ಕ್ರೀಡೆ

IPL 2024: ಆರ್‌ಸಿಬಿ ಡ್ರೆಸ್ಸಿಂಗ್‌ ರೂಂನಲ್ಲಿ ಎಂಎಸ್‌ಡಿ ದರ್ಶನ: ಯಾಕೆ ಗೊತ್ತಾ?

ಬೆಂಗಳೂರು: ಇದೇ ಶನಿವಾರ(ಮೇ.18) ರಂದು ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ಹೈವೋಲ್ಟೇಜ್‌ ಕದನಕ್ಕೆ ವೇದಿಕೆ ಸಜ್ಜಾಗಿದೆ.

ಇತ್ತಂಡಗಳು ಪ್ಲೇಆಫ್‌ ತಲುಪಲು ನಿರ್ಣಯದ ಪಂದ್ಯ ಇದಾಗಿದ್ದು, ಗೆದ್ದ ತಂಡ ಪ್ಲೇ ಆಫ್‌ ತಲುಪಿದರೇ, ಸೋತ ತಂಡ ಈ ಆವೃತ್ತಿಯಿಂದ ಹೊರ ಬೀಳಲಿದೆ. ಈ ಸೀಸನ್‌ ನ ಎಲ್ಲಾ ಪಂದ್ಯಗಳಿಗಿಂತ ಈ ಪಂದ್ಯ ಅತಿಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡ ಪಂದ್ಯವಾಗಿದೆ.

ಭಾರತೀಯ ಕ್ರಿಕೆಟ್‌ ಕಂಡ ಅತ್ಯುತ್ತಮ ಆಟಗಾರರಾದ ಎಂ.ಎಸ್‌ ಧೋನಿ ಹಾಗೂ ವಿರಾಟ್‌ ಕೊಹ್ಲಿ ಅವರು ಈ ಪಂದ್ಯದ ಪ್ರಮುಖ ಆಕರ್ಷಣೆಗಾಗಿದ್ದಾರೆ. ಈ ಇಬ್ಬರು ಆಟಗಾರರನ್ನು ಎದುರಾಳಿಗಳನ್ನಾಗಿ ನೋಡುವುದು ಇದೇ ಕೊನೆಯ ಬಾರಿ ಎಂದು ಫ್ಯಾನ್ಸ್‌ ಎಲ್ಲರೂ ಭಾವಿಸಿದ್ದು ಈ ಪಂದ್ಯ ಹೆಚ್ಚಿನ ಮನ್ನಣೆ ಪಡೆದುಕೊಂಡಿದೆ.

ಇನ್ನು ಈ ಪಂದ್ಯ ಆರ್‌ಸಿಬಿ ತವರಿನಂಗಳದಲ್ಲಿ ನಡೆಯಲಿದ್ದು, ನಿನ್ನೆ ಸಿಎಸ್‌ಕೆ ಪಾಳಯ ಚಿನ್ನಸ್ವಾಮಿಗೆ ಬಂದಿಳಿದಿದೆ. ಪಂದ್ಯ ಆರಂಭಕ್ಕೂ ಮುನ್ನಾ ಸಿಎಸ್‌ಕೆ ಮಾಜಿ ಕಪ್ತಾನ್‌ ಎಂ.ಎಸ್‌ ಧೋನಿ ಆರ್‌ಸಿಬಿ ಡ್ರೆಸ್ಸಿಂಗ್‌ ರೂಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಹೌದು, ಎಂಎಸ್‌ಡಿ, ಆರ್‌ಸಿಬಿ ಡ್ರೆಸ್ಸಿಂಗ್‌ ರೂಂನಲ್ಲಿ ಕಾಣಿಸಿಕೊಂಡಿದ್ದಾರೆ. ಅದು ಚಹಾ ಕುಡಿಯಲು. ಧೋನಿ ಅವರಿಗೆ ಚಹಾ ಮೇಲಿನ ಪ್ರೀತಿ ಎಲ್ಲರಿಗೂ ತಿಳಿದಿರುವ ವಿಷಯ. ಅದರಂತೆ ಅವರ ಸರಳತೆಯೂ ಎಲ್ಲರನ್ನು ಆಗಾಗ್ಗೆ ಗೆಲ್ಲುವುದಂತು ನಿಜ. ಆರ್‌ಸಿಬಿ ಡ್ರೆಸ್ಸಿಂಗ್‌ ರೂಂಗೆ ತೆರಳಿ ಅಲ್ಲಿನ ಸಿಬ್ಬಂದಿಗಳಿಂದ ಚಹಾ ಪಡೆದು ಧನ್ಯವಾದ ಹೇಳಿ ಧೋನಿ ವಾಪಸಾಗಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗಿದೆ.

ಈ ವಿಡಿಯೋವನ್ನು ಆರ್‌ಸಿಬಿ ತನ್ನ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದು, ಬೆಂಗಳೂರಿಗೆ ನಿಮಗೆ ಸ್ವಾಗತ ಮಹಿ ಭಯ್‌ ಎಂದು ಟ್ಯಾಗ್‌ ಲೈನ್‌ ನೀಡಿದ್ದಾರೆ.

ಇದನ್ನು ನೋಡಿದ ಅಭಿಮಾನಿಗಳು ಸಖತ್‌ ಖುಷ್‌ ಆಗಿದ್ದಾರೆ. ಇನ್ನು ವಿಕೆ-ಎಂಎಸ್‌ಡಿ ಅವರನ್ನು ಕೊನೆಯ ಬಾರಿ ನೋಡಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

2 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

7 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

7 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

7 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

17 hours ago