ಕ್ರೀಡೆ

IPL 2024: ರಿಟೈನ್‌ ಆದ ಹಾಗೂ ತಂಡದಿಂದ ಹೊರಬಿದ್ದ ಕರ್ನಾಟಕ ಆಟಗಾರರ ವಿವರ

ನವೆಂಬರ್‌ 26 ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ ಭಾಗವಹಿಸುವ ಫ್ರಾಂಚೈಸಿಗಳಿಗೆ ತಮ್ಮ ತಂಡದಲ್ಲಿ ಯಾವ ಆಟಗಾರರನ್ನು ಉಳಿಸಿಕೊಳ್ಳಬೇಕು ಎಂಬುದನ್ನು ಘೋಷಿಸಲು ಕೊನೆಯ ದಿನವಾಗಿತ್ತು. ಅದರಂತೆ ಎಲ್ಲಾ ತಂಡಗಳು ಯಾವ ಆಟಗಾರರನ್ನು ಉಳಿಸಿಕೊಂಡಿದ್ದೇವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸಿದ್ದೇವೆ ಎಂಬುದನ್ನು ಘೋಷಿಸಿದವು.

ಅಲ್ಲದೇ ಆಟಗಾರರ ಟ್ರೇಡಿಂಗ್‌ ಸಹ ನಡೆದಿದ್ದು ವಿವಿಧ ತಂಡಗಳು ಬೇರೆ ತಂಡಗಳಲ್ಲಿದ್ದ ಆಟಗಾರರನ್ನು ವಿನಿಮಯ ಮಾಡಿಕೊಂಡಿವೆ. ಹೀಗೆ ಕೆಲ ಆಟಗಾರರನ್ನು ವಿವಿಧ ಫ್ರಾಂಚೈಸಿಗಳು ಟ್ರೇಡ್ ಮಾಡಿಕೊಂಡರೆ ಇನ್ನೂ ಕೆಲ ಫ್ರಾಂಚೈಸಿಗಳು ಬೇಕಾದ ಆಟಗಾರರನ್ನು ಉಳಿಸಿಕೊಂಡು ಬೇಡವಾದ ಆಟಗಾರರನ್ನು ತಂಡದಿಂದ ಹೊರಹಾಕಿವೆ. ಇನ್ನು ಈ ಪ್ರಕ್ರಿಯೆಗಳಲ್ಲಿ ಕರ್ನಾಟಕದ ಆಟಗಾರರು ಏನಾದರು ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..

* ಅಭಿನವ್‌ ಮನೋಹರ್‌ – ಕಳೆದ ಬಾರಿಯ ಸೀಸನ್‌ನಲ್ಲಿ ಗುಜರಾತ್‌ ಟೈಟನ್ಸ್‌ ತಂಡವನ್ನು ಪ್ರತಿನಿಧಿಸಿದ್ದ ಅಭಿನವ್‌ ಮನೋಹರ್‌ ರಿಟೈನ್‌ ಆಗಿದ್ದು ಮುಂದಿನ ಬಾರಿಯ ಐಪಿಎಲ್‌ನಲ್ಲೂ ಜಿಟಿ ಪರವೇ ಕಣಕ್ಕಿಳಿಯಲಿದ್ದಾರೆ.
* ಪ್ರವೀಣ್‌ ದುಬೆ – ಕಳೆದ ಬಾರಿ ತಮ್ಮ ತಂಡವನ್ನು ಪ್ರತಿನಿಧಿಸಿದ್ದ ಪ್ರವೀಣ್‌ ದುಬೆ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌ ಫ್ರಾಂಚೈಸಿ ರಿಟೈನ್‌ ಮಾಡಿಕೊಂಡಿದೆ.
* ಮನೀಶ್‌ ಪಾಂಡೆ – ಕಳೆದ ಬಾರಿಯ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಪರ ಕಣಕ್ಕಿಳಿದಿದ್ದ ಮನೀಶ್‌ ಪಾಂಡೆ ಅವರನ್ನು ಫ್ರಾಂಚೈಸಿ ಕೈಬಿಟ್ಟಿದೆ.
* ಕೆಸಿ ಕಾರಿಯಪ್ಪ – ಕಳೆದ ಬಾರಿಯ ಸೀಸನ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ ಪರ ಆಡಿದ್ದ ಕೆಸಿ ಕಾರಿಯಪ್ಪ ತಂಡದಿಂದ ಹೊರಬಿದ್ದಿದ್ದಾರೆ.
* ಪ್ರಸಿದ್ಧ್‌ ಕೃಷ್ಣ – ಕಳೆದ ಬಾರಿ ರಾಜಸ್ಥಾನ್‌ ರಾಯಲ್ಸ್‌ ಪರ ಕಣಕ್ಕಿಳಿದಿದ್ದ ಪ್ರಸಿದ್ಧ್‌ ಕೃಷ್ಣ ಯಶಸ್ವಿಯಾಗಿ ರಿಟೈನ್‌ ಆಗಿದ್ದಾರೆ.
* ವಿದ್ವತ್‌ ಕಾವೇರಪ್ಪ – ಕಳೆದ ಬಾರಿ ಪಂಜಾಬ್‌ ಕಿಂಗ್ಸ್‌ ಪರ ಕಣಕ್ಕಿಳಿದಿದ್ದ ವಿದ್ವತ್‌ ಕಾವೇರಪ್ಪ ರಿಟೈನ್‌ ಆಗಿದ್ದಾರೆ.
* ಮಯಾಂಕ್‌ ಅಗರ್ವಾಲ್‌ – ಸನ್‌ ರೈಸರ್ಸ್‌ ಹೈದರಾಬಾದ್‌ ಪರ ಆಡಿದ್ದ ಮಯಾಂಕ್‌ ಅಗರ್ವಾಲ್‌ ಈ ಬಾರಿ ರಿಟೈನ್‌ ಆಗಿದ್ದು ಎಸ್‌ಆರ್‌ಎಚ್‌ ಪರವೇ ಮುಂದುವರೆಯಲಿದ್ದಾರೆ.
* ಕೃಷ್ಣಪ್ಪ ಗೌತಮ್‌ – ಕಳೆದ ಬಾರಿಯ ಐಪಿಎಲ್‌ನಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಪರ ಆಡಿದ್ದ ಕೃಷ್ಣಪ್ಪ ಗೌತಮ್‌ ರಿಟೈನ್‌ ಆಗಿದ್ದಾರೆ
* ಕೆಎಲ್‌ ರಾಹುಲ್‌ – ಕಳೆದ ಬಾರಿ ಲಕ್ನೋ ಸೂಪರ್‌ ಜೈಂಟ್ಸ್‌ ಪರ ನಾಯಕನಾಗಿದ್ದ ಕೆಎಲ್ ರಾಹುಲ್‌ ರಿಟೈನ್‌ ಆಗಿದ್ದಾರೆ.
* ದೇವದತ್‌ ಪಡಿಕ್ಕಲ್‌ – ಕಳೆದ ಬಾರಿ ರಾಜಸ್ಥಾನ್‌ ರಾಯಲ್ಸ್‌ ಪರ ಆಡಿದ್ದ ದೇವದತ್‌ ಈ ಬಾರಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡಕ್ಕೆ ಟ್ರೇಡ್‌ ಆಗಿದ್ದಾರೆ.
* ಮನೋಜ್‌ ಭಂಡಗೆ – ಕಳೆದ ಬಾರಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪರ ಕಣಕ್ಕಿಳಿದಿದ್ದ ಮನೋಜ್‌ ಭಂಡಗೆ ರಿಟೈನ್‌ ಆಗಿದ್ದಾರೆ.

andolana

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

3 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

3 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

4 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

5 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

5 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

5 hours ago