ಕ್ರೀಡೆ

IPL 2024: ಕೆಕೆಆರ್‌ಗೆ ಆರ್‌ಸಿಬಿ ವಿರುದ್ಧ 1ರನ್‌ಗಳ ರೋಚಕ ಜಯ: ಆರ್‌ಸಿಬಿಗೆ ಸತತ 6ನೇ ಸೋಲು!

ಕೊಲ್ಕತ್ತಾ: ಕೊಲ್ಕತ್ತಾ ನೈಟ್‌ರೈಡರ್ಸ್‌ ತಂಡದ ಶಿಸ್ತುಬದ್ಧ ಬೌಲಿಂಗ್‌ ದಾಳಿಗೆ ಮಂಕಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 1ರನ್‌ ಗಳ ಹೀನಾಯ ಸೋಲು ಕಂಡಿದೆ. ಇದು ಆರ್‌ಸಿಬಿಗೆ ಟೂರ್ನಿಯಲ್ಲಿ 6ನೇ ಸೋಲಾಗಿದ್ದು, ಇನ್ನುಳಿದ ಎಲ್ಲಾ ಪಂದ್ಯಗಳನ್ನು ಗದ್ದರೂ ಸಹಾ ಆರ್‌ಸಿಬಿ ಈ ಸೀಸನ್‌ನಿಂದ ಬಹುತೇಕ ಹೊರಬಿದ್ದಂತೆ ಆಗಿದೆ.

ಇಲ್ಲಿನ ಈಡೆನ್‌ ಗಾರ್ಡನ್‌ ಮೈದಾನದಲ್ಲಿ ನಡೆದ ಐಪಿಎಲ್‌ ಸೀಸನ್‌ 17ರ ಆವೃತ್ತಿಯ ಲೀಗ್‌ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಕೆಕೆಆರ್‌ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಕೆಕೆಆರ್‌ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 222ರನ್‌ ಕಲೆಹಾಕಿ 223 ರನ್‌ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ ಆಲ್‌ಔಟ್‌ ಆಗುವ ಮೂಲಕ 221 ರನ್‌ ಗಳಿಸಿತು.

ಕೆಕೆಆರ್‌ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಕೆಕೆಆರ್‌ ತಂಡಕ್ಕೆ ಆರಂಭಿಕ ಆಘಾತ ಉಂಟಾಯಿತು. ಕಳೆದ ಪಂದ್ಯದಲ್ಲಿ ಶತಕ ಬಾರಿಸಿದ್ದ ನರೈನ್‌ ಕೇವಲ 10ರನ್‌ ಗಳಿಗೆ ಸುಸ್ತಾದರು. ಇನ್ನು ಇವರಿಗೆ ಜೊತೆಯಾಗಿ ಇನ್ನಿಂಗ್ಸ್‌ ಆರಂಭಿಸಿದ್ದ ಪಿಲಿಪ್‌ ಸಾಲ್ಟ್‌ 14 ಎಸೆತ ಎದುರಿಸಿ 7 ಬೌಂಡರಿ, 3ಸಿಕ್ಸರ್‌ ಸಹಿತ 48 ರನ್‌ ಬಾರಿಸಿ ನಿರ್ಗಮಿಸಿದರು. ನಂತರ ಬಂದ ರಘುವಂಶಿ 3, ವೆಂಕಟೇಶ್‌ ಅಯ್ಯರ್‌ 16ರನ್‌ ಗಳಿಸಿ ಔಟಾದರು.

ಒಂದೆಡೆ ಭದ್ರವಾಗಿ ನಿಂತು ಇನ್ನಿಂಗ್ಸ್‌ ಕಟ್ಟಿದ ನಾಯಕ ಶ್ರೇಯಸ್‌ ಅಯ್ಯರ್‌ 36 ಎಸೆತಗಳಲ್ಲಿ 7ಬೌಂಡರಿ ಹಾಗೂ 1ಸಿಕ್ಸರ್‌ ಸಹಿತ 50ರನ್‌ ಗಳಿಸಿ ತಂಡಕ್ಕೆ ಆಸರೆಯಾದರು. ಉಳಿದಂತೆ ರಿಂಕು ಸಿಂಗ್‌ 24, ರಸೆಲ್‌ 27 ಹಾಗೂ ರಮಣ್‌ದೀಪ್‌ ಸಿಂಗ್‌ 24 ರನ್‌ ಗಳಿಸಿ ತಂಡದ ಮೊತ್ತ 200 ಗಡಿ ದಾಟಲು ಸಹಕರಿಸಿದರು.

ಆರ್‌ಸಿಬಿ ಪರ ಕ್ಯಾಮರೋನ್‌ ಗ್ರೀನ್‌, ಯಶ್‌ ದಯಾಳ್‌ ತಲಾ ಎರಡೆರೆಡು ವಿಕೆಟ್‌ ಪಡೆದರು. ಸಿರಾಜ್‌ ಹಾಗೂ ಫರ್ಗೂಸನ್‌ ಒಂದೊಂದು ವಿಕೆಟ್‌ ಪಡೆದರು.

ಆರ್‌ಸಿಬಿ ಇನ್ನಿಂಗ್ಸ್‌: ಇನ್ನು ಈ ಬೃಹತ್‌ ಮೊತ್ತ ಬೆನ್ನತ್ತಿದ ಆರ್‌ಸಿಬಿಗೆ ಆರಂಭಿಕ ಆಘಾತ ಉಂಟಾಯಿತು. ನಾಯಕ ಫಾಫ್‌ ಕೇವಲ 7 ಹಾಗೂ ವಿರಾಟ್‌ 18 ರನ್‌ ಕಲೆಹಾಕಿ ಬೇಗನೇ ವಿಕೆಟ್‌ ಒಪ್ಪಿಸಿ ಹೊರ ನಡೆದರು. ನಂತರ ಜತೆಯಾದ ವಿಲ್‌ ಜಾಕ್‌ ಹಾಗೂ ರಜತ್‌ ಪಟಿದರ್‌ ಕೆಕೆಆರ್‌ ಬೌಲರ್‌ಗಳನ್ನು ಕಾಡಿದರು. ವಿಲ್‌ ಜಾಕ್‌ 55(32) ಪಟಿದರ್‌ 52(23) ರನ್‌ ಬಾರಿಸಿ ನಿರ್ಗಮಿಸಿದರು.

ಈ ಇಬ್ಬರ ನಂತರ ಬಂದ ಬೇರಾರಿಂದಲೂ ನಿರೀಕ್ಷಿತ ಆಟ ಕಂಡು ಬರಲಿಲ್ಲ. ಕ್ಯಾಮರೋನ್‌ ಗ್ರೀನ್‌ 6, ಪ್ರಭುದೇಸಾಯ್‌ 24, ಲೋಮರೋರ್‌ 4, ದಿನೇಶ್‌ ಕಾರ್ತಿಕ್‌ 25, ಕೊನೆಯ ಓವರ್‌ನಲ್ಲಿ 21 ಬೇಕಿದ್ದಾಗ ಮಿಚೆಲ್‌ ಸ್ಟಾರ್ಕ್‌ಗೆ ಮೂರು ಸಿಕ್ಸರ್‌ ಬಾರಿಸಿದ ಕರಣ್‌ ಶರ್ಮಾ 20 ರನ್‌ ಗಳಿಸಿ ಹೋರಾಟ ತೋರಿದರು ಗೆಲ್ಲಲು ಆಗಲಿಲ್ಲ. ಅಂತಿಮವಾಗಿ ಕೆಕೆಆರ್‌ ಕೇವಲ 1 ರನ್‌ ಗಳಿಂದ ಆರ್‌ಸಿಬಿ ವಿರುದ್ಧ ಗೆದ್ದು ಬೀಗಿತು.

ಕೆಕೆಆರ್‌ ಪರ ರಸೆಲ್‌ 3 ವಿಕೆಟ್‌, ನರೈನ್‌ ಹಾಗೂ ಹರ್ಷಿತ್‌ ರಾಣಾ ತಲಾ 2 ವಿಕೆಟ್‌, ಸ್ಟಾರ್ಕ್‌ ಮತ್ತು ವರುಣ್‌ ಚಕ್ರವರ್ತಿ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

7 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

7 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

7 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

7 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

7 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

7 hours ago