ಕ್ರೀಡೆ

IPL 2024: ಆರ್‌ಸಿಬಿ ಡ್ರೆಸ್ಸಿಂಗ್‌ ರೂಂನಲ್ಲಿ ಎಂಎಸ್‌ಡಿ ದರ್ಶನ: ಯಾಕೆ ಗೊತ್ತಾ?

ಬೆಂಗಳೂರು: ಇದೇ ಶನಿವಾರ(ಮೇ.18) ರಂದು ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ಹೈವೋಲ್ಟೇಜ್‌ ಕದನಕ್ಕೆ ವೇದಿಕೆ ಸಜ್ಜಾಗಿದೆ.

ಇತ್ತಂಡಗಳು ಪ್ಲೇಆಫ್‌ ತಲುಪಲು ನಿರ್ಣಯದ ಪಂದ್ಯ ಇದಾಗಿದ್ದು, ಗೆದ್ದ ತಂಡ ಪ್ಲೇ ಆಫ್‌ ತಲುಪಿದರೇ, ಸೋತ ತಂಡ ಈ ಆವೃತ್ತಿಯಿಂದ ಹೊರ ಬೀಳಲಿದೆ. ಈ ಸೀಸನ್‌ ನ ಎಲ್ಲಾ ಪಂದ್ಯಗಳಿಗಿಂತ ಈ ಪಂದ್ಯ ಅತಿಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡ ಪಂದ್ಯವಾಗಿದೆ.

ಭಾರತೀಯ ಕ್ರಿಕೆಟ್‌ ಕಂಡ ಅತ್ಯುತ್ತಮ ಆಟಗಾರರಾದ ಎಂ.ಎಸ್‌ ಧೋನಿ ಹಾಗೂ ವಿರಾಟ್‌ ಕೊಹ್ಲಿ ಅವರು ಈ ಪಂದ್ಯದ ಪ್ರಮುಖ ಆಕರ್ಷಣೆಗಾಗಿದ್ದಾರೆ. ಈ ಇಬ್ಬರು ಆಟಗಾರರನ್ನು ಎದುರಾಳಿಗಳನ್ನಾಗಿ ನೋಡುವುದು ಇದೇ ಕೊನೆಯ ಬಾರಿ ಎಂದು ಫ್ಯಾನ್ಸ್‌ ಎಲ್ಲರೂ ಭಾವಿಸಿದ್ದು ಈ ಪಂದ್ಯ ಹೆಚ್ಚಿನ ಮನ್ನಣೆ ಪಡೆದುಕೊಂಡಿದೆ.

ಇನ್ನು ಈ ಪಂದ್ಯ ಆರ್‌ಸಿಬಿ ತವರಿನಂಗಳದಲ್ಲಿ ನಡೆಯಲಿದ್ದು, ನಿನ್ನೆ ಸಿಎಸ್‌ಕೆ ಪಾಳಯ ಚಿನ್ನಸ್ವಾಮಿಗೆ ಬಂದಿಳಿದಿದೆ. ಪಂದ್ಯ ಆರಂಭಕ್ಕೂ ಮುನ್ನಾ ಸಿಎಸ್‌ಕೆ ಮಾಜಿ ಕಪ್ತಾನ್‌ ಎಂ.ಎಸ್‌ ಧೋನಿ ಆರ್‌ಸಿಬಿ ಡ್ರೆಸ್ಸಿಂಗ್‌ ರೂಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಹೌದು, ಎಂಎಸ್‌ಡಿ, ಆರ್‌ಸಿಬಿ ಡ್ರೆಸ್ಸಿಂಗ್‌ ರೂಂನಲ್ಲಿ ಕಾಣಿಸಿಕೊಂಡಿದ್ದಾರೆ. ಅದು ಚಹಾ ಕುಡಿಯಲು. ಧೋನಿ ಅವರಿಗೆ ಚಹಾ ಮೇಲಿನ ಪ್ರೀತಿ ಎಲ್ಲರಿಗೂ ತಿಳಿದಿರುವ ವಿಷಯ. ಅದರಂತೆ ಅವರ ಸರಳತೆಯೂ ಎಲ್ಲರನ್ನು ಆಗಾಗ್ಗೆ ಗೆಲ್ಲುವುದಂತು ನಿಜ. ಆರ್‌ಸಿಬಿ ಡ್ರೆಸ್ಸಿಂಗ್‌ ರೂಂಗೆ ತೆರಳಿ ಅಲ್ಲಿನ ಸಿಬ್ಬಂದಿಗಳಿಂದ ಚಹಾ ಪಡೆದು ಧನ್ಯವಾದ ಹೇಳಿ ಧೋನಿ ವಾಪಸಾಗಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗಿದೆ.

ಈ ವಿಡಿಯೋವನ್ನು ಆರ್‌ಸಿಬಿ ತನ್ನ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದು, ಬೆಂಗಳೂರಿಗೆ ನಿಮಗೆ ಸ್ವಾಗತ ಮಹಿ ಭಯ್‌ ಎಂದು ಟ್ಯಾಗ್‌ ಲೈನ್‌ ನೀಡಿದ್ದಾರೆ.

ಇದನ್ನು ನೋಡಿದ ಅಭಿಮಾನಿಗಳು ಸಖತ್‌ ಖುಷ್‌ ಆಗಿದ್ದಾರೆ. ಇನ್ನು ವಿಕೆ-ಎಂಎಸ್‌ಡಿ ಅವರನ್ನು ಕೊನೆಯ ಬಾರಿ ನೋಡಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

7 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

20 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

15 hours ago