ಕ್ರೀಡೆ

ಡಿಕಾಕ್‌ – ರಾಹುಲ್‌ ಜತೆಯಾಟಕ್ಕೆ ತಲೆಬಾಗಿದ ಚೆನ್ನೈ ಸೂಪರ್‌ ಕಿಂಗ್ಸ್‌

ಲಕ್ನೋ: ಇಲ್ಲಿನ ಏಕನ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ ಆವೃತ್ತಿಯ 34ನೇ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಲಕ್ನೋ ಸೂಪರ್‌ ಜೈಂಟ್ಸ್‌ ‌8 ವಿಕೆಟ್‌ಗಳ ಭರ್ಜರಿ ಗೆಲುವು ಕಂಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಲಕ್ನೋ ಸೂಪರ್ ಜೈಂಟ್ಸ್‌ ಫೀಲ್ಡಿಂಗ್‌ ಆರಿಸಿಕೊಂಡು ಚೆನ್ನೈ ಸೂಪರ್ ಕಿಂಗ್ಸ್‌ ತಂಡವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಚೆನ್ನೈ ಸೂಪರ್ ಕಿಂಗ್ಸ್‌ ರವೀಂದ್ರ ಜಡೇಜಾ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 176 ರನ್‌ ಕಲೆಹಾಕಿ 177 ರನ್‌ಗಳ ಗುರಿಯನ್ನು ನೀಡಿತು. ಲಕ್ನೋ ಸೂಪರ್‌ ಜೈಂಟ್ಸ್‌ ತಂಡ ಆರಂಭಿಕರಾದ ಡಿಕಾಕ್‌ ಹಾಗೂ ಕೆಎಲ್‌ ರಾಹುಲ್‌ ಭರ್ಜರಿ ಜತೆಯಾಟದ ನೆರವಿನಿಂದ 19 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 180 ರನ್‌ ಕಲೆಹಾಕಿತು.

ಚೆನ್ನೈ ಸೂಪರ್‌ ಕಿಂಗ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ರಚಿನ್‌ ರವೀಂದ್ರ ಗೋಲ್ಡನ್‌ ಡಕ್‌ ಆದರೆ, ಅಜಿಂಕ್ಯಾ ರಹಾನೆ 36 (24) ರನ್‌ ಗಳಿಸಿದರು. ಇನ್ನುಳಿದಂತೆ ರುತುರಾಜ್‌ ಗಾಯಕ್ವಾಡ್‌ 17 (13) ರನ್‌, ಶಿವಮ್‌ ದುಬೆ 3 (8) ರನ್‌, ಸಮೀರ್‌ ರಿಜ್ವಿ 1 (5) ರನ್‌, ಮೊಯಿನ್‌ ಅಲಿ 30 (20) ರನ್‌, ಎಂಎಸ್‌ ಧೋನಿ ಅಜೇಯ 28 (9) ರನ್‌ ಹಾಗೂ ರವೀಂದ್ರ ಜಡೇಜಾ ಅಜೇಯ 57 ( 40 ) ರನ್‌ ಬಾರಿಸಿದರು.

ಲಕ್ನೋ ಸೂಪರ್‌ ಜೈಂಟ್ಸ್‌ ಪರ ಕೃನಾಲ್‌ ಪಾಂಡ್ಯ 2 ವಿಕೆಟ್‌, ಮೊಹ್ಸಿನ್‌ ಖಾನ್‌, ಯಶ್‌ ಠಾಕೂರ್‌, ರವಿ ಬಿಷ್ಣೋಯಿ ಹಾಗೂ ಮಾರ್ಕಸ್‌ ಸ್ಟಾಯಿನಿಸ್ ತಲಾ ಒಂದೊಂದು ವಿಕೆಟ್‌ ಪಡೆದರು.

ಲಕ್ನೋ ಸೂಪರ್‌ಜೈಂಟ್ಸ್‌ ಇನ್ನಿಂಗ್ಸ್‌: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟನ್‌ ಡಿಕಾಕ್‌ ಹಾಗೂ ನಾಯಕ ಕೆಎಲ್‌ ರಾಹುಲ್‌ 134 ರನ್‌ಗಳ ಜತೆಯಾಟವಾಡುವುದರ ಮೂಲಕ ಉತ್ತಮ ಆರಂಭವನ್ನು ಕಟ್ಟಿಕೊಟ್ಟರು. ಡಿಕಾಕ್‌ 54 (43 ) ರನ್‌ ಕಲೆಹಾಕಿದರೆ, ರಾಹುಲ್‌ 82 (53) ರನ್‌ ಬಾರಿಸಿದರು. ಇನ್ನುಳಿದಂತೆ ನಿಕೋಲಸ್‌ ಪೂರನ್‌ ಅಜೇಯ 23 (12) ರನ್‌ ಮತ್ತು ಮಾರ್ಕಸ್‌ ಸ್ಟಾಯಿನಿಸ್‌ ಅಜೇಯ 8 (7) ರನ್‌ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಮುಸ್ತಫಿಜುರ್‌ ರಹಮಾನ್‌ ಹಾಗೂ ಮತೀಶ ಪತಿರಾನ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮೈಸೂರಲ್ಲಿ ಡ್ರಗ್ಸ್‌ ಪತ್ತೆ | ಸರ್ಕಾರ, ಪೊಲೀಸ್‌ ಮತ್ತೇ ವಿಫಲ ; ಯದುವೀರ್‌ ಅಸಮಾಧಾನ

ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…

2 mins ago

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿ ಸುನೇತ್ರಾ ಪ್ರಮಾಣ ವಚನ

ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್‌ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್…

22 mins ago

ದಂಟಳ್ಳಿ ಯೋಜನೆಗೆ ಡಿ.ಪಿ.ಆರ್ʼಗೆ ಒತ್ತಾಯಸಿ ಬೃಹತ್‌ ಪ್ರತಿಭಟನೆ

ಹನೂರು : ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿ.ಪಿ.ಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಯುವ…

33 mins ago

ಮೈಸೂರಲ್ಲಿ ಮತ್ತೊಂದು ಡ್ರಗ್ಸ್‌ ಫ್ಯಾಕ್ಟರಿ ಪತ್ತೆ : ಎನ್‌ಸಿಬಿ ಅಧಿಕೃತ ಮಾಹಿತಿ

ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋ (ಎನ್‌ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…

50 mins ago

ಸ್ವತಃ ಎದೆಗೆ ಗುಂಡಿಟ್ಟುಕೊಂಡ ಸಿ.ಜೆ.ರಾಯ್ :‌ ಮರಣೋತ್ತರ ಪರೀಕ್ಷೆಯಲ್ಲಿ ಧೃಢ

ಬೆಂಗಳೂರು: ಕಾನ್ಫಿಡೆಂಟ್‌ ಗ್ರೂಪ್‌ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್‌ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…

2 hours ago

ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…

2 hours ago