ಕ್ರೀಡೆ

IPL 2024: ಆರ್‌ಆರ್‌-ಕೆಕೆಆರ್‌ ಪಂದ್ಯ ರದ್ದು; ಎಲಿಮಿನೇಟರ್‌ನಲ್ಲಿ ಆರ್‌ಸಿಬಿಗೆ ಆರ್‌ಆರ್‌ ಸವಾಲು

ಗುವಾಹಟಿ: ಇಲ್ಲಿನ ಬಾರ್ಸಪರ ಕ್ರಿಡಾಂಗಣದಲ್ಲಿಂದು ನಡೆಯಬೇಕಿದ್ದ ಕೊಲ್ಕತ್ತಾ ನೈಟ್‌ರೈಡರ್ಸ್‌ ಮತ್ತು ರಾಜಸ್ಥಾನ್‌ ರಾಯಲ್ಸ್‌ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ.

ಈ ಸೀಸನ್‌ನ ಎಲ್ಲಾ 70 ಪಂದ್ಯಗಳು ಇದರೊಂದಿಗೆ ಮುಕ್ತಾಯಗೊಂಡಿದೆ. ಇನ್ನು ಪಾಯಿಂಟ್ಸ್‌ ಟೇಬಲ್‌ನಲ್ಲಿ ಮೊದಲ ಸ್ಥಾನದಲ್ಲಿ ಕೆಕೆಆರ್‌ ಇದ್ದರೇ, ಎರಡರಲ್ಲಿ ಎಸ್‌ಆರ್‌ಎಚ್‌, ಮೂರು ಮತ್ತು ನಾಲ್ಕನೇ ಸ್ಥಾನಗಳಲ್ಲಿ ಕ್ರಮವಾಗಿ ಆರ್‌ಆರ್‌ ಹಾಗೂ ಅರ್‌ಸಿಬಿ ತಂಡಗಳು ಸ್ಥಾನ ಪಡೆದಿವೆ.

ಮೇ.21ರಂದು ಮೊದಲ ಕ್ವಾಲಿಫೈಯರ್‌ ಪಂದ್ಯ ಕೊಲ್ಕತ್ತಾ ನೈಟ್‌ ರೈಡರ್ಸ್‌ ಮತ್ತು ಸನ್‌ ರೈಸರ್ಸ್‌ ಹೈದರಾಬಾದ್‌ ನಡುವೆ ಅಹ್ಮದಾಬಾದ್‌ನಲ್ಲಿ ನಡೆಲಿದೆ. ಮೇ.22 ರಂದು ಎಲಿಮಿನೇಟರ್‌ ಪಂದ್ಯದಲ್ಲಿ ನಮ್ಮ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ರಾಜಸ್ಥಾನ್‌ ರಾಯಲ್ಸ್‌ ಸವಾಲೊಡ್ಡಲಿದೆ.

ಈ ಎಲಿಮಿನೇಟರ್‌ ಪಂದ್ಯದಲ್ಲಿ ಗೆದ್ದ ತಂಡ ಮೊದಲ ಕ್ವಾಲಿಫೈಯರ್‌ನಲ್ಲಿ ಸೋತ ತಂಡದೊಂದಿಗೆ ಮೇ.24 ರಂದು ಎರಡನೇ ಕ್ವಾಲಿಫೈಯರ್ ಪಂದ್ಯ ಆಡಲಿದೆ.

ಮೊದಲ ಕ್ವಾಲಿಫೈ ಮತ್ತು ಎರಡನೇ ಕ್ವಾಲಿಫೈನಲ್ಲಿ ಗೆದ್ದ ತಂಡಗಳು ಮೇ.26 ರಂದು ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಫೈನಲ್‌ ಪಂದ್ಯ ಆಡಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಆರ್‌ಸಿಬಿ ಹೆಸರು ಬದಲಾವಣೆ ಆಗುತ್ತಾ? ಅನನ್ಯಾ ಬಿರ್ಲಾ ಪೋಸ್ಟ್‌ನಲ್ಲೇನಿದೆ?

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟ 16,700 ಕೋಟಿಗೆ ಖರೀದಿಸಿದ ಬಳಿಕ…

7 mins ago

ಕಾರು ವಂಚನೆ ಜಾಲ ಬಯಲು ; ಮೂವರ ಬಂಧನ, 8 ಕಾರುಗಳು ವಶ

ಮೈಸೂರು : ಮೋಸದಿಂದ ಕಾರುಗಳನ್ನು ಖರೀದಿಸಿ, ಯಾವುದೇ ದಾಖಲೆ ನೀಡದೆ ಕಡಿಮೆ ಹಣ ಪಡೆದು ಬೇರೆಯವರಿಗೆ ಹೆಚ್ಚು ಬೆಲೆಗೆ ಮಾರಾಟ…

12 mins ago

ಮಾತುಕತೆ ನಡೆಸುವ ಉದ್ದೇಶ ನಮಗಿಲ್ಲ : ಇರಾನ್‌

ಟೆಹ್ರಾನ್ : ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶ ನಮಗಿಲ್ಲ ಇಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ…

40 mins ago

ಓದುಗರ ಪತ್ರ | ಚಲನ ಚಿತ್ರದ ಅಶ್ಲೀಲ ಸಾಹಿತ್ಯ ನಿಷೇಧಿಸಿ

ಕನ್ನಡ ಚಲನಚಿತ್ರಗಳು ಭಾರತೀಯ ಸಿನಿರಂಗದಲ್ಲಿ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿವೆ. ಎಪ್ಪತ್ತು, ಎಂಬತ್ತರ ದಶಕದಲ್ಲಿ ತೆರೆ ಕಂಡ ಚಿತ್ರಗಳ ಹಾಡುಗಳು…

2 hours ago

ಓದುಗರ ಪತ್ರ | ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸಿ

ಸರಗೂರು ಹಾಗೂ ಎಚ್‌.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಸರಿಯಾದ ಸಮಯಕೆ…

2 hours ago

ಓದುಗರ ಪತ್ರ | ಕೆರೆಗಳ ಉಳಿವಿಗೆ ಜಿಯೋ ಫೆನ್ಸಿಂಗ್ ಕಡ್ಡಾಯಗೊಳಿಸಿ

ರಾಜ್ಯದ ಜಲಮೂಲಗಳ ಸ್ಥಿತಿ ಇಂದು ಶೋಚನೀಯವಾಗಿದೆ. ಅಂಕಿ-ಅಂಶಗಳ ಪ್ರಕಾರ ಕಳೆದ ಎರಡು ದಶಕಗಳಲ್ಲಿ ಅತಿಕ್ರಮಣದಿಂದಾಗಿ ನಗರ ಪ್ರದೇಶದ ಕೆರೆಗಳ ವಿಸ್ತೀರ್ಣ…

2 hours ago