ಮುಂಬೈ: ರೋಹಿತ್ ಶರ್ಮಾ, ಟಿಮ್ ಡೆವಿಡ್ ಹಾಗೂ ಶೆಫರ್ಡ್ ಅವರ ಭರ್ಜರಿ ಬ್ಯಾಟಿಂಗ್ ಸಹಾಯದಿಂದ ಐಪಿಎಲ್ ಟೂರ್ನಿಯ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 29 ರನ್ಗಳ ಅಂತರದ ಗೆಲುವು ದಾಖಲಿಸಿದೆ.
ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಣ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 234 ರನ್ ಪೇರಿಸಿತು. ಈ ಬೃಹತ್ ಮೊತ್ತ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 205 ರನ್ ಗಳಿಸಿ ಸೋಲೊಪ್ಪಿಕೊಂಡಿತು.
ಎಂಐ ಇನ್ನಿಂಗ್ಸ್: ಪರ ಆರಂಭಿಕರಾಗಿ ಬಂದ ರೋಹಿತ್ (49) ಮತ್ತು ಇಶಾನ್ ಕಿಶನ್ (42) ಭರ್ಜರಿ ಆರಂಭ ಒದಗಿಸಿ ಔಟಾದರು. ಬಳಿಕ ಬಂದ ನಾಯಕ ಹಾರ್ದಿಕ್ ಪಾಂಡ್ಯ (39), ಟಿಮ್ ಡೇವಿಡ್ (45) ರನ್ ಹೊಡೆದು ಗಮನ ಸೆಳೆದರು.
ಕೊನೆಯಲ್ಲಿ ಅಬ್ಬರಿಸಿದ ರೊಮಾರಿಯೋ ಶೇಫರ್ಡ್ ಕೇವಲ 10 ಎಸೆತಗಳಲ್ಲಿ 3 ಬೌಂಡರಿ, 4 ಸಿಕ್ಸರ್ ಸಹಿತ 39 ರನ್ ಬಾರಿಸಿದರು. ಕೊನೆಯ ಓವರ್(20 ಓವರ್) ಬೌಲ್ ಮಾಡಲು ಬಂದ ನೋಕಿಯಾಗೆ 4 ಸಿಕ್ಸರ್ 2 ಬೌಂಡರಿ ಸಹಿತ 32 ರನ್ ಚಚ್ಚಿದರು.
ಡೆಲ್ಲಿ ಪರ ಅಕ್ಷರ್ ಪಟೇಲ್ ಮತ್ತು ನೋಕಿಯಾ 2, ಖಲೀಲ್ ಅಹ್ಮದ್ ಒಂದು ವಿಕೆಟ್ ಕಬಳಿಸಿದರು.
ಡಿಸಿ ಇನ್ನಿಂಗ್ಸ್: ಈ ಬೃಹತ್ ಮೊತ್ತ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ಗೆ ಆರಂಭಿಕ ಆಘಾತ ಉಂಟಾಯಿತು. ವಾರ್ನರ್ 10 ರನ್ ಗಳಿಸಿ ಔಟಾದರು. ಪೃಥ್ವಿ ಶಾ ಹಾಗೂ ಪೋರೆಲ್ ಜೊತೆಗೂಡಿ 88 ರನ್ಗಳ ಜೊತೆಯಾಟ ನೀಡಿದರು ಈ ಇಬ್ಬರು ಕ್ರಮವಾಗಿ (66) ಮತ್ತು (41) ಗಳಿಸಿ ನಿರ್ಗಮಸಿದರು. ನಾಯಕ ಪಂಥ್ ಕೇವಲ ಒಂದು ರನ್ ಗಳಿಸಿ ನಿರಾಸೆ ಮೂಡಿಸಿದರು. ಅಕ್ಷರ್ ಪಟೇಲ್ (8) ಲಲಿತ್ ಯಾದವ್ (3), ಕುಶಾಗ್ರ (0), ರಿಚರ್ಡ್ಸನ್ (2) ರನ್ ಗಳಿಸಿದರು.
ಒಂದೆಡೆ ವಿಕೆಟ್ ಬೀಳುತ್ತಿದ್ದರು ಮತ್ತೊಂದೆಡೆ ಭರ್ಜರಿಯಾಗಿ ಬ್ಯಾಟ್ ಬೀಸಿದ ಸ್ಟಬ್ಸ್ 25 ಎಸೆತಗಳಲ್ಲಿ 3ಬೌಂಡರಿ, 7 ಸಿಕ್ಸರ್ ಸಹಿತ 71 ರನ್ ಕೆಲಹಾಕಿ ದಿಟ್ಟ ಹೋರಾಟ ನೀಡಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.
ಮುಂಬೈ ಪರ ಕಾಟ್ಜಿ 4, ಬುಮ್ರಾ 2 ಹಾಗೂ ಶೇಫರ್ಡ್ 1 ವಿಕೆಟ್ ಪಡೆದು ಗಮನ ಸೆಳೆದರು.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…