ಕ್ರೀಡೆ

ಡಿಕಾಕ್‌ – ರಾಹುಲ್‌ ಜತೆಯಾಟಕ್ಕೆ ತಲೆಬಾಗಿದ ಚೆನ್ನೈ ಸೂಪರ್‌ ಕಿಂಗ್ಸ್‌

ಲಕ್ನೋ: ಇಲ್ಲಿನ ಏಕನ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ ಆವೃತ್ತಿಯ 34ನೇ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಲಕ್ನೋ ಸೂಪರ್‌ ಜೈಂಟ್ಸ್‌ ‌8 ವಿಕೆಟ್‌ಗಳ ಭರ್ಜರಿ ಗೆಲುವು ಕಂಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಲಕ್ನೋ ಸೂಪರ್ ಜೈಂಟ್ಸ್‌ ಫೀಲ್ಡಿಂಗ್‌ ಆರಿಸಿಕೊಂಡು ಚೆನ್ನೈ ಸೂಪರ್ ಕಿಂಗ್ಸ್‌ ತಂಡವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಚೆನ್ನೈ ಸೂಪರ್ ಕಿಂಗ್ಸ್‌ ರವೀಂದ್ರ ಜಡೇಜಾ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 176 ರನ್‌ ಕಲೆಹಾಕಿ 177 ರನ್‌ಗಳ ಗುರಿಯನ್ನು ನೀಡಿತು. ಲಕ್ನೋ ಸೂಪರ್‌ ಜೈಂಟ್ಸ್‌ ತಂಡ ಆರಂಭಿಕರಾದ ಡಿಕಾಕ್‌ ಹಾಗೂ ಕೆಎಲ್‌ ರಾಹುಲ್‌ ಭರ್ಜರಿ ಜತೆಯಾಟದ ನೆರವಿನಿಂದ 19 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 180 ರನ್‌ ಕಲೆಹಾಕಿತು.

ಚೆನ್ನೈ ಸೂಪರ್‌ ಕಿಂಗ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ರಚಿನ್‌ ರವೀಂದ್ರ ಗೋಲ್ಡನ್‌ ಡಕ್‌ ಆದರೆ, ಅಜಿಂಕ್ಯಾ ರಹಾನೆ 36 (24) ರನ್‌ ಗಳಿಸಿದರು. ಇನ್ನುಳಿದಂತೆ ರುತುರಾಜ್‌ ಗಾಯಕ್ವಾಡ್‌ 17 (13) ರನ್‌, ಶಿವಮ್‌ ದುಬೆ 3 (8) ರನ್‌, ಸಮೀರ್‌ ರಿಜ್ವಿ 1 (5) ರನ್‌, ಮೊಯಿನ್‌ ಅಲಿ 30 (20) ರನ್‌, ಎಂಎಸ್‌ ಧೋನಿ ಅಜೇಯ 28 (9) ರನ್‌ ಹಾಗೂ ರವೀಂದ್ರ ಜಡೇಜಾ ಅಜೇಯ 57 ( 40 ) ರನ್‌ ಬಾರಿಸಿದರು.

ಲಕ್ನೋ ಸೂಪರ್‌ ಜೈಂಟ್ಸ್‌ ಪರ ಕೃನಾಲ್‌ ಪಾಂಡ್ಯ 2 ವಿಕೆಟ್‌, ಮೊಹ್ಸಿನ್‌ ಖಾನ್‌, ಯಶ್‌ ಠಾಕೂರ್‌, ರವಿ ಬಿಷ್ಣೋಯಿ ಹಾಗೂ ಮಾರ್ಕಸ್‌ ಸ್ಟಾಯಿನಿಸ್ ತಲಾ ಒಂದೊಂದು ವಿಕೆಟ್‌ ಪಡೆದರು.

ಲಕ್ನೋ ಸೂಪರ್‌ಜೈಂಟ್ಸ್‌ ಇನ್ನಿಂಗ್ಸ್‌: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟನ್‌ ಡಿಕಾಕ್‌ ಹಾಗೂ ನಾಯಕ ಕೆಎಲ್‌ ರಾಹುಲ್‌ 134 ರನ್‌ಗಳ ಜತೆಯಾಟವಾಡುವುದರ ಮೂಲಕ ಉತ್ತಮ ಆರಂಭವನ್ನು ಕಟ್ಟಿಕೊಟ್ಟರು. ಡಿಕಾಕ್‌ 54 (43 ) ರನ್‌ ಕಲೆಹಾಕಿದರೆ, ರಾಹುಲ್‌ 82 (53) ರನ್‌ ಬಾರಿಸಿದರು. ಇನ್ನುಳಿದಂತೆ ನಿಕೋಲಸ್‌ ಪೂರನ್‌ ಅಜೇಯ 23 (12) ರನ್‌ ಮತ್ತು ಮಾರ್ಕಸ್‌ ಸ್ಟಾಯಿನಿಸ್‌ ಅಜೇಯ 8 (7) ರನ್‌ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಮುಸ್ತಫಿಜುರ್‌ ರಹಮಾನ್‌ ಹಾಗೂ ಮತೀಶ ಪತಿರಾನ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

6 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

7 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

11 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

11 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

11 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

11 hours ago