ಕ್ರೀಡೆ

IPL 2024: ಸ್ಟೋಯ್ನಿಸ್‌ ಆಲ್‌ರೌಂಡರ್‌ ಆಟ: ಮುಂಬೈ ವಿರುದ್ಧ ಲಖನೌಗೆ ಭರ್ಜರಿ ಗೆಲುವು!

ಲಖನೌ: ಲಖನೌ ಸೂಪರ್‌ ಜೈಂಟ್ಸ್‌ ತಂಡದ ಆಲ್‌ರೌಂಡರ್‌ ಆಟದ ಮುಂದೆ ಐದು ಬಾರಿಯ ಐಪಿಎಲ್‌ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ತಂಡ ಮಂಡಿಯೂರಿದೆ. ಆ ಮೂಲಕ ಈವರೆಗಿನ 10 ಪಂದ್ಯಗಳಲ್ಲಿ ಕೇವಲ 3 ಪಂದ್ಯಗಳನ್ನಷ್ಟೇ ಗೆದ್ದಿರುವ ಮುಂಬೈ ಬಹುತೇಕ ಟೂರ್ನಿಯಿಂದಲೇ ಹೊರ ಬಿದ್ದಂತಾಗಿದೆ.

ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಸೀಸನ್‌ 17ರ 47ನೇ ಪಂದ್ಯದಲ್ಲಿ ಎಲ್‌ಎಸ್‌ಜಿ ಹಾಗೂ ಎಂಐ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮುಂಬೈ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 144 ರನ್‌ ಬಾರಿಸಿ 145 ರನ್‌ಗಳ ಗುರಿ ನೀಡಿದರು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಲಖನೌ 19.2 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 145 ಮೊತ್ತ ದಾಖಲಿಸಿ 4 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತು.

ಎಂಐ ಇನ್ನಿಂಗ್ಸ್;‌ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮುಂಬೈಗೆ ಮಾಜಿ ನಾಯಕ ರೋಹಿತ್‌ ಶರ್ಮಾ ವಿಕೆಟ್‌ ಆಘಾತ ನೀಡಿತು. ರೋಹಿತ್‌ 4(5) ಬಾರಿಸಿದರೇ ಇಶಾನ್‌ ಕಿಸಾನ್‌ 32(36) ಔಟಾಗಿ ಹೊರ ನಡೆದರು. ಈ ಇಬ್ಬರ ನಂತರ ಬಂದ ಬೇರ್ಯಾವ ಆಟಗಾರರು ತಂಡಕ್ಕೆ ಆಸರೆಯಾಗಲಿಲ್ಲ. ಈ ಬಾರಿಯೂ ಮುಂಬೈ ತಂಡಕ್ಕೆ ಮಧ್ಯಮ ಕ್ರಮಾಂಕ ಕೈಕೊಟ್ಟಿತು. ಸೂರ್ಯಕುಮಾರ್‌ ಯಾದವ್‌ 10(6) ಬಂದ ಹಾದಿಯಲ್ಲೇ ಹಿಂತಿರುಗಿದರು. ತಿಲಕ್‌ ಮರ್ಮಾ 7(11), ನಾಯಕ ಹಾರ್ದಿಕ್‌ ಪಾಂಡ್ಯ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದರು.

ಬಳಿಕ ಒಂದಾದ ವಧೇರಾ ಹಾಗೂ ಟಿಮ್‌ ಡೇವಿಡ್‌ ಚೇತರಿಕೆ ಆಟವಾಡಿದರು. ವಧೇರಾ 46(41)ರನ್‌ ಹಾಗೂ ಡೇವಿಡ್‌ 35(18) ರನ್‌ ಬಾರಿಸಿ ತಂಡದ ಮೊತ್ತ 140ರ ಗಡಿ ದಾಟಲು ಸಹಕರಿಸಿದರು. ಉಳಿದಂತೆ ನಬಿ ಹಾಗೂ ಕಾಟ್ಜಿ ಔಟಾಗದೇ ತಲಾ ಒಂದೊಂದು ರನ್‌ ಬಾರಿಸಿದರು.

ಲಖನೌ ಪರ ಮೋಹ್ಸಿನ್‌ ಖಾನ್‌ 2, ಸ್ಟೋಯ್ನಿಸ್‌, ನವೀನ್‌ ಹುಲ್‌-ಹಕ್‌, ಮಯಾಂಕ್‌ ಯಾದವ್‌ ಹಾಗೂ ಬಿಷ್ನೋಯಿ ತಲಾ ಒಂದೊಂದು ವಿಕೆಟ್‌ ಪಡೆದು ಗಮನ ಸೆಳೆದರು.

ಎಲ್‌ಎಸ್‌ಜಿ ಇನ್ನಿಂಗ್ಸ್‌: ತಮ್ಮ ತವರಿನಂಗಳದಲ್ಲಿ ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಲಖನೌ ಪಡೆಗೆ ಆರಂಭಿಕ ಕುಸಿತ ಉಂಟಾಯಿತು. ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಬಂದ ಅರ್ಷಿನ್‌ ಕುಲ್ಕರ್ಣಿ ಶೂನ್ಯ ಸುತ್ತಿ ಹೊರನಡೆದರು. ಬಳಿಕ ನಾಯಕ ಕೆ.ಎಲ್‌ ರಾಹುಲ್‌ ಜೊತೆ ಇನ್ನಿಂಗ್ಸ್‌ ಕಟ್ಟಿದ ಸ್ಟೋಯ್ನಿಸ್‌ ಮುಂಬೈ ಬೌಲರ್‌ಗಳನ್ನು ಕಾಡಿದರು. ಕನ್ನಡಿಗ ರಾಹುಲ್‌ 28(22) ರನ್‌ ಬಾರಿಸಿ ಔಟಾದರು. ಇತ್ತ ತಮ್ಮ ಅಮೋಘ ಬ್ಯಾಟಿಂಗ್‌ ಮೂಲಕ ಅರ್ಧಶತಕ ಗಳಿಸಿ ಲಖನೌ ಗೆಲುವಿಗೆ ಸಹಕರಿಸಿದ ಸ್ಟೋಯ್ನಿಸ್‌ 62(45) ಇನ್ನಿಂಗ್ಸ್‌ ನಲ್ಲಿ 7ಬೌಂಡರಿ ಹಾಗೂ 2 ಸಿಕ್ಸರ್‌ ಸೇರಿದ್ದವು.

ಉಳಿದಂತೆ ದೀಪಕ್‌ ಹೂಡಾ 18(18), ಟರ್ನರ್‌ 5(8), ಬದೋನಿ 6(6) ರನ್‌ ಗಳಿಸಿ ಔಟಾದರು. ಕೊನೆಯಲ್ಲಿ ಔಟಾಗದೇ ನಿಕೋಲಸ್‌ ಪೂರನ್‌ 14(14) ಹಾಗೂ ಕೃನಾಲ್‌ ಪಾಂಡ್ಯ 1(1) ಜತೆಯಾಟವಾಡಿ ತಂಡಕ್ಕೆ ಗೆಲುವು ತಂದುಕೊಟ್ಟರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

2 hours ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

2 hours ago

ನೀರಿನ ಪೈಪ್‌ಲೈನ್ ಅಳವಡಿಕೆ ಚುರುಕು

  ೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…

2 hours ago

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

3 hours ago

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

15 hours ago