ಆಟಗಾರರನ್ನು ಉಳಿಸಿಕೊಂಡು ಬೇಡವಾದ ಆಟಗಾರರನ್ನು ತಂಡದಿಂದ ಹೊರಹಾಕಿವೆ. ಇನ್ನು ಈ ಪ್ರಕ್ರಿಯೆಗಳಲ್ಲಿ ಕರ್ನಾಟಕದ ಆಟಗಾರರು ಏನಾದರು ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..

* ಅಭಿನವ್‌ ಮನೋಹರ್‌ – ಕಳೆದ ಬಾರಿಯ ಸೀಸನ್‌ನಲ್ಲಿ ಗುಜರಾತ್‌ ಟೈಟನ್ಸ್‌ ತಂಡವನ್ನು ಪ್ರತಿನಿಧಿಸಿದ್ದ ಅಭಿನವ್‌ ಮನೋಹರ್‌ ರಿಟೈನ್‌ ಆಗಿದ್ದು ಮುಂದಿನ ಬಾರಿಯ ಐಪಿಎಲ್‌ನಲ್ಲೂ ಜಿಟಿ ಪರವೇ ಕಣಕ್ಕಿಳಿಯಲಿದ್ದಾರೆ.
* ಪ್ರವೀಣ್‌ ದುಬೆ – ಕಳೆದ ಬಾರಿ ತಮ್ಮ ತಂಡವನ್ನು ಪ್ರತಿನಿಧಿಸಿದ್ದ ಪ್ರವೀಣ್‌ ದುಬೆ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌ ಫ್ರಾಂಚೈಸಿ ರಿಟೈನ್‌ ಮಾಡಿಕೊಂಡಿದೆ.
* ಮನೀಶ್‌ ಪಾಂಡೆ – ಕಳೆದ ಬಾರಿಯ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಪರ ಕಣಕ್ಕಿಳಿದಿದ್ದ ಮನೀಶ್‌ ಪಾಂಡೆ ಅವರನ್ನು ಫ್ರಾಂಚೈಸಿ ಕೈಬಿಟ್ಟಿದೆ.
* ಕೆಸಿ ಕಾರಿಯಪ್ಪ – ಕಳೆದ ಬಾರಿಯ ಸೀಸನ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ ಪರ ಆಡಿದ್ದ ಕೆಸಿ ಕಾರಿಯಪ್ಪ ತಂಡದಿಂದ ಹೊರಬಿದ್ದಿದ್ದಾರೆ.
* ಪ್ರಸಿದ್ಧ್‌ ಕೃಷ್ಣ – ಕಳೆದ ಬಾರಿ ರಾಜಸ್ಥಾನ್‌ ರಾಯಲ್ಸ್‌ ಪರ ಕಣಕ್ಕಿಳಿದಿದ್ದ ಪ್ರಸಿದ್ಧ್‌ ಕೃಷ್ಣ ಯಶಸ್ವಿಯಾಗಿ ರಿಟೈನ್‌ ಆಗಿದ್ದಾರೆ.
* ವಿದ್ವತ್‌ ಕಾವೇರಪ್ಪ – ಕಳೆದ ಬಾರಿ ಪಂಜಾಬ್‌ ಕಿಂಗ್ಸ್‌ ಪರ ಕಣಕ್ಕಿಳಿದಿದ್ದ ವಿದ್ವತ್‌ ಕಾವೇರಪ್ಪ ರಿಟೈನ್‌ ಆಗಿದ್ದಾರೆ.
* ಮಯಾಂಕ್‌ ಅಗರ್ವಾಲ್‌ – ಸನ್‌ ರೈಸರ್ಸ್‌ ಹೈದರಾಬಾದ್‌ ಪರ ಆಡಿದ್ದ ಮಯಾಂಕ್‌ ಅಗರ್ವಾಲ್‌ ಈ ಬಾರಿ ರಿಟೈನ್‌ ಆಗಿದ್ದು ಎಸ್‌ಆರ್‌ಎಚ್‌ ಪರವೇ ಮುಂದುವರೆಯಲಿದ್ದಾರೆ.
* ಕೃಷ್ಣಪ್ಪ ಗೌತಮ್‌ – ಕಳೆದ ಬಾರಿಯ ಐಪಿಎಲ್‌ನಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಪರ ಆಡಿದ್ದ ಕೃಷ್ಣಪ್ಪ ಗೌತಮ್‌ ರಿಟೈನ್‌ ಆಗಿದ್ದಾರೆ
* ಕೆಎಲ್‌ ರಾಹುಲ್‌ – ಕಳೆದ ಬಾರಿ ಲಕ್ನೋ ಸೂಪರ್‌ ಜೈಂಟ್ಸ್‌ ಪರ ನಾಯಕನಾಗಿದ್ದ ಕೆಎಲ್ ರಾಹುಲ್‌ ರಿಟೈನ್‌ ಆಗಿದ್ದಾರೆ.
* ದೇವದತ್‌ ಪಡಿಕ್ಕಲ್‌ – ಕಳೆದ ಬಾರಿ ರಾಜಸ್ಥಾನ್‌ ರಾಯಲ್ಸ್‌ ಪರ ಆಡಿದ್ದ ದೇವದತ್‌ ಈ ಬಾರಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡಕ್ಕೆ ಟ್ರೇಡ್‌ ಆಗಿದ್ದಾರೆ.
* ಮನೋಜ್‌ ಭಂಡಗೆ – ಕಳೆದ ಬಾರಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪರ ಕಣಕ್ಕಿಳಿದಿದ್ದ ಮನೋಜ್‌ ಭಂಡಗೆ ರಿಟೈನ್‌ ಆಗಿದ್ದಾರೆ.

andolana

Recent Posts

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…

4 mins ago

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

31 mins ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

36 mins ago

ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರಿಂದ ಮಹಾಮೇಳಾವ್:‌ ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರು ಮಹಾಮೇಳಾವ್‌ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ…

47 mins ago

ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರು

ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.‌19ರವರೆಗೆ ಅಧಿವೇಶನ…

1 hour ago

ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್‌ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…

2 hours ago