ಕ್ರೀಡೆ

IPL Auction 2024: ಎಲ್ಲಾ 10 ತಂಡಗಳು ಕೈಬಿಟ್ಟ ಆಟಗಾರರ ಸಂಪೂರ್ಣ ಪಟ್ಟಿ

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 17ನೇ ಆವೃತ್ತಿ ಮುಂದಿನ ವರ್ಷದ ಮಾರ್ಚ್ ತಿಂಗಳ ಮಧ್ಯಂತರದಲ್ಲಿ ಶುರುವಾಗಲಿದೆ ಎಂದು ಖ್ಯಾತ ಕ್ರೀಡಾ ವೆಬ್‌ ತಾಣ ಕ್ರಿಕ್‌ಬಜ್‌ ತನ್ನ ವರದಿಯಲ್ಲಿ ತಿಳಿಸಿದೆ. ಇನ್ನು ಈ ಮೆಗಾ ಕ್ರಿಕೆಟ್‌ ಕದನಕ್ಕೆ ನಾಲ್ಕು ತಿಂಗಳು ಮಾತ್ರ ಬಾಕಿ ಉಳಿದಿದ್ದು ಟೂರ್ನಿ ಆರಂಭಕ್ಕೂ ಮುನ್ನ ಆಟಗಾರರ ಹರಾಜು ಪ್ರಕ್ರಿಯೆ ಸಹ ನಡೆಯಲಿದೆ. ಈ ಬಾರಿಯ ಆಟಗಾರರ ಹರಾಜು ಪ್ರಕ್ರಿಯೆ ದುಬೈನ ಹವೆನ್‌ ಆಫ್‌ ಎಲೈಟ್ಸ್‌ನಲ್ಲಿ ಡಿಸೆಂಬರ್‌ 19ರಂದು ನಡೆಯಲಿದೆ.

ಇನ್ನು ಈ ಹರಾಜಿಗೂ ಮುನ್ನ ಎಲ್ಲಾ ತಂಡಗಳು ತಮ್ಮ ತಂಡದಲ್ಲಿನ ಆಟಗಾರರನ್ನು ಕೈಬಿಡಲು ನವೆಂಬರ್‌ 26 ಕೊನೆಯ ದಿನಾಂಕ ಎಂದು ಬಿಸಿಸಿಐ ಗಡುವನ್ನೂ ಸಹ ನೀಡಿದೆ. ಹೀಗಾಗಿ ಸದ್ಯ ವಿವಿಧ ತಂಡಗಳು ತಮಗೆ ಯಾವ ಆಟಗಾರರು ಬೇಡವೋ ಅಂತಹ ಆಟಗಾರರನ್ನು ತಂಡದಿಂದ ಕೈಬಿಟ್ಟಿವೆ. ಹಾಗಿದ್ದರೆ ಈ ಬಾರಿಯ ಹರಾಜಿಗೂ ಮುನ್ನ ವಿವಿಧ ಫ್ರಾಂಚೈಸಿಗಳಿಂದ ಬಿಡುಗಡೆಗೊಂಡ ಆಟಗಾರರ ಪಟ್ಟಿ ಈ ಕೆಳಕಂಡಂತಿದೆ..

1. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ಆರ್‌ಸಿಬಿ ಫ್ರಾಂಚೈಸಿ ಕೈಬಿಟ್ಟ ಆಟಗಾರರೆಂದರೆ ಹರ್ಷಲ್‌ ಪಟೇಲ್‌, ದಿನೇಶ್‌ ಕಾರ್ತಿಕ್‌ ಹಾಗೂ ಅನುಜ್‌ ರಾವತ್‌.
2. ಚೆನ್ನೈ ಸೂಪರ್‌ ಕಿಂಗ್ಸ್:‌ ಬೆನ್ ಸ್ಟೋಕ್ಸ್‌
3. ಸನ್‌ ರೈಸರ್ಸ್‌ ಹೈದರಾಬಾದ್:‌ ಹ್ಯಾರಿ ಬ್ರೂಕ್ಸ್‌

4. ಡೆಲ್ಲಿ ಕ್ಯಾಪಿಟಲ್ಸ್‌ : ಪೃಥ್ವಿ ಶಾ ಹಾಗೂ ಮನೀಶ್‌ ಪಾಂಡೆ
5. ರಾಜಸ್ಥಾನ್‌ ರಾಯಲ್ಸ್:‌ ಜೇಸನ್‌ ಹೋಲ್ಡರ್‌, ಕೆಸಿ ಕಾರಿಯಪ್ಪ ಹಾಗೂ ಮುರುಗನ್‌ ಅಶ್ವಿನ್‌.
6. ಗುಜರಾತ್‌ ಟೈಟನ್ಸ್:‌ ದಸುನ್‌ ಶನಕ, ಯಶ್‌ ದಯಾಳ್‌, ಓಡಿಯನ್‌ ಸ್ಮಿತ್‌, ಪ್ರದೀಪ್ ಸಾಂಗ್ವಾನ್‌ ಹಾಗೂ ಉರ್ವಿಲ್‌ ಪಟೇಲ್‌.

7. ಕೊಲ್ಕತ್ತಾ ನೈಟ್‌ ರೈಡರ್ಸ್:‌ ಆಂಡ್ರೆ ರಸೆಲ್‌, ಎನ್‌ ಜಗದೀಶನ್‌, ಲಾಕಿ ಫರ್ಗ್ಯೂಸನ್‌, ಡೇವಿಡ್‌ ವೈಸ್‌ ಹಾಗೂ ಮನ್‌ದೀಪ್‌ ಸಿಂಗ್.
‌8. ಲಕ್ನೋ ಸೂಪರ್‌ಜೈಂಟ್ಸ್: ಮಾರ್ಕಸ್‌ ಸ್ಟೊಯ್ನಿಸ್‌, ಎವಿನ್ ಲೆವಿಸ್‌, ಕೈಲ್‌ ಜೆಮಿಸನ್‌, ಕೆ ಗೌತಮ್‌ ಹಾಗೂ ಏಡನ್‌ ಮಾರ್ಕ್ರಮ್‌
9. ಮುಂಬೈ ಇಂಡಿಯನ್ಸ್: ಜಯದೇವ್ ಉನಾಡ್ಕತ್‌, ಇಶಾನ್‌ ಕಿಶನ್, ಮುರುಗನ್‌ ಅಶ್ವಿನ್‌, ರಿಲೆ ಮೆರೆಡಿತ್‌, ಪಿಯೂಶ್‌ ಚಾವ್ಲಾ ಹಾಗೂ ಸಂದೀಪ್‌ ವಾರಿಯರ್‌.
10. ಪಂಜಾಬ್‌ ಕಿಂಗ್ಸ್:‌ ಹರ್‌ಪ್ರೀತ್‌ ಭಾಟಿಯಾ, ರಿಷಿ ಧವನ್‌, ಭಾನುಕಾ ರಾಜಪಕ್ಸೆ, ಮ್ಯಾಥ್ಯೂ ಶಾರ್ಟ್‌ ಹಾಗೂ ರಾಜ್‌ ಅಂಗದ್‌ ಬಾವಾ.

andolana

Recent Posts

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

55 mins ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

2 hours ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

5 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

5 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

11 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

11 hours ago