ಕ್ರೀಡೆ

IPL 2024: ರಿಟೈನ್‌ ಆದ ಹಾಗೂ ತಂಡದಿಂದ ಹೊರಬಿದ್ದ ಕರ್ನಾಟಕ ಆಟಗಾರರ ವಿವರ

ನವೆಂಬರ್‌ 26 ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ ಭಾಗವಹಿಸುವ ಫ್ರಾಂಚೈಸಿಗಳಿಗೆ ತಮ್ಮ ತಂಡದಲ್ಲಿ ಯಾವ ಆಟಗಾರರನ್ನು ಉಳಿಸಿಕೊಳ್ಳಬೇಕು ಎಂಬುದನ್ನು ಘೋಷಿಸಲು ಕೊನೆಯ ದಿನವಾಗಿತ್ತು. ಅದರಂತೆ ಎಲ್ಲಾ ತಂಡಗಳು ಯಾವ ಆಟಗಾರರನ್ನು ಉಳಿಸಿಕೊಂಡಿದ್ದೇವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸಿದ್ದೇವೆ ಎಂಬುದನ್ನು ಘೋಷಿಸಿದವು.

ಅಲ್ಲದೇ ಆಟಗಾರರ ಟ್ರೇಡಿಂಗ್‌ ಸಹ ನಡೆದಿದ್ದು ವಿವಿಧ ತಂಡಗಳು ಬೇರೆ ತಂಡಗಳಲ್ಲಿದ್ದ ಆಟಗಾರರನ್ನು ವಿನಿಮಯ ಮಾಡಿಕೊಂಡಿವೆ. ಹೀಗೆ ಕೆಲ ಆಟಗಾರರನ್ನು ವಿವಿಧ ಫ್ರಾಂಚೈಸಿಗಳು ಟ್ರೇಡ್ ಮಾಡಿಕೊಂಡರೆ ಇನ್ನೂ ಕೆಲ ಫ್ರಾಂಚೈಸಿಗಳು ಬೇಕಾದ ಆಟಗಾರರನ್ನು ಉಳಿಸಿಕೊಂಡು ಬೇಡವಾದ ಆಟಗಾರರನ್ನು ತಂಡದಿಂದ ಹೊರಹಾಕಿವೆ. ಇನ್ನು ಈ ಪ್ರಕ್ರಿಯೆಗಳಲ್ಲಿ ಕರ್ನಾಟಕದ ಆಟಗಾರರು ಏನಾದರು ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..

* ಅಭಿನವ್‌ ಮನೋಹರ್‌ – ಕಳೆದ ಬಾರಿಯ ಸೀಸನ್‌ನಲ್ಲಿ ಗುಜರಾತ್‌ ಟೈಟನ್ಸ್‌ ತಂಡವನ್ನು ಪ್ರತಿನಿಧಿಸಿದ್ದ ಅಭಿನವ್‌ ಮನೋಹರ್‌ ರಿಟೈನ್‌ ಆಗಿದ್ದು ಮುಂದಿನ ಬಾರಿಯ ಐಪಿಎಲ್‌ನಲ್ಲೂ ಜಿಟಿ ಪರವೇ ಕಣಕ್ಕಿಳಿಯಲಿದ್ದಾರೆ.
* ಪ್ರವೀಣ್‌ ದುಬೆ – ಕಳೆದ ಬಾರಿ ತಮ್ಮ ತಂಡವನ್ನು ಪ್ರತಿನಿಧಿಸಿದ್ದ ಪ್ರವೀಣ್‌ ದುಬೆ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌ ಫ್ರಾಂಚೈಸಿ ರಿಟೈನ್‌ ಮಾಡಿಕೊಂಡಿದೆ.
* ಮನೀಶ್‌ ಪಾಂಡೆ – ಕಳೆದ ಬಾರಿಯ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಪರ ಕಣಕ್ಕಿಳಿದಿದ್ದ ಮನೀಶ್‌ ಪಾಂಡೆ ಅವರನ್ನು ಫ್ರಾಂಚೈಸಿ ಕೈಬಿಟ್ಟಿದೆ.
* ಕೆಸಿ ಕಾರಿಯಪ್ಪ – ಕಳೆದ ಬಾರಿಯ ಸೀಸನ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ ಪರ ಆಡಿದ್ದ ಕೆಸಿ ಕಾರಿಯಪ್ಪ ತಂಡದಿಂದ ಹೊರಬಿದ್ದಿದ್ದಾರೆ.
* ಪ್ರಸಿದ್ಧ್‌ ಕೃಷ್ಣ – ಕಳೆದ ಬಾರಿ ರಾಜಸ್ಥಾನ್‌ ರಾಯಲ್ಸ್‌ ಪರ ಕಣಕ್ಕಿಳಿದಿದ್ದ ಪ್ರಸಿದ್ಧ್‌ ಕೃಷ್ಣ ಯಶಸ್ವಿಯಾಗಿ ರಿಟೈನ್‌ ಆಗಿದ್ದಾರೆ.
* ವಿದ್ವತ್‌ ಕಾವೇರಪ್ಪ – ಕಳೆದ ಬಾರಿ ಪಂಜಾಬ್‌ ಕಿಂಗ್ಸ್‌ ಪರ ಕಣಕ್ಕಿಳಿದಿದ್ದ ವಿದ್ವತ್‌ ಕಾವೇರಪ್ಪ ರಿಟೈನ್‌ ಆಗಿದ್ದಾರೆ.
* ಮಯಾಂಕ್‌ ಅಗರ್ವಾಲ್‌ – ಸನ್‌ ರೈಸರ್ಸ್‌ ಹೈದರಾಬಾದ್‌ ಪರ ಆಡಿದ್ದ ಮಯಾಂಕ್‌ ಅಗರ್ವಾಲ್‌ ಈ ಬಾರಿ ರಿಟೈನ್‌ ಆಗಿದ್ದು ಎಸ್‌ಆರ್‌ಎಚ್‌ ಪರವೇ ಮುಂದುವರೆಯಲಿದ್ದಾರೆ.
* ಕೃಷ್ಣಪ್ಪ ಗೌತಮ್‌ – ಕಳೆದ ಬಾರಿಯ ಐಪಿಎಲ್‌ನಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಪರ ಆಡಿದ್ದ ಕೃಷ್ಣಪ್ಪ ಗೌತಮ್‌ ರಿಟೈನ್‌ ಆಗಿದ್ದಾರೆ
* ಕೆಎಲ್‌ ರಾಹುಲ್‌ – ಕಳೆದ ಬಾರಿ ಲಕ್ನೋ ಸೂಪರ್‌ ಜೈಂಟ್ಸ್‌ ಪರ ನಾಯಕನಾಗಿದ್ದ ಕೆಎಲ್ ರಾಹುಲ್‌ ರಿಟೈನ್‌ ಆಗಿದ್ದಾರೆ.
* ದೇವದತ್‌ ಪಡಿಕ್ಕಲ್‌ – ಕಳೆದ ಬಾರಿ ರಾಜಸ್ಥಾನ್‌ ರಾಯಲ್ಸ್‌ ಪರ ಆಡಿದ್ದ ದೇವದತ್‌ ಈ ಬಾರಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡಕ್ಕೆ ಟ್ರೇಡ್‌ ಆಗಿದ್ದಾರೆ.
* ಮನೋಜ್‌ ಭಂಡಗೆ – ಕಳೆದ ಬಾರಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪರ ಕಣಕ್ಕಿಳಿದಿದ್ದ ಮನೋಜ್‌ ಭಂಡಗೆ ರಿಟೈನ್‌ ಆಗಿದ್ದಾರೆ.

andolana

Recent Posts

ಸಮರ್ಪಕ ನಿರ್ವಹಣೆಯಿಲ್ಲದೇ ಸ್ಥಗಿತಗೊಂಡ ಕುಡಿಯುವ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…

5 mins ago

ಭೇರ್ಯ ಗ್ರಾಪಂಗೆ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…

9 mins ago

ಜನರೊಂದಿಗೆ ಜನತಾದಳ ಸಮಾವೇಶಕ್ಕೆ ಭರ್ಜರಿ ಸಿದ್ಧತೆ

ಮಂಜು ಕೋಟೆ ಇಂದು ಕೋಟೆಯಲ್ಲಿ ಸಮಾವೇಶ; ಬೃಹತ್ ವೇದಿಕೆ ನಿರ್ಮಾಣ; ಸಾವಿರಾರು ಜನರು ಸೇರುವ ನಿರೀಕ್ಷೆ; ಶಕ್ತಿ ಪ್ರದರ್ಶನಕ್ಕೆ ಮುಂದಾದ…

14 mins ago

ವರ್ತುಲ ರಸ್ತೆಯಲ್ಲಿ ಸ್ವಚ್ಛತಾ ಅಭಿಯಾನ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಅಂತರ ರಾಜ್ಯ ವಾಹನಗಳು, ಪ್ರವಾಸಿ ವಾಹನಗಳು ಹೆಚ್ಚಾಗಿ ಸಂಚರಿಸುವ ಹಾಗೂ ಪ್ರಮುಖ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ನಗರದ…

18 mins ago

ಮಕ್ಕಳ ಮನಸ್ಸಿಗೆ ರೆಕ್ಕೆ ಕಟ್ಟಿದ ರಂಗಭೂಮಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ ಕ್ಷೇತ್ರದಲ್ಲಿ ಮಕ್ಕಳ ಸಾಹಿತ್ಯ ನಿರ್ಲಕ್ಷಕ್ಕೆ ಒಳಗಾದ ಹಾಗೆಯೇ ರಂಗಭೂಮಿಯಲ್ಲೂ ‘ಮಕ್ಕಳ ರಂಗಭೂಮಿ’ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ನಗರಗಳಲ್ಲಿನ…

22 mins ago