ಲಕ್ನೋ: ಇಲ್ಲಿನ ಏಕನ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ 34ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 8 ವಿಕೆಟ್ಗಳ ಭರ್ಜರಿ ಗೆಲುವು ಕಂಡಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಫೀಲ್ಡಿಂಗ್ ಆರಿಸಿಕೊಂಡು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಚೆನ್ನೈ ಸೂಪರ್ ಕಿಂಗ್ಸ್ ರವೀಂದ್ರ ಜಡೇಜಾ ಅರ್ಧಶತಕದ ನೆರವಿನಿಂದ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಕಲೆಹಾಕಿ 177 ರನ್ಗಳ ಗುರಿಯನ್ನು ನೀಡಿತು. ಲಕ್ನೋ ಸೂಪರ್ ಜೈಂಟ್ಸ್ ತಂಡ ಆರಂಭಿಕರಾದ ಡಿಕಾಕ್ ಹಾಗೂ ಕೆಎಲ್ ರಾಹುಲ್ ಭರ್ಜರಿ ಜತೆಯಾಟದ ನೆರವಿನಿಂದ 19 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 180 ರನ್ ಕಲೆಹಾಕಿತು.
ಚೆನ್ನೈ ಸೂಪರ್ ಕಿಂಗ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ರಚಿನ್ ರವೀಂದ್ರ ಗೋಲ್ಡನ್ ಡಕ್ ಆದರೆ, ಅಜಿಂಕ್ಯಾ ರಹಾನೆ 36 (24) ರನ್ ಗಳಿಸಿದರು. ಇನ್ನುಳಿದಂತೆ ರುತುರಾಜ್ ಗಾಯಕ್ವಾಡ್ 17 (13) ರನ್, ಶಿವಮ್ ದುಬೆ 3 (8) ರನ್, ಸಮೀರ್ ರಿಜ್ವಿ 1 (5) ರನ್, ಮೊಯಿನ್ ಅಲಿ 30 (20) ರನ್, ಎಂಎಸ್ ಧೋನಿ ಅಜೇಯ 28 (9) ರನ್ ಹಾಗೂ ರವೀಂದ್ರ ಜಡೇಜಾ ಅಜೇಯ 57 ( 40 ) ರನ್ ಬಾರಿಸಿದರು.
ಲಕ್ನೋ ಸೂಪರ್ ಜೈಂಟ್ಸ್ ಪರ ಕೃನಾಲ್ ಪಾಂಡ್ಯ 2 ವಿಕೆಟ್, ಮೊಹ್ಸಿನ್ ಖಾನ್, ಯಶ್ ಠಾಕೂರ್, ರವಿ ಬಿಷ್ಣೋಯಿ ಹಾಗೂ ಮಾರ್ಕಸ್ ಸ್ಟಾಯಿನಿಸ್ ತಲಾ ಒಂದೊಂದು ವಿಕೆಟ್ ಪಡೆದರು.
ಲಕ್ನೋ ಸೂಪರ್ಜೈಂಟ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟನ್ ಡಿಕಾಕ್ ಹಾಗೂ ನಾಯಕ ಕೆಎಲ್ ರಾಹುಲ್ 134 ರನ್ಗಳ ಜತೆಯಾಟವಾಡುವುದರ ಮೂಲಕ ಉತ್ತಮ ಆರಂಭವನ್ನು ಕಟ್ಟಿಕೊಟ್ಟರು. ಡಿಕಾಕ್ 54 (43 ) ರನ್ ಕಲೆಹಾಕಿದರೆ, ರಾಹುಲ್ 82 (53) ರನ್ ಬಾರಿಸಿದರು. ಇನ್ನುಳಿದಂತೆ ನಿಕೋಲಸ್ ಪೂರನ್ ಅಜೇಯ 23 (12) ರನ್ ಮತ್ತು ಮಾರ್ಕಸ್ ಸ್ಟಾಯಿನಿಸ್ ಅಜೇಯ 8 (7) ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಚೆನ್ನೈ ಸೂಪರ್ ಕಿಂಗ್ಸ್ ಪರ ಮುಸ್ತಫಿಜುರ್ ರಹಮಾನ್ ಹಾಗೂ ಮತೀಶ ಪತಿರಾನ ತಲಾ ಒಂದೊಂದು ವಿಕೆಟ್ ಪಡೆದರು.
ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…
ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್…
ಹನೂರು : ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿ.ಪಿ.ಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಯುವ…
ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…
ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…