ಲಕ್ನೋ: ಇಲ್ಲಿನ ಏಕನ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ 34ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 8 ವಿಕೆಟ್ಗಳ ಭರ್ಜರಿ ಗೆಲುವು ಕಂಡಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಫೀಲ್ಡಿಂಗ್ ಆರಿಸಿಕೊಂಡು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಚೆನ್ನೈ ಸೂಪರ್ ಕಿಂಗ್ಸ್ ರವೀಂದ್ರ ಜಡೇಜಾ ಅರ್ಧಶತಕದ ನೆರವಿನಿಂದ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಕಲೆಹಾಕಿ 177 ರನ್ಗಳ ಗುರಿಯನ್ನು ನೀಡಿತು. ಲಕ್ನೋ ಸೂಪರ್ ಜೈಂಟ್ಸ್ ತಂಡ ಆರಂಭಿಕರಾದ ಡಿಕಾಕ್ ಹಾಗೂ ಕೆಎಲ್ ರಾಹುಲ್ ಭರ್ಜರಿ ಜತೆಯಾಟದ ನೆರವಿನಿಂದ 19 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 180 ರನ್ ಕಲೆಹಾಕಿತು.
ಚೆನ್ನೈ ಸೂಪರ್ ಕಿಂಗ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ರಚಿನ್ ರವೀಂದ್ರ ಗೋಲ್ಡನ್ ಡಕ್ ಆದರೆ, ಅಜಿಂಕ್ಯಾ ರಹಾನೆ 36 (24) ರನ್ ಗಳಿಸಿದರು. ಇನ್ನುಳಿದಂತೆ ರುತುರಾಜ್ ಗಾಯಕ್ವಾಡ್ 17 (13) ರನ್, ಶಿವಮ್ ದುಬೆ 3 (8) ರನ್, ಸಮೀರ್ ರಿಜ್ವಿ 1 (5) ರನ್, ಮೊಯಿನ್ ಅಲಿ 30 (20) ರನ್, ಎಂಎಸ್ ಧೋನಿ ಅಜೇಯ 28 (9) ರನ್ ಹಾಗೂ ರವೀಂದ್ರ ಜಡೇಜಾ ಅಜೇಯ 57 ( 40 ) ರನ್ ಬಾರಿಸಿದರು.
ಲಕ್ನೋ ಸೂಪರ್ ಜೈಂಟ್ಸ್ ಪರ ಕೃನಾಲ್ ಪಾಂಡ್ಯ 2 ವಿಕೆಟ್, ಮೊಹ್ಸಿನ್ ಖಾನ್, ಯಶ್ ಠಾಕೂರ್, ರವಿ ಬಿಷ್ಣೋಯಿ ಹಾಗೂ ಮಾರ್ಕಸ್ ಸ್ಟಾಯಿನಿಸ್ ತಲಾ ಒಂದೊಂದು ವಿಕೆಟ್ ಪಡೆದರು.
ಲಕ್ನೋ ಸೂಪರ್ಜೈಂಟ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟನ್ ಡಿಕಾಕ್ ಹಾಗೂ ನಾಯಕ ಕೆಎಲ್ ರಾಹುಲ್ 134 ರನ್ಗಳ ಜತೆಯಾಟವಾಡುವುದರ ಮೂಲಕ ಉತ್ತಮ ಆರಂಭವನ್ನು ಕಟ್ಟಿಕೊಟ್ಟರು. ಡಿಕಾಕ್ 54 (43 ) ರನ್ ಕಲೆಹಾಕಿದರೆ, ರಾಹುಲ್ 82 (53) ರನ್ ಬಾರಿಸಿದರು. ಇನ್ನುಳಿದಂತೆ ನಿಕೋಲಸ್ ಪೂರನ್ ಅಜೇಯ 23 (12) ರನ್ ಮತ್ತು ಮಾರ್ಕಸ್ ಸ್ಟಾಯಿನಿಸ್ ಅಜೇಯ 8 (7) ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಚೆನ್ನೈ ಸೂಪರ್ ಕಿಂಗ್ಸ್ ಪರ ಮುಸ್ತಫಿಜುರ್ ರಹಮಾನ್ ಹಾಗೂ ಮತೀಶ ಪತಿರಾನ ತಲಾ ಒಂದೊಂದು ವಿಕೆಟ್ ಪಡೆದರು.
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…