ನವದೆಹಲಿ: ಇಲ್ಲಿನ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಸೀಸನ್ನ 64ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಲಖನೌ ಸೂಪರ್ ಜೈಂಟ್ಸ್ ತಂಡದ ವಿರುದ್ಧ 19 ರನ್ಗಳ ಅಂತರದಿಂದ ಗೆದ್ದು ಬೀಗಿದೆ. ಈ ಪಂದ್ಯ ಸೋಲುವ ಮೂಲಕ ಲಖನೌ ಸೂಪರ್ ಜೈಂಟ್ಸ್ ತಂಡ ಭಾಗಶಃ ಟೂರ್ನಿಯಿಂದ ಹೊರ ಬಿದ್ದಂತೆಯೇ ಆಗಿದೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 208 ರನ್ಗಳಿಸಿತು. ಈ ಬೃಹತ್ ಮೊತ್ತ ಬೆನ್ನತ್ತಿದ ಲಖನೌ ಸೂಪರ್ ಜೈಂಟ್ಸ್ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 189 ರನ್ ಗಳಿಸಿ, 19 ರನ್ಗಳ ಅಂತರದಿಂದ ಸೋಲೊಪ್ಪಿಕೊಂಡಿತು.
ಡೆಲ್ಲಿ ಇನ್ನಿಂಗ್ಸ್: ಟೂರ್ನಿಯ ಕೊನೆಯ ಪಂದ್ಯ ಆಡುತ್ತಿರುವ ಡೆಲ್ಲಿ ತವರಿನಂಗಳದಲ್ಲಿ ಉತ್ತಮ ಪ್ರದರ್ಶನ ತೋರಿತು. ಆರಂಭಿಕ ಜೇಕ್ ಪ್ರೇಸರ್ ಮೆಕ್ ಗಾರ್ಕ್ ಶೂನ್ಯಕ್ಕೆ ಔಟಾದರು. ಬಳಿಕ ಜತೆಯಾದ ಅಭಿಷೇಕ್ ಪೋರೆಲ್ ಹಾಗೂ ಶಾಯ್ ಹೋಪ್ ತಂಡಕ್ಕೆ ಚೇತರಿಕೆ ನೀಡಿದರು. ಈ ಜೋಡಿ ತಂಡಕ್ಕೆ 90 ರನ್ಗಳ ಕೊಡುಗೆ ನೀಡಿತು. ಅಭಿಷೇಕ್ ಪೋರೆಲ್ 58(33), ಶಾಯ್ ಹೋಪ್ 38(27), ನಾಯಕ ಪಂತ್ 33(23) ರನ್ ಗಳಿಸಿದರು.
ಕೊನೆಯಲ್ಲಿ ಔಟಾಗದೇ ಅಬ್ಬರಿಸಿದ ಟ್ರಿಸ್ಟನ್ ಸ್ಟಬ್ಸ್ 25 ಎಸೆತ ಎದುರಿಸಿ 3ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 57ರನ್ ಬಾರಿಸಿದರು. ಇವರಿಗೆ ಅಕ್ಷರ್ ಪಟೇಲ್ 14(10) ರನ್ ಗಳಿಸಿ ಸಾಥ್ ನೀಡಿದರು.
ಲಖನೌ ಪರ ನವೀನ್ ಉಲ್-ಹಕ್ 2, ಹರ್ಷದ್ ಖಾನ್ ಹಾಗೂ ರವಿ ಬಿಷ್ಣೋಯಿ ತಲಾ ಒಂದೊಂದು ವಿಕೆಟ್ ಪಡೆದರು.
ಲಖನೌ ಇನ್ನಿಂಗ್ಸ್: ಈ ಬೃಹತ್ ಮೊತ್ತ ಬೆನ್ನತ್ತಿದ ಲಖನೌ ತಂಡಕ್ಕೆ ಉತ್ತಮ ಆರಂಭ ಒದಗಿಸುವಲ್ಲಿ ಆರಂಭಿಕರಿಬ್ಬರು ಕೈಕೊಟ್ಟರು. ನಾಯಕ ಕೆ.ಎಲ್ ರಾಹುಲ್ 5(3), ಡಿಕಾಕ್ 12(8)ರನ್ ಗಳಿಸಿ ಬೇಗನೇ ನಿರ್ಗಮಿಸಿದರು. ನಿಕೋಲಸ್ ಪೂರನ್ ಆಟ ತಂಡಕ್ಕೆ ಚೇತರಿಕೆ ನೀಡಿತು. ನಿಕೊಲಸ್ ಪೂರನ್ 27ಎಸೆತಗಳಲ್ಲಿ 6ಬೌಂಡರಿ ಹಾಗೂ 4ಸಿಕ್ಸರ್ ಸಹಿತ 61ರನ್ ಗಳಿಸಿದರು.
ಉಳಿದಂತೆ ಸ್ಟೋಯ್ನಿಸ್ 5(7), ದೀಪಕ್ ಹೂಡಾ ಶೂನ್ಯ, ಆಯೂಷ್ ಬದೋನಿ 6(9), ಕೃನಾಲ್ ಪಾಂಡ್ಯ 18(18), ಯದುವೀರ್ ಸಿಂಗ್ 14(7), ರವಿ ಬಿಷ್ಣೋಯಿ 2(2) ರನ್ಗಳಿಸಿ ಮಧ್ಯಮ ಕ್ರಮಾಂಕದಲ್ಲಿ ತಂಡ ರನ್ ಗಳಿಸುವಲ್ಲಿ ಪರದಾಡಿತು.
ಔಟಾಗದೇ ಕೊನೆಯಲ್ಲಿ ಅಬ್ಬರಿಸಿದ ಅರ್ಷದ್ ಸಿಂಗ್ ಕೇವಲ 33ಎಸೆತಗಳನ್ನು ಎದುರಿಸಿ 3 ಬೌಂಡರಿ ಮತ್ತು 5 ಸಿಕ್ಸರ್ ಸಹಿತ 58 ರನ್ ಗಳಿಸಿ ಐಪಿಎಲ್ ಚೊಚ್ಚಲ ಅರ್ಧಶತಕ ದಾಖಲಿಸಿದರು. ಆಗಿದ್ದರೂ ತಂಡವನ್ನು ಗೆಲ್ಲಿಸಿಕೊಡಲು ಸಾಧ್ಯವಾಗಲಿಲ್ಲ. ಇವರಿಗೆ ಜತೆಯಾಗಿ ನವೀನ್ ಉಲ್-ಹಕ್ 2(4) ರನ್ ಗಳಿಸಿದರು.
ಡೆಲ್ಲಿ ಪರ ಇಶಾಂತ್ ಶರ್ಮಾ 3, ಖಲೀಲ್ ಅಹ್ಮದ್, ಅಕ್ಷರ್ ಪಟೇಲ್, ಮುಖೇಶ್ ಕುಮಾರ್, ಕುಲ್ದೀಪ್ ಯಾದವ್ ಹಾಗೂ ಸ್ಟಬ್ಸ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…
ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…