ಕ್ರೀಡೆ

IPL 2024: ಮುಂಬೈ ಹೀನಾಯ ಪ್ರದರ್ಶನಕ್ಕೆ ಕಾರಣ ಹೇಳಿದ ನಾಯಕ ಪಾಂಡೆ

ಮುಂಬೈ: 2024ರ ಐಪಿಎಲ್‌ ಸೀಸನ್‌ನಲ್ಲಿ ಈ ಬಾರಿ ಮುಂಬೈ ಇಂಡಿಯನ್ಸ್‌ ತಂಡ ಸೋಲಿಗೆ ಕಳಪೆ ಪ್ರದರ್ಶನವೇ ಕಾರಣವಾಯಿತು ಎಂದು ತಂಡದ ನಾಯಕ ಹಾರ್ದಿಕ್‌ ಪಾಂಡ್ಯ ಟೂರ್ನಿಯ ಹೀನಾಯ ಪ್ರದರ್ಶನಕ್ಕೆ ನಿಜವಾದ ಕಾರಣವನ್ನು ತಿಳಿಸಿದ್ದಾರೆ.

ಮುಂಬೈ ತಾವಾಡಿದ ಕೊನೆಯ ಪಂದ್ಯದಲ್ಲಿ ಸೋಲುವ ಮೂಲಕ ಈ ಸೀಸನ್‌ನಲ್ಲಿ ಕೊನೆಯ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ಮುಂಬೈ 14 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳಲ್ಲಿ ಗೆದ್ದು 10 ಪಂದ್ಯಗಳಲ್ಲಿ ಸೋಲುವ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿದೆ.

ಶುಕ್ರವಾರ (ಮೇ.17) ವಾಂಖೆಡೆಯಲ್ಲಿ ನಡೆದ ಮುಂಬೈ ಇಂಡಿಯನ್ಸ್‌-ಲಖನೌ ಸೂಪರ್‌ ಜೈಂಟ್ಸ್‌ ನಡುವಿನ ಪಂದ್ಯದಲ್ಲಿ ಮುಂಬೈ 18 ರನ್‌ಗಳ ಅಂತರದಿಂದ ಸೋಲು ಕಂಡ ಬಳಿಕ ನೀಡಿದ ಸಂದರ್ಶನ ಸಂದರ್ಶನದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾನು ಉತ್ತಮವಾಗಿ ಆಡಲಿಲ್ಲ. ನಾವು ಒಂದು ತಂಡವಾಗಿ ಉತ್ತಮ ಪ್ರದರ್ಶನ ನೀಡದೇ ಇರುವುದು ಟೂರ್ನಿಯಲ್ಲಿ ಹಿನ್ನಡೆ ಅನುಭವಿಸಲು ಕಾರಣವಾಯಿತು. ಇದೊಂದು ಬೇಸರದ ಸಂಗತಿಯಾಗಿದೆ ಎಂದಿದ್ದಾರೆ.

ನಾವು ಅಂಗಳಕ್ಕೆ ಕಾಲಿಟ್ಟ ಬಳಿಕ ಉತ್ತಮವಾದುದ್ದನ್ನೇ ನೀಡಬೇಕು. ನಾವು ಒಂದು ತಂಡವಾಗಿ ಉತ್ತಮ ಆಟ ನೀಡುವಲ್ಲಿ ವಿಫಲವಾದೆವು. ಹುರುಪಿನಿಂದ ಆಡಲಿಲ್ಲ. ಗುಣಮಟ್ಟದ ಕ್ರಿಕೆಟ್‌ ಆಡುವಲ್ಲಿ ನಾವು ಸೋತೆವು ಎಂದು ಸೋಲಿನ ಬಗ್ಗೆ ನಾಯಕ ಹಾರ್ದಿಕ್‌ ಪಾಂಡ್ಯ ಹೇಳಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

14 mins ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

18 mins ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

23 mins ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

35 mins ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

40 mins ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

46 mins ago