ಕ್ರೀಡೆ

IPL 2024: ಆರ್‌ಸಿಬಿ ಡ್ರೆಸ್ಸಿಂಗ್‌ ರೂಂನಲ್ಲಿ ಎಂಎಸ್‌ಡಿ ದರ್ಶನ: ಯಾಕೆ ಗೊತ್ತಾ?

ಬೆಂಗಳೂರು: ಇದೇ ಶನಿವಾರ(ಮೇ.18) ರಂದು ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ಹೈವೋಲ್ಟೇಜ್‌ ಕದನಕ್ಕೆ ವೇದಿಕೆ ಸಜ್ಜಾಗಿದೆ.

ಇತ್ತಂಡಗಳು ಪ್ಲೇಆಫ್‌ ತಲುಪಲು ನಿರ್ಣಯದ ಪಂದ್ಯ ಇದಾಗಿದ್ದು, ಗೆದ್ದ ತಂಡ ಪ್ಲೇ ಆಫ್‌ ತಲುಪಿದರೇ, ಸೋತ ತಂಡ ಈ ಆವೃತ್ತಿಯಿಂದ ಹೊರ ಬೀಳಲಿದೆ. ಈ ಸೀಸನ್‌ ನ ಎಲ್ಲಾ ಪಂದ್ಯಗಳಿಗಿಂತ ಈ ಪಂದ್ಯ ಅತಿಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡ ಪಂದ್ಯವಾಗಿದೆ.

ಭಾರತೀಯ ಕ್ರಿಕೆಟ್‌ ಕಂಡ ಅತ್ಯುತ್ತಮ ಆಟಗಾರರಾದ ಎಂ.ಎಸ್‌ ಧೋನಿ ಹಾಗೂ ವಿರಾಟ್‌ ಕೊಹ್ಲಿ ಅವರು ಈ ಪಂದ್ಯದ ಪ್ರಮುಖ ಆಕರ್ಷಣೆಗಾಗಿದ್ದಾರೆ. ಈ ಇಬ್ಬರು ಆಟಗಾರರನ್ನು ಎದುರಾಳಿಗಳನ್ನಾಗಿ ನೋಡುವುದು ಇದೇ ಕೊನೆಯ ಬಾರಿ ಎಂದು ಫ್ಯಾನ್ಸ್‌ ಎಲ್ಲರೂ ಭಾವಿಸಿದ್ದು ಈ ಪಂದ್ಯ ಹೆಚ್ಚಿನ ಮನ್ನಣೆ ಪಡೆದುಕೊಂಡಿದೆ.

ಇನ್ನು ಈ ಪಂದ್ಯ ಆರ್‌ಸಿಬಿ ತವರಿನಂಗಳದಲ್ಲಿ ನಡೆಯಲಿದ್ದು, ನಿನ್ನೆ ಸಿಎಸ್‌ಕೆ ಪಾಳಯ ಚಿನ್ನಸ್ವಾಮಿಗೆ ಬಂದಿಳಿದಿದೆ. ಪಂದ್ಯ ಆರಂಭಕ್ಕೂ ಮುನ್ನಾ ಸಿಎಸ್‌ಕೆ ಮಾಜಿ ಕಪ್ತಾನ್‌ ಎಂ.ಎಸ್‌ ಧೋನಿ ಆರ್‌ಸಿಬಿ ಡ್ರೆಸ್ಸಿಂಗ್‌ ರೂಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಹೌದು, ಎಂಎಸ್‌ಡಿ, ಆರ್‌ಸಿಬಿ ಡ್ರೆಸ್ಸಿಂಗ್‌ ರೂಂನಲ್ಲಿ ಕಾಣಿಸಿಕೊಂಡಿದ್ದಾರೆ. ಅದು ಚಹಾ ಕುಡಿಯಲು. ಧೋನಿ ಅವರಿಗೆ ಚಹಾ ಮೇಲಿನ ಪ್ರೀತಿ ಎಲ್ಲರಿಗೂ ತಿಳಿದಿರುವ ವಿಷಯ. ಅದರಂತೆ ಅವರ ಸರಳತೆಯೂ ಎಲ್ಲರನ್ನು ಆಗಾಗ್ಗೆ ಗೆಲ್ಲುವುದಂತು ನಿಜ. ಆರ್‌ಸಿಬಿ ಡ್ರೆಸ್ಸಿಂಗ್‌ ರೂಂಗೆ ತೆರಳಿ ಅಲ್ಲಿನ ಸಿಬ್ಬಂದಿಗಳಿಂದ ಚಹಾ ಪಡೆದು ಧನ್ಯವಾದ ಹೇಳಿ ಧೋನಿ ವಾಪಸಾಗಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗಿದೆ.

ಈ ವಿಡಿಯೋವನ್ನು ಆರ್‌ಸಿಬಿ ತನ್ನ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದು, ಬೆಂಗಳೂರಿಗೆ ನಿಮಗೆ ಸ್ವಾಗತ ಮಹಿ ಭಯ್‌ ಎಂದು ಟ್ಯಾಗ್‌ ಲೈನ್‌ ನೀಡಿದ್ದಾರೆ.

ಇದನ್ನು ನೋಡಿದ ಅಭಿಮಾನಿಗಳು ಸಖತ್‌ ಖುಷ್‌ ಆಗಿದ್ದಾರೆ. ಇನ್ನು ವಿಕೆ-ಎಂಎಸ್‌ಡಿ ಅವರನ್ನು ಕೊನೆಯ ಬಾರಿ ನೋಡಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹುಣಸೂರು | ಹಾಡಹಗಲೇ 5 ಕೋಟಿ ಚಿನ್ನಾಭರಣ ದರೋಡೆ! ಬೈಕ್‌ನಲ್ಲಿ ಪರಾರಿ

ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ…

11 mins ago

ವರ್ಷದ ಕೊನೆಯ ಮನ್‌ ಕಿ ಬಾತ್‌ನಲ್ಲಿ 2025ರ ಭಾರತದ ಸಾಧನೆ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್‌ ಕಿ ಬಾತ್‌ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…

53 mins ago

ಜಲಾಂತರಗಾಮಿ ನೌಕೆಯಲ್ಲಿ ಪ್ರಯಾಣಿಸಿ ಹೊಸ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…

1 hour ago

800 ಕಿ.ಮೀ ಪಾದಯಾತ್ರೆ ಮೂಲಕ ಅಯ್ಯಪ್ಪನ ದರ್ಶನ ಪಡೆಯುವುದಕ್ಕೆ ಹೊರಟ ಭಕ್ತರು

ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…

1 hour ago

ಚಾಮರಾಜನಗರ| ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ

ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ…

2 hours ago

ಸಿಎಂ ಸಿದ್ದರಾಮಯ್ಯ ತವರಲ್ಲಿ ದಲಿತ ಸಿಎಂ ಕೂಗು

ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ಸಿಎಂ ಮಾಡುವಂತೆ…

2 hours ago