ಕ್ರೀಡೆ

IPL 2024: ಆರ್‌ಆರ್‌-ಕೆಕೆಆರ್‌ ಪಂದ್ಯ ರದ್ದು; ಎಲಿಮಿನೇಟರ್‌ನಲ್ಲಿ ಆರ್‌ಸಿಬಿಗೆ ಆರ್‌ಆರ್‌ ಸವಾಲು

ಗುವಾಹಟಿ: ಇಲ್ಲಿನ ಬಾರ್ಸಪರ ಕ್ರಿಡಾಂಗಣದಲ್ಲಿಂದು ನಡೆಯಬೇಕಿದ್ದ ಕೊಲ್ಕತ್ತಾ ನೈಟ್‌ರೈಡರ್ಸ್‌ ಮತ್ತು ರಾಜಸ್ಥಾನ್‌ ರಾಯಲ್ಸ್‌ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ.

ಈ ಸೀಸನ್‌ನ ಎಲ್ಲಾ 70 ಪಂದ್ಯಗಳು ಇದರೊಂದಿಗೆ ಮುಕ್ತಾಯಗೊಂಡಿದೆ. ಇನ್ನು ಪಾಯಿಂಟ್ಸ್‌ ಟೇಬಲ್‌ನಲ್ಲಿ ಮೊದಲ ಸ್ಥಾನದಲ್ಲಿ ಕೆಕೆಆರ್‌ ಇದ್ದರೇ, ಎರಡರಲ್ಲಿ ಎಸ್‌ಆರ್‌ಎಚ್‌, ಮೂರು ಮತ್ತು ನಾಲ್ಕನೇ ಸ್ಥಾನಗಳಲ್ಲಿ ಕ್ರಮವಾಗಿ ಆರ್‌ಆರ್‌ ಹಾಗೂ ಅರ್‌ಸಿಬಿ ತಂಡಗಳು ಸ್ಥಾನ ಪಡೆದಿವೆ.

ಮೇ.21ರಂದು ಮೊದಲ ಕ್ವಾಲಿಫೈಯರ್‌ ಪಂದ್ಯ ಕೊಲ್ಕತ್ತಾ ನೈಟ್‌ ರೈಡರ್ಸ್‌ ಮತ್ತು ಸನ್‌ ರೈಸರ್ಸ್‌ ಹೈದರಾಬಾದ್‌ ನಡುವೆ ಅಹ್ಮದಾಬಾದ್‌ನಲ್ಲಿ ನಡೆಲಿದೆ. ಮೇ.22 ರಂದು ಎಲಿಮಿನೇಟರ್‌ ಪಂದ್ಯದಲ್ಲಿ ನಮ್ಮ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ರಾಜಸ್ಥಾನ್‌ ರಾಯಲ್ಸ್‌ ಸವಾಲೊಡ್ಡಲಿದೆ.

ಈ ಎಲಿಮಿನೇಟರ್‌ ಪಂದ್ಯದಲ್ಲಿ ಗೆದ್ದ ತಂಡ ಮೊದಲ ಕ್ವಾಲಿಫೈಯರ್‌ನಲ್ಲಿ ಸೋತ ತಂಡದೊಂದಿಗೆ ಮೇ.24 ರಂದು ಎರಡನೇ ಕ್ವಾಲಿಫೈಯರ್ ಪಂದ್ಯ ಆಡಲಿದೆ.

ಮೊದಲ ಕ್ವಾಲಿಫೈ ಮತ್ತು ಎರಡನೇ ಕ್ವಾಲಿಫೈನಲ್ಲಿ ಗೆದ್ದ ತಂಡಗಳು ಮೇ.26 ರಂದು ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಫೈನಲ್‌ ಪಂದ್ಯ ಆಡಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

2 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

3 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

3 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

3 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

3 hours ago