ಕ್ರೀಡೆ

ಡಿಕಾಕ್‌ – ರಾಹುಲ್‌ ಜತೆಯಾಟಕ್ಕೆ ತಲೆಬಾಗಿದ ಚೆನ್ನೈ ಸೂಪರ್‌ ಕಿಂಗ್ಸ್‌

ಲಕ್ನೋ: ಇಲ್ಲಿನ ಏಕನ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ ಆವೃತ್ತಿಯ 34ನೇ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಲಕ್ನೋ ಸೂಪರ್‌ ಜೈಂಟ್ಸ್‌ ‌8 ವಿಕೆಟ್‌ಗಳ ಭರ್ಜರಿ ಗೆಲುವು ಕಂಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಲಕ್ನೋ ಸೂಪರ್ ಜೈಂಟ್ಸ್‌ ಫೀಲ್ಡಿಂಗ್‌ ಆರಿಸಿಕೊಂಡು ಚೆನ್ನೈ ಸೂಪರ್ ಕಿಂಗ್ಸ್‌ ತಂಡವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಚೆನ್ನೈ ಸೂಪರ್ ಕಿಂಗ್ಸ್‌ ರವೀಂದ್ರ ಜಡೇಜಾ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 176 ರನ್‌ ಕಲೆಹಾಕಿ 177 ರನ್‌ಗಳ ಗುರಿಯನ್ನು ನೀಡಿತು. ಲಕ್ನೋ ಸೂಪರ್‌ ಜೈಂಟ್ಸ್‌ ತಂಡ ಆರಂಭಿಕರಾದ ಡಿಕಾಕ್‌ ಹಾಗೂ ಕೆಎಲ್‌ ರಾಹುಲ್‌ ಭರ್ಜರಿ ಜತೆಯಾಟದ ನೆರವಿನಿಂದ 19 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 180 ರನ್‌ ಕಲೆಹಾಕಿತು.

ಚೆನ್ನೈ ಸೂಪರ್‌ ಕಿಂಗ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ರಚಿನ್‌ ರವೀಂದ್ರ ಗೋಲ್ಡನ್‌ ಡಕ್‌ ಆದರೆ, ಅಜಿಂಕ್ಯಾ ರಹಾನೆ 36 (24) ರನ್‌ ಗಳಿಸಿದರು. ಇನ್ನುಳಿದಂತೆ ರುತುರಾಜ್‌ ಗಾಯಕ್ವಾಡ್‌ 17 (13) ರನ್‌, ಶಿವಮ್‌ ದುಬೆ 3 (8) ರನ್‌, ಸಮೀರ್‌ ರಿಜ್ವಿ 1 (5) ರನ್‌, ಮೊಯಿನ್‌ ಅಲಿ 30 (20) ರನ್‌, ಎಂಎಸ್‌ ಧೋನಿ ಅಜೇಯ 28 (9) ರನ್‌ ಹಾಗೂ ರವೀಂದ್ರ ಜಡೇಜಾ ಅಜೇಯ 57 ( 40 ) ರನ್‌ ಬಾರಿಸಿದರು.

ಲಕ್ನೋ ಸೂಪರ್‌ ಜೈಂಟ್ಸ್‌ ಪರ ಕೃನಾಲ್‌ ಪಾಂಡ್ಯ 2 ವಿಕೆಟ್‌, ಮೊಹ್ಸಿನ್‌ ಖಾನ್‌, ಯಶ್‌ ಠಾಕೂರ್‌, ರವಿ ಬಿಷ್ಣೋಯಿ ಹಾಗೂ ಮಾರ್ಕಸ್‌ ಸ್ಟಾಯಿನಿಸ್ ತಲಾ ಒಂದೊಂದು ವಿಕೆಟ್‌ ಪಡೆದರು.

ಲಕ್ನೋ ಸೂಪರ್‌ಜೈಂಟ್ಸ್‌ ಇನ್ನಿಂಗ್ಸ್‌: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟನ್‌ ಡಿಕಾಕ್‌ ಹಾಗೂ ನಾಯಕ ಕೆಎಲ್‌ ರಾಹುಲ್‌ 134 ರನ್‌ಗಳ ಜತೆಯಾಟವಾಡುವುದರ ಮೂಲಕ ಉತ್ತಮ ಆರಂಭವನ್ನು ಕಟ್ಟಿಕೊಟ್ಟರು. ಡಿಕಾಕ್‌ 54 (43 ) ರನ್‌ ಕಲೆಹಾಕಿದರೆ, ರಾಹುಲ್‌ 82 (53) ರನ್‌ ಬಾರಿಸಿದರು. ಇನ್ನುಳಿದಂತೆ ನಿಕೋಲಸ್‌ ಪೂರನ್‌ ಅಜೇಯ 23 (12) ರನ್‌ ಮತ್ತು ಮಾರ್ಕಸ್‌ ಸ್ಟಾಯಿನಿಸ್‌ ಅಜೇಯ 8 (7) ರನ್‌ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಮುಸ್ತಫಿಜುರ್‌ ರಹಮಾನ್‌ ಹಾಗೂ ಮತೀಶ ಪತಿರಾನ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

2 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

2 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

3 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

6 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

6 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

6 hours ago