ಬೆಂಗಳೂರು: ಇದೇ ಶನಿವಾರ(ಮೇ.18) ರಂದು ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಹೈವೋಲ್ಟೇಜ್ ಕದನಕ್ಕೆ ವೇದಿಕೆ ಸಜ್ಜಾಗಿದೆ.
ಇತ್ತಂಡಗಳು ಪ್ಲೇಆಫ್ ತಲುಪಲು ನಿರ್ಣಯದ ಪಂದ್ಯ ಇದಾಗಿದ್ದು, ಗೆದ್ದ ತಂಡ ಪ್ಲೇ ಆಫ್ ತಲುಪಿದರೇ, ಸೋತ ತಂಡ ಈ ಆವೃತ್ತಿಯಿಂದ ಹೊರ ಬೀಳಲಿದೆ. ಈ ಸೀಸನ್ ನ ಎಲ್ಲಾ ಪಂದ್ಯಗಳಿಗಿಂತ ಈ ಪಂದ್ಯ ಅತಿಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡ ಪಂದ್ಯವಾಗಿದೆ.
ಭಾರತೀಯ ಕ್ರಿಕೆಟ್ ಕಂಡ ಅತ್ಯುತ್ತಮ ಆಟಗಾರರಾದ ಎಂ.ಎಸ್ ಧೋನಿ ಹಾಗೂ ವಿರಾಟ್ ಕೊಹ್ಲಿ ಅವರು ಈ ಪಂದ್ಯದ ಪ್ರಮುಖ ಆಕರ್ಷಣೆಗಾಗಿದ್ದಾರೆ. ಈ ಇಬ್ಬರು ಆಟಗಾರರನ್ನು ಎದುರಾಳಿಗಳನ್ನಾಗಿ ನೋಡುವುದು ಇದೇ ಕೊನೆಯ ಬಾರಿ ಎಂದು ಫ್ಯಾನ್ಸ್ ಎಲ್ಲರೂ ಭಾವಿಸಿದ್ದು ಈ ಪಂದ್ಯ ಹೆಚ್ಚಿನ ಮನ್ನಣೆ ಪಡೆದುಕೊಂಡಿದೆ.
ಇನ್ನು ಈ ಪಂದ್ಯ ಆರ್ಸಿಬಿ ತವರಿನಂಗಳದಲ್ಲಿ ನಡೆಯಲಿದ್ದು, ನಿನ್ನೆ ಸಿಎಸ್ಕೆ ಪಾಳಯ ಚಿನ್ನಸ್ವಾಮಿಗೆ ಬಂದಿಳಿದಿದೆ. ಪಂದ್ಯ ಆರಂಭಕ್ಕೂ ಮುನ್ನಾ ಸಿಎಸ್ಕೆ ಮಾಜಿ ಕಪ್ತಾನ್ ಎಂ.ಎಸ್ ಧೋನಿ ಆರ್ಸಿಬಿ ಡ್ರೆಸ್ಸಿಂಗ್ ರೂಮ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಹೌದು, ಎಂಎಸ್ಡಿ, ಆರ್ಸಿಬಿ ಡ್ರೆಸ್ಸಿಂಗ್ ರೂಂನಲ್ಲಿ ಕಾಣಿಸಿಕೊಂಡಿದ್ದಾರೆ. ಅದು ಚಹಾ ಕುಡಿಯಲು. ಧೋನಿ ಅವರಿಗೆ ಚಹಾ ಮೇಲಿನ ಪ್ರೀತಿ ಎಲ್ಲರಿಗೂ ತಿಳಿದಿರುವ ವಿಷಯ. ಅದರಂತೆ ಅವರ ಸರಳತೆಯೂ ಎಲ್ಲರನ್ನು ಆಗಾಗ್ಗೆ ಗೆಲ್ಲುವುದಂತು ನಿಜ. ಆರ್ಸಿಬಿ ಡ್ರೆಸ್ಸಿಂಗ್ ರೂಂಗೆ ತೆರಳಿ ಅಲ್ಲಿನ ಸಿಬ್ಬಂದಿಗಳಿಂದ ಚಹಾ ಪಡೆದು ಧನ್ಯವಾದ ಹೇಳಿ ಧೋನಿ ವಾಪಸಾಗಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಈ ವಿಡಿಯೋವನ್ನು ಆರ್ಸಿಬಿ ತನ್ನ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ಬೆಂಗಳೂರಿಗೆ ನಿಮಗೆ ಸ್ವಾಗತ ಮಹಿ ಭಯ್ ಎಂದು ಟ್ಯಾಗ್ ಲೈನ್ ನೀಡಿದ್ದಾರೆ.
ಇದನ್ನು ನೋಡಿದ ಅಭಿಮಾನಿಗಳು ಸಖತ್ ಖುಷ್ ಆಗಿದ್ದಾರೆ. ಇನ್ನು ವಿಕೆ-ಎಂಎಸ್ಡಿ ಅವರನ್ನು ಕೊನೆಯ ಬಾರಿ ನೋಡಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…