ಮುಂಬೈ: 2024ರ ಐಪಿಎಲ್ ಸೀಸನ್ನಲ್ಲಿ ಈ ಬಾರಿ ಮುಂಬೈ ಇಂಡಿಯನ್ಸ್ ತಂಡ ಸೋಲಿಗೆ ಕಳಪೆ ಪ್ರದರ್ಶನವೇ ಕಾರಣವಾಯಿತು ಎಂದು ತಂಡದ ನಾಯಕ ಹಾರ್ದಿಕ್ ಪಾಂಡ್ಯ ಟೂರ್ನಿಯ ಹೀನಾಯ ಪ್ರದರ್ಶನಕ್ಕೆ ನಿಜವಾದ ಕಾರಣವನ್ನು ತಿಳಿಸಿದ್ದಾರೆ.
ಮುಂಬೈ ತಾವಾಡಿದ ಕೊನೆಯ ಪಂದ್ಯದಲ್ಲಿ ಸೋಲುವ ಮೂಲಕ ಈ ಸೀಸನ್ನಲ್ಲಿ ಕೊನೆಯ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ಮುಂಬೈ 14 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳಲ್ಲಿ ಗೆದ್ದು 10 ಪಂದ್ಯಗಳಲ್ಲಿ ಸೋಲುವ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿದೆ.
ಶುಕ್ರವಾರ (ಮೇ.17) ವಾಂಖೆಡೆಯಲ್ಲಿ ನಡೆದ ಮುಂಬೈ ಇಂಡಿಯನ್ಸ್-ಲಖನೌ ಸೂಪರ್ ಜೈಂಟ್ಸ್ ನಡುವಿನ ಪಂದ್ಯದಲ್ಲಿ ಮುಂಬೈ 18 ರನ್ಗಳ ಅಂತರದಿಂದ ಸೋಲು ಕಂಡ ಬಳಿಕ ನೀಡಿದ ಸಂದರ್ಶನ ಸಂದರ್ಶನದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ನಾನು ಉತ್ತಮವಾಗಿ ಆಡಲಿಲ್ಲ. ನಾವು ಒಂದು ತಂಡವಾಗಿ ಉತ್ತಮ ಪ್ರದರ್ಶನ ನೀಡದೇ ಇರುವುದು ಟೂರ್ನಿಯಲ್ಲಿ ಹಿನ್ನಡೆ ಅನುಭವಿಸಲು ಕಾರಣವಾಯಿತು. ಇದೊಂದು ಬೇಸರದ ಸಂಗತಿಯಾಗಿದೆ ಎಂದಿದ್ದಾರೆ.
ನಾವು ಅಂಗಳಕ್ಕೆ ಕಾಲಿಟ್ಟ ಬಳಿಕ ಉತ್ತಮವಾದುದ್ದನ್ನೇ ನೀಡಬೇಕು. ನಾವು ಒಂದು ತಂಡವಾಗಿ ಉತ್ತಮ ಆಟ ನೀಡುವಲ್ಲಿ ವಿಫಲವಾದೆವು. ಹುರುಪಿನಿಂದ ಆಡಲಿಲ್ಲ. ಗುಣಮಟ್ಟದ ಕ್ರಿಕೆಟ್ ಆಡುವಲ್ಲಿ ನಾವು ಸೋತೆವು ಎಂದು ಸೋಲಿನ ಬಗ್ಗೆ ನಾಯಕ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…