ಕ್ರೀಡೆ

IPL 2024: ರಿಟೈನ್‌ ಆದ ಹಾಗೂ ತಂಡದಿಂದ ಹೊರಬಿದ್ದ ಕರ್ನಾಟಕ ಆಟಗಾರರ ವಿವರ

ನವೆಂಬರ್‌ 26 ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ ಭಾಗವಹಿಸುವ ಫ್ರಾಂಚೈಸಿಗಳಿಗೆ ತಮ್ಮ ತಂಡದಲ್ಲಿ ಯಾವ ಆಟಗಾರರನ್ನು ಉಳಿಸಿಕೊಳ್ಳಬೇಕು ಎಂಬುದನ್ನು ಘೋಷಿಸಲು ಕೊನೆಯ ದಿನವಾಗಿತ್ತು. ಅದರಂತೆ ಎಲ್ಲಾ ತಂಡಗಳು ಯಾವ ಆಟಗಾರರನ್ನು ಉಳಿಸಿಕೊಂಡಿದ್ದೇವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸಿದ್ದೇವೆ ಎಂಬುದನ್ನು ಘೋಷಿಸಿದವು.

ಅಲ್ಲದೇ ಆಟಗಾರರ ಟ್ರೇಡಿಂಗ್‌ ಸಹ ನಡೆದಿದ್ದು ವಿವಿಧ ತಂಡಗಳು ಬೇರೆ ತಂಡಗಳಲ್ಲಿದ್ದ ಆಟಗಾರರನ್ನು ವಿನಿಮಯ ಮಾಡಿಕೊಂಡಿವೆ. ಹೀಗೆ ಕೆಲ ಆಟಗಾರರನ್ನು ವಿವಿಧ ಫ್ರಾಂಚೈಸಿಗಳು ಟ್ರೇಡ್ ಮಾಡಿಕೊಂಡರೆ ಇನ್ನೂ ಕೆಲ ಫ್ರಾಂಚೈಸಿಗಳು ಬೇಕಾದ ಆಟಗಾರರನ್ನು ಉಳಿಸಿಕೊಂಡು ಬೇಡವಾದ ಆಟಗಾರರನ್ನು ತಂಡದಿಂದ ಹೊರಹಾಕಿವೆ. ಇನ್ನು ಈ ಪ್ರಕ್ರಿಯೆಗಳಲ್ಲಿ ಕರ್ನಾಟಕದ ಆಟಗಾರರು ಏನಾದರು ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..

* ಅಭಿನವ್‌ ಮನೋಹರ್‌ – ಕಳೆದ ಬಾರಿಯ ಸೀಸನ್‌ನಲ್ಲಿ ಗುಜರಾತ್‌ ಟೈಟನ್ಸ್‌ ತಂಡವನ್ನು ಪ್ರತಿನಿಧಿಸಿದ್ದ ಅಭಿನವ್‌ ಮನೋಹರ್‌ ರಿಟೈನ್‌ ಆಗಿದ್ದು ಮುಂದಿನ ಬಾರಿಯ ಐಪಿಎಲ್‌ನಲ್ಲೂ ಜಿಟಿ ಪರವೇ ಕಣಕ್ಕಿಳಿಯಲಿದ್ದಾರೆ.
* ಪ್ರವೀಣ್‌ ದುಬೆ – ಕಳೆದ ಬಾರಿ ತಮ್ಮ ತಂಡವನ್ನು ಪ್ರತಿನಿಧಿಸಿದ್ದ ಪ್ರವೀಣ್‌ ದುಬೆ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌ ಫ್ರಾಂಚೈಸಿ ರಿಟೈನ್‌ ಮಾಡಿಕೊಂಡಿದೆ.
* ಮನೀಶ್‌ ಪಾಂಡೆ – ಕಳೆದ ಬಾರಿಯ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಪರ ಕಣಕ್ಕಿಳಿದಿದ್ದ ಮನೀಶ್‌ ಪಾಂಡೆ ಅವರನ್ನು ಫ್ರಾಂಚೈಸಿ ಕೈಬಿಟ್ಟಿದೆ.
* ಕೆಸಿ ಕಾರಿಯಪ್ಪ – ಕಳೆದ ಬಾರಿಯ ಸೀಸನ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ ಪರ ಆಡಿದ್ದ ಕೆಸಿ ಕಾರಿಯಪ್ಪ ತಂಡದಿಂದ ಹೊರಬಿದ್ದಿದ್ದಾರೆ.
* ಪ್ರಸಿದ್ಧ್‌ ಕೃಷ್ಣ – ಕಳೆದ ಬಾರಿ ರಾಜಸ್ಥಾನ್‌ ರಾಯಲ್ಸ್‌ ಪರ ಕಣಕ್ಕಿಳಿದಿದ್ದ ಪ್ರಸಿದ್ಧ್‌ ಕೃಷ್ಣ ಯಶಸ್ವಿಯಾಗಿ ರಿಟೈನ್‌ ಆಗಿದ್ದಾರೆ.
* ವಿದ್ವತ್‌ ಕಾವೇರಪ್ಪ – ಕಳೆದ ಬಾರಿ ಪಂಜಾಬ್‌ ಕಿಂಗ್ಸ್‌ ಪರ ಕಣಕ್ಕಿಳಿದಿದ್ದ ವಿದ್ವತ್‌ ಕಾವೇರಪ್ಪ ರಿಟೈನ್‌ ಆಗಿದ್ದಾರೆ.
* ಮಯಾಂಕ್‌ ಅಗರ್ವಾಲ್‌ – ಸನ್‌ ರೈಸರ್ಸ್‌ ಹೈದರಾಬಾದ್‌ ಪರ ಆಡಿದ್ದ ಮಯಾಂಕ್‌ ಅಗರ್ವಾಲ್‌ ಈ ಬಾರಿ ರಿಟೈನ್‌ ಆಗಿದ್ದು ಎಸ್‌ಆರ್‌ಎಚ್‌ ಪರವೇ ಮುಂದುವರೆಯಲಿದ್ದಾರೆ.
* ಕೃಷ್ಣಪ್ಪ ಗೌತಮ್‌ – ಕಳೆದ ಬಾರಿಯ ಐಪಿಎಲ್‌ನಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಪರ ಆಡಿದ್ದ ಕೃಷ್ಣಪ್ಪ ಗೌತಮ್‌ ರಿಟೈನ್‌ ಆಗಿದ್ದಾರೆ
* ಕೆಎಲ್‌ ರಾಹುಲ್‌ – ಕಳೆದ ಬಾರಿ ಲಕ್ನೋ ಸೂಪರ್‌ ಜೈಂಟ್ಸ್‌ ಪರ ನಾಯಕನಾಗಿದ್ದ ಕೆಎಲ್ ರಾಹುಲ್‌ ರಿಟೈನ್‌ ಆಗಿದ್ದಾರೆ.
* ದೇವದತ್‌ ಪಡಿಕ್ಕಲ್‌ – ಕಳೆದ ಬಾರಿ ರಾಜಸ್ಥಾನ್‌ ರಾಯಲ್ಸ್‌ ಪರ ಆಡಿದ್ದ ದೇವದತ್‌ ಈ ಬಾರಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡಕ್ಕೆ ಟ್ರೇಡ್‌ ಆಗಿದ್ದಾರೆ.
* ಮನೋಜ್‌ ಭಂಡಗೆ – ಕಳೆದ ಬಾರಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪರ ಕಣಕ್ಕಿಳಿದಿದ್ದ ಮನೋಜ್‌ ಭಂಡಗೆ ರಿಟೈನ್‌ ಆಗಿದ್ದಾರೆ.

andolana

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

3 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

5 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

7 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

12 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

12 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

14 hours ago