ಕ್ರೀಡೆ

IPL 2024: ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದ ಮುಂಬೈ

ಮುಂಬೈ: ರೋಹಿತ್‌ ಶರ್ಮಾ, ಟಿಮ್‌ ಡೆವಿಡ್‌ ಹಾಗೂ ಶೆಫರ್ಡ್‌ ಅವರ ಭರ್ಜರಿ ಬ್ಯಾಟಿಂಗ್‌ ಸಹಾಯದಿಂದ ಐಪಿಎಲ್‌ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 29 ರನ್‌ಗಳ ಅಂತರದ ಗೆಲುವು ದಾಖಲಿಸಿದೆ.

ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಣ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 234 ರನ್ ಪೇರಿಸಿತು. ಈ ಬೃಹತ್‌ ಮೊತ್ತ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್‌ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 205 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

ಎಂಐ ಇನ್ನಿಂಗ್ಸ್‌: ಪರ ಆರಂಭಿಕರಾಗಿ ಬಂದ ರೋಹಿತ್ (49) ಮತ್ತು ಇಶಾನ್‌ ಕಿಶನ್ (42) ಭರ್ಜರಿ ಆರಂಭ ಒದಗಿಸಿ ಔಟಾದರು. ಬಳಿಕ ಬಂದ ನಾಯಕ ಹಾರ್ದಿಕ್‌ ಪಾಂಡ್ಯ (39), ಟಿಮ್‌ ಡೇವಿಡ್ (45) ರನ್‌ ಹೊಡೆದು ಗಮನ ಸೆಳೆದರು.

ಕೊನೆಯಲ್ಲಿ ಅಬ್ಬರಿಸಿದ ರೊಮಾರಿಯೋ ಶೇಫರ್ಡ್‌ ಕೇವಲ 10 ಎಸೆತಗಳಲ್ಲಿ 3 ಬೌಂಡರಿ, 4 ಸಿಕ್ಸರ್‌ ಸಹಿತ 39 ರನ್‌ ಬಾರಿಸಿದರು. ಕೊನೆಯ ಓವರ್‌(20 ಓವರ್‌) ಬೌಲ್‌ ಮಾಡಲು ಬಂದ ನೋಕಿಯಾಗೆ 4 ಸಿಕ್ಸರ್‌ 2 ಬೌಂಡರಿ ಸಹಿತ 32 ರನ್‌ ಚಚ್ಚಿದರು.

ಡೆಲ್ಲಿ ಪರ ಅಕ್ಷರ್ ಪಟೇಲ್ ಮತ್ತು ನೋಕಿಯಾ 2, ಖಲೀಲ್‌ ಅಹ್ಮದ್‌ ಒಂದು ವಿಕೆಟ್ ಕಬಳಿಸಿದರು.

ಡಿಸಿ ಇನ್ನಿಂಗ್ಸ್‌: ಈ ಬೃಹತ್‌ ಮೊತ್ತ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್‌ಗೆ ಆರಂಭಿಕ ಆಘಾತ ಉಂಟಾಯಿತು. ವಾರ್ನರ್‌ 10 ರನ್‌ ಗಳಿಸಿ ಔಟಾದರು. ಪೃಥ್ವಿ ಶಾ ಹಾಗೂ ಪೋರೆಲ್‌ ಜೊತೆಗೂಡಿ 88 ರನ್‌ಗಳ ಜೊತೆಯಾಟ ನೀಡಿದರು ಈ ಇಬ್ಬರು ಕ್ರಮವಾಗಿ (66) ಮತ್ತು (41) ಗಳಿಸಿ ನಿರ್ಗಮಸಿದರು. ನಾಯಕ ಪಂಥ್‌ ಕೇವಲ ಒಂದು ರನ್‌ ಗಳಿಸಿ ನಿರಾಸೆ ಮೂಡಿಸಿದರು. ಅಕ್ಷರ್‌ ಪಟೇಲ್‌ (8) ಲಲಿತ್‌ ಯಾದವ್‌ (3), ಕುಶಾಗ್ರ (0), ರಿಚರ್ಡ್‌ಸನ್‌ (2) ರನ್‌ ಗಳಿಸಿದರು.

ಒಂದೆಡೆ ವಿಕೆಟ್‌ ಬೀಳುತ್ತಿದ್ದರು ಮತ್ತೊಂದೆಡೆ ಭರ್ಜರಿಯಾಗಿ ಬ್ಯಾಟ್‌ ಬೀಸಿದ ಸ್ಟಬ್ಸ್‌ 25 ಎಸೆತಗಳಲ್ಲಿ 3ಬೌಂಡರಿ, 7 ಸಿಕ್ಸರ್‌ ಸಹಿತ 71 ರನ್‌ ಕೆಲಹಾಕಿ ದಿಟ್ಟ ಹೋರಾಟ ನೀಡಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

ಮುಂಬೈ ಪರ ಕಾಟ್ಜಿ 4, ಬುಮ್ರಾ 2 ಹಾಗೂ ಶೇಫರ್ಡ್‌ 1 ವಿಕೆಟ್‌ ಪಡೆದು ಗಮನ ಸೆಳೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

8 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

9 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

9 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

9 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

9 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

9 hours ago