ಕ್ರೀಡೆ

IPL 2024: ಕೆಕೆಆರ್‌ಗೆ ಆರ್‌ಸಿಬಿ ವಿರುದ್ಧ 1ರನ್‌ಗಳ ರೋಚಕ ಜಯ: ಆರ್‌ಸಿಬಿಗೆ ಸತತ 6ನೇ ಸೋಲು!

ಕೊಲ್ಕತ್ತಾ: ಕೊಲ್ಕತ್ತಾ ನೈಟ್‌ರೈಡರ್ಸ್‌ ತಂಡದ ಶಿಸ್ತುಬದ್ಧ ಬೌಲಿಂಗ್‌ ದಾಳಿಗೆ ಮಂಕಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 1ರನ್‌ ಗಳ ಹೀನಾಯ ಸೋಲು ಕಂಡಿದೆ. ಇದು ಆರ್‌ಸಿಬಿಗೆ ಟೂರ್ನಿಯಲ್ಲಿ 6ನೇ ಸೋಲಾಗಿದ್ದು, ಇನ್ನುಳಿದ ಎಲ್ಲಾ ಪಂದ್ಯಗಳನ್ನು ಗದ್ದರೂ ಸಹಾ ಆರ್‌ಸಿಬಿ ಈ ಸೀಸನ್‌ನಿಂದ ಬಹುತೇಕ ಹೊರಬಿದ್ದಂತೆ ಆಗಿದೆ.

ಇಲ್ಲಿನ ಈಡೆನ್‌ ಗಾರ್ಡನ್‌ ಮೈದಾನದಲ್ಲಿ ನಡೆದ ಐಪಿಎಲ್‌ ಸೀಸನ್‌ 17ರ ಆವೃತ್ತಿಯ ಲೀಗ್‌ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಕೆಕೆಆರ್‌ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಕೆಕೆಆರ್‌ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 222ರನ್‌ ಕಲೆಹಾಕಿ 223 ರನ್‌ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ ಆಲ್‌ಔಟ್‌ ಆಗುವ ಮೂಲಕ 221 ರನ್‌ ಗಳಿಸಿತು.

ಕೆಕೆಆರ್‌ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಕೆಕೆಆರ್‌ ತಂಡಕ್ಕೆ ಆರಂಭಿಕ ಆಘಾತ ಉಂಟಾಯಿತು. ಕಳೆದ ಪಂದ್ಯದಲ್ಲಿ ಶತಕ ಬಾರಿಸಿದ್ದ ನರೈನ್‌ ಕೇವಲ 10ರನ್‌ ಗಳಿಗೆ ಸುಸ್ತಾದರು. ಇನ್ನು ಇವರಿಗೆ ಜೊತೆಯಾಗಿ ಇನ್ನಿಂಗ್ಸ್‌ ಆರಂಭಿಸಿದ್ದ ಪಿಲಿಪ್‌ ಸಾಲ್ಟ್‌ 14 ಎಸೆತ ಎದುರಿಸಿ 7 ಬೌಂಡರಿ, 3ಸಿಕ್ಸರ್‌ ಸಹಿತ 48 ರನ್‌ ಬಾರಿಸಿ ನಿರ್ಗಮಿಸಿದರು. ನಂತರ ಬಂದ ರಘುವಂಶಿ 3, ವೆಂಕಟೇಶ್‌ ಅಯ್ಯರ್‌ 16ರನ್‌ ಗಳಿಸಿ ಔಟಾದರು.

ಒಂದೆಡೆ ಭದ್ರವಾಗಿ ನಿಂತು ಇನ್ನಿಂಗ್ಸ್‌ ಕಟ್ಟಿದ ನಾಯಕ ಶ್ರೇಯಸ್‌ ಅಯ್ಯರ್‌ 36 ಎಸೆತಗಳಲ್ಲಿ 7ಬೌಂಡರಿ ಹಾಗೂ 1ಸಿಕ್ಸರ್‌ ಸಹಿತ 50ರನ್‌ ಗಳಿಸಿ ತಂಡಕ್ಕೆ ಆಸರೆಯಾದರು. ಉಳಿದಂತೆ ರಿಂಕು ಸಿಂಗ್‌ 24, ರಸೆಲ್‌ 27 ಹಾಗೂ ರಮಣ್‌ದೀಪ್‌ ಸಿಂಗ್‌ 24 ರನ್‌ ಗಳಿಸಿ ತಂಡದ ಮೊತ್ತ 200 ಗಡಿ ದಾಟಲು ಸಹಕರಿಸಿದರು.

ಆರ್‌ಸಿಬಿ ಪರ ಕ್ಯಾಮರೋನ್‌ ಗ್ರೀನ್‌, ಯಶ್‌ ದಯಾಳ್‌ ತಲಾ ಎರಡೆರೆಡು ವಿಕೆಟ್‌ ಪಡೆದರು. ಸಿರಾಜ್‌ ಹಾಗೂ ಫರ್ಗೂಸನ್‌ ಒಂದೊಂದು ವಿಕೆಟ್‌ ಪಡೆದರು.

ಆರ್‌ಸಿಬಿ ಇನ್ನಿಂಗ್ಸ್‌: ಇನ್ನು ಈ ಬೃಹತ್‌ ಮೊತ್ತ ಬೆನ್ನತ್ತಿದ ಆರ್‌ಸಿಬಿಗೆ ಆರಂಭಿಕ ಆಘಾತ ಉಂಟಾಯಿತು. ನಾಯಕ ಫಾಫ್‌ ಕೇವಲ 7 ಹಾಗೂ ವಿರಾಟ್‌ 18 ರನ್‌ ಕಲೆಹಾಕಿ ಬೇಗನೇ ವಿಕೆಟ್‌ ಒಪ್ಪಿಸಿ ಹೊರ ನಡೆದರು. ನಂತರ ಜತೆಯಾದ ವಿಲ್‌ ಜಾಕ್‌ ಹಾಗೂ ರಜತ್‌ ಪಟಿದರ್‌ ಕೆಕೆಆರ್‌ ಬೌಲರ್‌ಗಳನ್ನು ಕಾಡಿದರು. ವಿಲ್‌ ಜಾಕ್‌ 55(32) ಪಟಿದರ್‌ 52(23) ರನ್‌ ಬಾರಿಸಿ ನಿರ್ಗಮಿಸಿದರು.

ಈ ಇಬ್ಬರ ನಂತರ ಬಂದ ಬೇರಾರಿಂದಲೂ ನಿರೀಕ್ಷಿತ ಆಟ ಕಂಡು ಬರಲಿಲ್ಲ. ಕ್ಯಾಮರೋನ್‌ ಗ್ರೀನ್‌ 6, ಪ್ರಭುದೇಸಾಯ್‌ 24, ಲೋಮರೋರ್‌ 4, ದಿನೇಶ್‌ ಕಾರ್ತಿಕ್‌ 25, ಕೊನೆಯ ಓವರ್‌ನಲ್ಲಿ 21 ಬೇಕಿದ್ದಾಗ ಮಿಚೆಲ್‌ ಸ್ಟಾರ್ಕ್‌ಗೆ ಮೂರು ಸಿಕ್ಸರ್‌ ಬಾರಿಸಿದ ಕರಣ್‌ ಶರ್ಮಾ 20 ರನ್‌ ಗಳಿಸಿ ಹೋರಾಟ ತೋರಿದರು ಗೆಲ್ಲಲು ಆಗಲಿಲ್ಲ. ಅಂತಿಮವಾಗಿ ಕೆಕೆಆರ್‌ ಕೇವಲ 1 ರನ್‌ ಗಳಿಂದ ಆರ್‌ಸಿಬಿ ವಿರುದ್ಧ ಗೆದ್ದು ಬೀಗಿತು.

ಕೆಕೆಆರ್‌ ಪರ ರಸೆಲ್‌ 3 ವಿಕೆಟ್‌, ನರೈನ್‌ ಹಾಗೂ ಹರ್ಷಿತ್‌ ರಾಣಾ ತಲಾ 2 ವಿಕೆಟ್‌, ಸ್ಟಾರ್ಕ್‌ ಮತ್ತು ವರುಣ್‌ ಚಕ್ರವರ್ತಿ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಶಾಲಾ ಮಕ್ಕಳಿಂದ ಹೆರಿಟೇಜ್‌ ಫ್ಲ್ಯಾಶ್‌ಮೊಬ್‌ ಪ್ರದರ್ಶನ : ಮನಗೆದ್ದ ಹೆರಿಟೇಜ್ ಟ್ರೆಷರ್ ಹಂಟ್

ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ…

2 mins ago

ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ: ಶಾಸಕ ಜನಾರ್ಧನ ರೆಡ್ಡಿ

ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…

46 mins ago

ರಾಜ್ಯದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನಾಯಕತ್ವ ಗೊಂದಲ ಸೃಷ್ಟಿ ಮಾಡಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್‌ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌…

1 hour ago

ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ

ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…

2 hours ago

ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ ದುಷ್ಕರ್ಮಿಗಳು

ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…

2 hours ago

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್:‌ ನಾಳೆಯಿಂದಲೇ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಹಣ

ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…

3 hours ago