ಕ್ರೀಡೆ

IPL 2024: ಮುಂಬೈ ಹೀನಾಯ ಪ್ರದರ್ಶನಕ್ಕೆ ಕಾರಣ ಹೇಳಿದ ನಾಯಕ ಪಾಂಡೆ

ಮುಂಬೈ: 2024ರ ಐಪಿಎಲ್‌ ಸೀಸನ್‌ನಲ್ಲಿ ಈ ಬಾರಿ ಮುಂಬೈ ಇಂಡಿಯನ್ಸ್‌ ತಂಡ ಸೋಲಿಗೆ ಕಳಪೆ ಪ್ರದರ್ಶನವೇ ಕಾರಣವಾಯಿತು ಎಂದು ತಂಡದ ನಾಯಕ ಹಾರ್ದಿಕ್‌ ಪಾಂಡ್ಯ ಟೂರ್ನಿಯ ಹೀನಾಯ ಪ್ರದರ್ಶನಕ್ಕೆ ನಿಜವಾದ ಕಾರಣವನ್ನು ತಿಳಿಸಿದ್ದಾರೆ.

ಮುಂಬೈ ತಾವಾಡಿದ ಕೊನೆಯ ಪಂದ್ಯದಲ್ಲಿ ಸೋಲುವ ಮೂಲಕ ಈ ಸೀಸನ್‌ನಲ್ಲಿ ಕೊನೆಯ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ಮುಂಬೈ 14 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳಲ್ಲಿ ಗೆದ್ದು 10 ಪಂದ್ಯಗಳಲ್ಲಿ ಸೋಲುವ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿದೆ.

ಶುಕ್ರವಾರ (ಮೇ.17) ವಾಂಖೆಡೆಯಲ್ಲಿ ನಡೆದ ಮುಂಬೈ ಇಂಡಿಯನ್ಸ್‌-ಲಖನೌ ಸೂಪರ್‌ ಜೈಂಟ್ಸ್‌ ನಡುವಿನ ಪಂದ್ಯದಲ್ಲಿ ಮುಂಬೈ 18 ರನ್‌ಗಳ ಅಂತರದಿಂದ ಸೋಲು ಕಂಡ ಬಳಿಕ ನೀಡಿದ ಸಂದರ್ಶನ ಸಂದರ್ಶನದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾನು ಉತ್ತಮವಾಗಿ ಆಡಲಿಲ್ಲ. ನಾವು ಒಂದು ತಂಡವಾಗಿ ಉತ್ತಮ ಪ್ರದರ್ಶನ ನೀಡದೇ ಇರುವುದು ಟೂರ್ನಿಯಲ್ಲಿ ಹಿನ್ನಡೆ ಅನುಭವಿಸಲು ಕಾರಣವಾಯಿತು. ಇದೊಂದು ಬೇಸರದ ಸಂಗತಿಯಾಗಿದೆ ಎಂದಿದ್ದಾರೆ.

ನಾವು ಅಂಗಳಕ್ಕೆ ಕಾಲಿಟ್ಟ ಬಳಿಕ ಉತ್ತಮವಾದುದ್ದನ್ನೇ ನೀಡಬೇಕು. ನಾವು ಒಂದು ತಂಡವಾಗಿ ಉತ್ತಮ ಆಟ ನೀಡುವಲ್ಲಿ ವಿಫಲವಾದೆವು. ಹುರುಪಿನಿಂದ ಆಡಲಿಲ್ಲ. ಗುಣಮಟ್ಟದ ಕ್ರಿಕೆಟ್‌ ಆಡುವಲ್ಲಿ ನಾವು ಸೋತೆವು ಎಂದು ಸೋಲಿನ ಬಗ್ಗೆ ನಾಯಕ ಹಾರ್ದಿಕ್‌ ಪಾಂಡ್ಯ ಹೇಳಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

6 mins ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

29 mins ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

38 mins ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

49 mins ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

60 mins ago

ಯುಪಿಎಸ್‌ಸಿ ಪರೀಕ್ಷೆಗೆ ಕಠಿಣ ಪರಿಶ್ರಮ ಅಗತ್ಯ : ಕಿರಣ ಕಮತೆ

ಮೈಸೂರು : ಯುಪಿಎಸ್‌ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…

1 hour ago