ಕ್ರೀಡೆ

IPL 2024: ಎಸ್‌ಆರ್‌ಎಚ್‌ ವಿರುದ್ಧ ಗೆದ್ದು ಫೈನಲ್‌ಗೆ ಲಗ್ಗೆಯಿಟ್ಟ ಕೆಕೆಆರ್‌!

ಅಹ್ಮದಾಬಾದ್‌: ನಾಯಕ ಶ್ರೇಯಸ್‌ ಅಯ್ಯರ್‌ ಮತ್ತು ವೆಂಕಟೇಶ್‌ ಅಯ್ಯರ್‌ ಜೋಡಿಯ ಭರ್ಜರಿ ಬ್ಯಾಟಿಂಗ್‌ಗೆ ನಲುಗಿದ ಸನ್‌ರೈಸರ್ಸ್‌ ಹೈದರಾಬಾದ್‌ ಹೀನಾಯ ಪ್ರದರ್ಶನ ತೊರುವ ಮೂಲಕ ಕೊಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ 8 ವಿಕೆಟ್‌ಗಳ ಅಂತರದ ಹೀನಾಯ ಸೋಲು ಕಂಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಸನ್‌ರೈಸರ್ಸ್‌ ಹೈದರಾಬಾದ್‌ ನಿಗದಿತ 19.3 ಓವರ್‌ಗಳಲ್ಲಿ ಆಲ್‌ಔಟ್‌ ಆಗುವ ಮೂಲಕ 159 ರನ್‌ ಬಾರಿಸಿ, 160 ರನ್‌ಗಳ ಟಾರ್ಗೆಟ್‌ ನೀಡಿತು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಕೊಲ್ಕತ್ತಾ ಅಯ್ಯರ್‌ ಜೋಡಿಯ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನದಿಂದ ಕೇವಲ 13.4 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 164 ರನ್‌ ಬಾರಿಸಿ ಗೆಲುವಿನ ನಗೆ ಬೀರಿತು.

ಎಸ್‌ಆರ್‌ಎಚ್‌ ಇನ್ನಿಂಗ್ಸ್‌: ಈ ಸೀಸನ್‌ನ ಮೊದಲ ಕ್ವಾಲಿಫೈ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ಗೆ ಆರಂಭಿಕ ಹಿನ್ನಡೆ ಉಂಟಾಯಿತು. ಇನ್ನಿಂಗ್ಸ್‌ನ ಎರಡನೇ ಎಸೆತದಲ್ಲಿಯೇ ಸ್ಟಾರ್ಕ್‌ ದಾಳಿಗೆ ಕ್ಲೀನ್‌ ಬೌಲ್ಡ್‌ ಆಗಿ ಸೊನ್ನೆ ಸುತ್ತಿ ಟ್ರಾವಿಸ್‌ ಹೆಡ್‌ ಹೊರ ನಡೆದರು. ಅವರ ಹಿಂದೆಯೇ ಅಭಿಷೇಕ್‌ ಶರ್ಮಾ 3(4) ರನ್‌ ಗಳಿಸಿ ಹೊರಟರು. ನಂತರ ಬಂದ ರಾಹುಲ್‌ ತ್ರಿಪಾಟಿ ತಂಡಕ್ಕೆ ಚೇತರಿಕೆ ಆಟವಾಡಿದರು. ಇವರ ಹೊರತಾಗಿ ಬೇರಾರಿಂದಲೂ ನಿರೀಕ್ಷಿತ ಆಟ ಕಂಡು ಬರಲಿಲ್ಲ. ತ್ರಿಪಾಟಿ 35ಎಸೆತಗಳಲ್ಲಿ 7 ಬೌಂಡರಿ, 1 ಸಿಕ್ಸರ್‌ ಸಹಿತ 55 ರನ್‌ ಗಳಿಸಿ ಔಟಾದರು.

ಉಳಿದಂತೆ ನಿತೀಶ್‌ ರೆಡ್ಡಿ 9(10) ರನ್‌, ಷಹಬಾಜ್‌ ಅಹ್ಮದ್‌ ಡಕ್‌ಔಟ್‌, ಕ್ಲಾಸೆನ್‌ 32(21) ರನ್‌, ಅಬ್ದುಲ್‌ ಸಮದ್‌ 16(12) ರನ್‌, ಸನ್ವೀರ್‌ ಸಿಂಗ್‌ ಡಕ್‌ಔಟ್‌, ನಾಯಕ ಕಮಿನ್ಸ್‌ 30(24) ರನ್‌, ಭುವನೇಶ್ವರ್‌ ಡಕ್‌ಔಟ್‌ ಆದರೇ, ವಿಯಸ್ಕಾಂತ್‌ ಔಟಾಗದೇ 7(5) ರನ್‌ ಬಾರಿಸಿದರು.

ಕೊಲ್ಕತ್ತಾ ನೈಟ್‌ರೈಡರ್ಸ್‌ ಪರವಾಗಿ ಮಿಚೆಲ್‌ ಸ್ಟಾರ್ಕ್‌ 3 ವಿಕೆಟ್‌, ವರುಣ್‌ ಚಕ್ರವರ್ತಿ 2 ವಿಕೆಟ್‌, ವೈಭವ್‌ ಅರೋರಾ, ಹರ್ಷಿತ್‌ ರಾಣಾ, ಸುನೀಲ್‌ ನರೈನ್‌ ಹಾಗೂ ರಸೆಲ್‌ ತಲಾ ಒಂದೊಂದು ವಿಕೆಟ್‌ ಪಡೆದು ಗಮನ ಸೆಳೆದರು.

ಕೊಲ್ಕತ್ತಾ ಇನ್ನಿಂಗ್ಸ್‌: ಇತ್ತ ಹೈದರಾಬಾದ್‌ ನೀಡಿದ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಕೊಲ್ಕತ್ತಾ ತಂಡಕ್ಕೆ ಅಯ್ಯರ್‌ ಜೋಡಿ ಭದ್ರ ಬುನಾದಿ ಹಾಕಿದರು. ನಾಯಕ ಶ್ರೇಯಸ್‌ ಅಯ್ಯರ್‌ ಮತ್ತು ವೆಂಕಟೇಶ್‌ ಅಯ್ಯರ್‌ ಔಟಾಗದೇ ತಂಡವನ್ನು ಗೆಲುವಿನ ದಡ ಸೇರಿಸಿದರು. ಕೆಕೆಆರ್‌ ಕೇವಲ 2 ವಿಕೆಟ್‌ ಕಳೆದುಕೊಂಡು ಗೆಲುವಿನ ನಗೆ ಬೀರಿತು.

ನಾಯಕ ಶ್ರೇಯಸ್‌ 24 ಎಸೆತಗಳಲ್ಲಿ 5ಬೌಂಡರಿ ಮತ್ತು 4 ಸಿಕ್ಸರ್‌ ಸಹಿತ 58 ರನ್‌ ಬಾರಿಸಿದರೇ, ವೆಂಕಟೇಶ್‌ ಅಯ್ಯರ್‌ 28ಎಸೆತಗಳಲ್ಲಿ 5 ಬೌಂಡರಿ 4 ಸಿಕ್ಸರ್‌ ಸೇರಿದಂತೆ 51 ರನ್‌ ಬಾರಿಸಿದರು. ಉಳಿದಂತೆ ರೆಹಮನ್ನುಲ್ಲಾ ಗುರ್ಬಾಜ್‌ 23(14) ರನ್‌ ಮತ್ತು ಸುನೀಲ್‌ ನರೈನ್‌ 21(16) ರನ್‌ ಕಲೆಹಾಕಿದರು.

ಹೈದರಾಬಾದ್‌ ಪರ ನಟರಾಜನ್‌ ಹಾಗೂ ನಾಯಕ ಕಮಿನ್ಸ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡರಲ್ಲೂ ಉತ್ತಮ ಪ್ರದರ್ಶನ ತೋರಿದ ಕೊಲ್ಕತ್ತಾ ನೈಟ್‌ರೈಡರ್ಸ್‌ ತಂಡ ನೇರವಾಗಿ ಫೈನಲ್‌ ತಲುಪಿತು. ಇನ್ನು ನಾಳೆ ನಡೆಯುವ ಆರ್‌ಸಿಬಿ ಹಾಗೂ ರಾಜಸ್ಥಾನ್‌ ನಡುವಿನ ಪಂದ್ಯದಲ್ಲಿ ಗೆಲ್ಲುವ ತಂಡವನ್ನು ಎಸ್‌ಆರ್‌ಎಚ್‌ ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಎದುರಿಸಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

4 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

4 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

4 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

13 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

13 hours ago