ಕ್ರೀಡೆ

IPL 2024: ರೋಚಕ ಹಣಾಹಣಿಯಲ್ಲಿ ಗೆದ್ದುಬೀಗಿದ ಡೆಲ್ಲಿ ಕ್ಯಾಪಿಟಲ್ಸ್‌

ನವದೆಹಲಿ: ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ ಸೀಸನ್‌ನ 64ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ, ಲಖನೌ ಸೂಪರ್‌ ಜೈಂಟ್ಸ್‌ ತಂಡದ ವಿರುದ್ಧ 19 ರನ್‌ಗಳ ಅಂತರದಿಂದ ಗೆದ್ದು ಬೀಗಿದೆ. ಈ ಪಂದ್ಯ ಸೋಲುವ ಮೂಲಕ ಲಖನೌ ಸೂಪರ್‌ ಜೈಂಟ್ಸ್‌ ತಂಡ ಭಾಗಶಃ ಟೂರ್ನಿಯಿಂದ ಹೊರ ಬಿದ್ದಂತೆಯೇ ಆಗಿದೆ.

ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 208 ರನ್‌ಗಳಿಸಿತು. ಈ ಬೃಹತ್‌ ಮೊತ್ತ ಬೆನ್ನತ್ತಿದ ಲಖನೌ ಸೂಪರ್‌ ಜೈಂಟ್ಸ್‌ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 189 ರನ್‌ ಗಳಿಸಿ, 19 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

ಡೆಲ್ಲಿ ಇನ್ನಿಂಗ್ಸ್‌: ಟೂರ್ನಿಯ ಕೊನೆಯ ಪಂದ್ಯ ಆಡುತ್ತಿರುವ ಡೆಲ್ಲಿ ತವರಿನಂಗಳದಲ್ಲಿ ಉತ್ತಮ ಪ್ರದರ್ಶನ ತೋರಿತು. ಆರಂಭಿಕ ಜೇಕ್ ಪ್ರೇಸರ್ ಮೆಕ್ ಗಾರ್ಕ್ ಶೂನ್ಯಕ್ಕೆ ಔಟಾದರು. ಬಳಿಕ ಜತೆಯಾದ ಅಭಿಷೇಕ್‌ ಪೋರೆಲ್‌ ಹಾಗೂ ಶಾಯ್‌ ಹೋಪ್‌ ತಂಡಕ್ಕೆ ಚೇತರಿಕೆ ನೀಡಿದರು. ಈ ಜೋಡಿ ತಂಡಕ್ಕೆ 90 ರನ್‌ಗಳ ಕೊಡುಗೆ ನೀಡಿತು. ಅಭಿಷೇಕ್‌ ಪೋರೆಲ್‌ 58(33), ಶಾಯ್‌ ಹೋಪ್‌ 38(27), ನಾಯಕ ಪಂತ್‌ 33(23) ರನ್‌ ಗಳಿಸಿದರು.

ಕೊನೆಯಲ್ಲಿ ಔಟಾಗದೇ ಅಬ್ಬರಿಸಿದ ಟ್ರಿಸ್ಟನ್‌ ಸ್ಟಬ್ಸ್‌ 25 ಎಸೆತ ಎದುರಿಸಿ 3ಬೌಂಡರಿ ಹಾಗೂ 4 ಸಿಕ್ಸರ್‌ ಸಹಿತ 57ರನ್‌ ಬಾರಿಸಿದರು. ಇವರಿಗೆ ಅಕ್ಷರ್‌ ಪಟೇಲ್‌ 14(10) ರನ್‌ ಗಳಿಸಿ ಸಾಥ್‌ ನೀಡಿದರು.

ಲಖನೌ ಪರ ನವೀನ್‌ ಉಲ್‌-ಹಕ್‌ 2, ಹರ್ಷದ್‌ ಖಾನ್‌ ಹಾಗೂ ರವಿ ಬಿಷ್ಣೋಯಿ ತಲಾ ಒಂದೊಂದು ವಿಕೆಟ್‌ ಪಡೆದರು.

ಲಖನೌ ಇನ್ನಿಂಗ್ಸ್‌: ಈ ಬೃಹತ್‌ ಮೊತ್ತ ಬೆನ್ನತ್ತಿದ ಲಖನೌ ತಂಡಕ್ಕೆ ಉತ್ತಮ ಆರಂಭ ಒದಗಿಸುವಲ್ಲಿ ಆರಂಭಿಕರಿಬ್ಬರು ಕೈಕೊಟ್ಟರು. ನಾಯಕ ಕೆ.ಎಲ್‌ ರಾಹುಲ್‌ 5(3), ಡಿಕಾಕ್‌ 12(8)ರನ್‌ ಗಳಿಸಿ ಬೇಗನೇ ನಿರ್ಗಮಿಸಿದರು. ನಿಕೋಲಸ್‌ ಪೂರನ್‌ ಆಟ ತಂಡಕ್ಕೆ ಚೇತರಿಕೆ ನೀಡಿತು. ನಿಕೊಲಸ್‌ ಪೂರನ್‌ 27ಎಸೆತಗಳಲ್ಲಿ 6ಬೌಂಡರಿ ಹಾಗೂ 4ಸಿಕ್ಸರ್‌ ಸಹಿತ 61ರನ್‌ ಗಳಿಸಿದರು.

ಉಳಿದಂತೆ ಸ್ಟೋಯ್ನಿಸ್‌ 5(7), ದೀಪಕ್‌ ಹೂಡಾ ಶೂನ್ಯ, ಆಯೂಷ್‌ ಬದೋನಿ 6(9), ಕೃನಾಲ್‌ ಪಾಂಡ್ಯ 18(18), ಯದುವೀರ್‌ ಸಿಂಗ್‌ 14(7), ರವಿ ಬಿಷ್ಣೋಯಿ 2(2) ರನ್‌ಗಳಿಸಿ ಮಧ್ಯಮ ಕ್ರಮಾಂಕದಲ್ಲಿ ತಂಡ ರನ್‌ ಗಳಿಸುವಲ್ಲಿ ಪರದಾಡಿತು.

ಔಟಾಗದೇ ಕೊನೆಯಲ್ಲಿ ಅಬ್ಬರಿಸಿದ ಅರ್ಷದ್‌ ಸಿಂಗ್‌ ಕೇವಲ 33ಎಸೆತಗಳನ್ನು ಎದುರಿಸಿ 3 ಬೌಂಡರಿ ಮತ್ತು 5 ಸಿಕ್ಸರ್‌ ಸಹಿತ 58 ರನ್‌ ಗಳಿಸಿ ಐಪಿಎಲ್‌ ಚೊಚ್ಚಲ ಅರ್ಧಶತಕ ದಾಖಲಿಸಿದರು. ಆಗಿದ್ದರೂ ತಂಡವನ್ನು ಗೆಲ್ಲಿಸಿಕೊಡಲು ಸಾಧ್ಯವಾಗಲಿಲ್ಲ. ಇವರಿಗೆ ಜತೆಯಾಗಿ ನವೀನ್‌ ಉಲ್‌-ಹಕ್‌ 2(4) ರನ್‌ ಗಳಿಸಿದರು.

ಡೆಲ್ಲಿ ಪರ ಇಶಾಂತ್‌ ಶರ್ಮಾ 3, ಖಲೀಲ್‌ ಅಹ್ಮದ್‌, ಅಕ್ಷರ್‌ ಪಟೇಲ್‌, ಮುಖೇಶ್‌ ಕುಮಾರ್‌, ಕುಲ್ದೀಪ್‌ ಯಾದವ್‌ ಹಾಗೂ ಸ್ಟಬ್ಸ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

40 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

50 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

57 mins ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago